Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿ.ದೇವರಾಜ್ ಅರಸ್ ಅವರ ದಕ್ಷ ರಾಜಕಾರಣ...

ಡಿ.ದೇವರಾಜ್ ಅರಸ್ ಅವರ ದಕ್ಷ ರಾಜಕಾರಣ ಇಂದು ಕಾಣಲು ಸಾಧ್ಯವಾಗುತ್ತಿಲ್ಲ: ಬಿ.ಬಿ.ನಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ4 Sept 2017 6:08 PM IST
share
ಡಿ.ದೇವರಾಜ್ ಅರಸ್ ಅವರ ದಕ್ಷ ರಾಜಕಾರಣ ಇಂದು ಕಾಣಲು ಸಾಧ್ಯವಾಗುತ್ತಿಲ್ಲ: ಬಿ.ಬಿ.ನಿಂಗಯ್ಯ

ಮೂಡಿಗೆರೆ, ಸೆ.4: ಹಸುಗಳ ಹಾಲು ಕರೆದು ಮಾರಾಟ ಮಾಡಿ ರಾಜಕಾರಣ ಮಾಡಿದ ಸಾಮಾಜಿಕ ಪರಿವರ್ತನೆ ಹರಿಕಾರ ಡಿ.ದೇವರಾಜ್ ಅರಸ್ ಅವರಿಗೆ ಸರಿಸಾಟಿಯಾದ ಮತ್ತೊಂದು ರಾಜಕಾರಣ ಇಂದಿನವರೆಗೂ ಹುಟ್ಟಲಿಲ್ಲ ಎಂದು ಶಾಸಕ ಬಿ.ಬಿ.ನಿಂಗಯ್ಯ ಅಭಿಪ್ರಾಯಪಟ್ಟರು.

ಅವರು ಸೋಮವಾರ ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ದಿವಂಗತ ಡಿ.ದೇವರಾಜ್ ಅರಸ್ ಅವರ 102ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದಕ್ಷ ಪ್ರಾಮಾಣಿಕರಾಗಿದ್ದ ಅರಸ್ ಬಳಿ ಬಡವನೊಬ್ಬ ಸರಕಾರಿ ಕೆಲಸ ಕೇಳಿಕೊಂಡು ಹೋದಾಗ ಸಿಗರೇಟ್ ಪ್ಯಾಕ್‍ನ ಲೇಬಲ್ ಮೇಲೆ ಸರಕಾರ ಕೆಲಸದ ಆದೇಶವನ್ನೇ ಬರೆದು ಕೊಟ್ಟಿದ್ದರು. ಇಂತಹ ಮಹಾನ್ ನಾಯಕನನ್ನು ರಾಜ್ಯ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕೊಂಡಾಡಿದರು.

1978 ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ದಿವಂಗತ ಇಂದಿರಾಗಾಂಧಿ ಅವರ ಎದುರು ಚುನಾವಣೆ ಸ್ಪರ್ಧಿಸಿದ್ದರು. ಆಗ 71 ಮಂದಿ ಪ್ರತಿಸ್ಪರ್ಧಿಯಾಗಿದ್ದರು. ಅರಸು ಅವರು ಸ್ಪರ್ಧಿಸಿದ್ದು, ಸೋಲು ಗೆಲುವು ಎಂಬ ಲೆಕ್ಕಾಚಾರಕ್ಕೆ ಆಗಿರಲಿಲ್ಲ. ತಮ್ಮ ಶುದ್ಧ ಪ್ರಾಮಾಣಿಕ ಶೈಲಿಯಿಂದ ಸೋಲನ್ನು ಅನುಭವಿಸಬೇಕಾಯಿತು. ಆದರೂ ದೃತಿಗೆಡದ ಅವರು, ಜಿಲ್ಲೆಯಲ್ಲಿ ಸ್ಪರ್ಧಿಸಿದ್ದೇ ಸಾಧನೆ ಎಂದುಕೊಂಡಿದ್ದರು ಎಂದು ತಿಳಿಸಿದರು.

ತಾಪಂ ಅಧಕ್ಷ ಕೆ.ಸಿ.ರತನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸರಕಾರಿ ಹಾಸ್ಟೆಲ್, ವಿದ್ಯಾರ್ಥಿ ವೇತನ ಮತ್ತಿತರ ಸವಲತ್ತುಗಳನ್ನು ದೇವರಾಜ್ ಅರಸ್ ಅವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು. ಅವರ ಸಾಮಾಜಿಕ ಕಳಕಳಿ ಇಂದಿಗೂ ಶಾಶ್ವತವಾಗಿ ಜೀವಂತವಾಗಿದೆ. ಅವರು ಎಂದೂ ಶ್ರೀಮಂತರ ಪರ ನಿಂತವರಲ್ಲ. ಅವರ ಹೃದಯ ಶ್ರೀಮಂತಿಕೆಯನ್ನು ಮರೆ ಮಾಚಲು ಸಾಧ್ಯವೇ ಇಲ್ಲ ಎಂದು ಕೊಂಡಾಡಿದರು.

ಈ ವೇಳೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಮತ್ತು ಪ್ರೋತ್ಸಾಹ ಧನ ನೀಡಲಾಯಿತು. ನಿವೇಶನ ರಹಿತ ಫಲಾನುಭವಿಗಳಿಗೆ ತಾಪಂ ನಿಂದ ಹಕ್ಕು ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಂದಕುಮಾರ್, ತಾಪಂ ಇ.ಓ.ತಾರನಾಥ್, ಹಿಂದುಳಿದ ವರ್ಗಗಳ ಇಲಾಖೆ ವಿಸ್ತರಣಾ ಅಧಿಕಾರಿ ರಾಜೇಶ್, ಕಿರುಗುಂದ ಗ್ರಾಪಂ ಉಪಾಧ್ಯಕ್ಷ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X