Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ದಣಿವಿಲ್ಲದ ಹೋರಾಟಗಾರ ದೊರೆಸ್ವಾಮಿ...

ದಣಿವಿಲ್ಲದ ಹೋರಾಟಗಾರ ದೊರೆಸ್ವಾಮಿ ಕುರಿತಂತೆ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ3 Sep 2017 6:35 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಣಿವಿಲ್ಲದ ಹೋರಾಟಗಾರ ದೊರೆಸ್ವಾಮಿ ಕುರಿತಂತೆ

ನಾಡಿನಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿವಿಧ ಜನಪರ ಚಳವಳಿಯಲ್ಲಿ ಮುಂಚೂಣಿಯಲ್ಲಿ ನಾವು ನೋಡುತ್ತಿರುವುದು ಈ ನಾಡಿನ ಹಿರಿಯ ಜೀವ ಎಚ್. ಎಸ್. ದೊರೆಸ್ವಾಮಿ. ಯಾವುದೇ ಯುವ ಜೀವಗಳನ್ನು ನಾಚಿಸುವಂತೆ, ಬೇರೆ ಬೇರೆ ಸಾಮಾಜಿಕ ಚಳವಳಿಗಳಲ್ಲಿ ಇನ್ನೂ ತೊಡಗಿಸಿಕೊಂಡಿದ್ದಾರೆ ದೊರೆಸ್ವಾಮಿ. ಸ್ವಾತಂತ್ರ ಹೋರಾಟದಲ್ಲಿ ಪಾಲುಗೊಂಡಿರುವ ಈ ಜೀವದ ಪಾಲಿಗೆ ನಾಡಿನ ಸ್ವಾತಂತ್ರ ಇನ್ನೂ ಪೂರ್ಣಗೊಂಡಿಲ್ಲ. ಆ ಕಾರಣಕ್ಕಾಗಿ ಭೂಮಿಗಾಗಿ, ಆದಿವಾಸಿಗಳಿಗಾಗಿ ಸದಾ ಮಿಡಿಯುತ್ತಾ, ಎಲ್ಲ ಹೋರಾಟಗಳಲ್ಲೂ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರ ಹೋರಾಟ, ಬದುಕಿನ ಕುರಿತಂತೆ ಕೆ. ಎಸ್. ನಾಗರಾಜ್ ಅವರು ‘ದಣಿವಿಲ್ಲದ ಹೋರಾಟಗಾರ-ಎಚ್. ಎಸ್. ದೊರೆಸ್ವಾಮಿ’ ಕೃತಿಯನ್ನು ಬರೆದಿದ್ದಾರೆ. 1918ರ ಎಪ್ರಿಲ್ 10ರಂದು ಬೆಂಗಳೂರಿನಲ್ಲಿ ಹಾರೋಹಳ್ಳಿ ಶ್ರೀನಿವಾಸಯ್ಯರ್ ದೊರೆಸ್ವಾಮಿ ಜನಿಸಿದ್ದಾರೆ. ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಜೈಲುವಾಸವನ್ನು ಇವರು ಅನುಭವಿಸಿದ್ದಾರೆ. 1942ರ ಕ್ವಿಟ್ ಇಂಡಿಯಾ ಚಳವಳಿಯಿಂದ ಆರಂಭಿಸಿದ ಹೋರಾಟಕ್ಕೆ ಇನ್ನೂ ವಿಶ್ರಾಂತಿ ಸಿಕ್ಕಿಲ್ಲ ಎನ್ನುವುದನ್ನು ಈ ಕೃತಿ ಸರಳವಾಗಿ ಸಂಕ್ಷಿಪ್ತವಾಗಿ ಹೇಳುತ್ತದೆ. ವಿನೋಬಾ ಭಾವೆಯವರ ಭೂ ದಾನ ಚಳವಳಿ, ಕರ್ನಾಟಕ ಏಕೀಕರಣ ಚಳವಳಿ, ಕನ್ನಡ ಮಾತೃಭಾಷೆಯಾಗಬೇಕು ಎನ್ನುವ ನಿಟ್ಟಿನಲ್ಲಿ ನಡೆದ ವಿವಿಧ ಚಳವಳಿಗಳಲ್ಲಿ ಇವರು ಗುರುತಿಸಿಕೊಂಡಿದ್ದಾರೆ. ಆದುದರಿಂದಲೇ, ದೊರೆಸ್ವಾಮಿಯ ಹೋರಾಟವನ್ನು ಸ್ವಾತಂತ್ರ ಪೂರ್ವ ಮತ್ತು ಆನಂತರ ಎಂದು ಗುರುತಿಸಬಹುದು. ಬಹುಶಃ ಸ್ವಾತಂತ್ರ ಪೂರ್ವದ ಚಳವಳಿಯಲ್ಲಿ ಗುರುತಿಸಿಕೊಂಡವರ ಕುರಿತಂತೆ ನಮಗೊಂದು ರೋಚಕ ಕಲ್ಪನೆಯಿರುತ್ತದೆ ಮತ್ತು ಅದನ್ನು ನಾವು ಸಿದ್ಧ ಮನಸ್ಸಿನಿಂದ ಸ್ವಾಗತಿಸುತ್ತೇವೆ. ಆದರೆ ಅದೇ ವ್ಯಕ್ತಿ ಸದ್ಯದ ಸಂದರ್ಭದ ರಾಜಕೀಯ, ಸಾಮಾಜಿಕ ಹೋರಾಟಗಳಲ್ಲಿ ಗುರುತಿಸಿಕೊಂಡಾಗ ಅಷ್ಟೇ ಸಹಜವಾಗಿ ನಾವು ಸ್ವೀಕರಿಸುವುದಿಲ್ಲ. ಆದುದರಿಂದಲೇ, ಸ್ವಾತಂತ್ರಾಪೂರ್ವದ ದೊರೆಸ್ವಾಮಿಗಿಂತ ಆನಂತರದ ದೊರೆಸ್ವಾಮಿಯವರ ವ್ಯಕ್ತಿತ್ವ ಇಷ್ಟವಾಗುತ್ತದೆ. ಇತ್ತೀಚೆಗೆ ನಡೆದ ಅಣ್ಣಾ ಹಝಾರೆಯವರ ಹೋರಾಟದಲ್ಲೂ ಕರ್ನಾಟಕದಿಂದ ದೊರೆಸ್ವಾಮಿ ಗುರುತಿಸಿಕೊಂಡಿದ್ದರು. ತೀರಾ ನಿನ್ನೆ ಮೊನ್ನೆಯಂತೆ ನಡೆದಿರುವ, ಭೂಹಕ್ಕಿನ ಹೋರಾಟಗಳಲ್ಲೂ ಇವರ ಪಾತ್ರ ಅಪರಿಮಿತವಾದುದು. ಇಲ್ಲಿ ದೊರೆಸ್ವಾಮಿಯವರ ವಿವಿಧ ಹಂತದ ಬದುಕು, ಹೋರಾಟವನ್ನು ಸರಳ ಭಾಷೆಯಲ್ಲಿ ನಾಗರಾಜ್ ನಿರೂಪಿಸಿದ್ದಾರೆ.

ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ಹೊರತಂದಿರುವ ಈ ಕೃತಿಯ ಮುಖಬೆಲೆ 100 ರೂಪಾಯಿ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X