Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಬಸ್ ನಿಲ್ದಾಣ ಸ್ಥಳಾಂತರಿಸಿ, ಸ್ಕೈ ವಾಕ್...

'ಬಸ್ ನಿಲ್ದಾಣ ಸ್ಥಳಾಂತರಿಸಿ, ಸ್ಕೈ ವಾಕ್ ನಿರ್ಮಿಸಿ': ಬಸ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ. ರುದ್ರೇಶ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ4 Sept 2017 7:37 PM IST
share
ಬಸ್ ನಿಲ್ದಾಣ ಸ್ಥಳಾಂತರಿಸಿ, ಸ್ಕೈ ವಾಕ್ ನಿರ್ಮಿಸಿ: ಬಸ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ. ರುದ್ರೇಶ್ ಸಲಹೆ

ಶಿವಮೊಗ್ಗ, ಸೆ. 4: 'ನಗರದ ಉಷಾ ನರ್ಸಿಂಗ್ ಹೋಂ ವೃತ್ತದ ಬಳಿ ವಿನೋಬನಗರಕ್ಕೆ ತೆರಳುವ ರಸ್ತೆಯ ಎಡ ಬದಿಯಲ್ಲಿರುವ ಬಸ್ ನಿಲ್ದಾಣ ಸ್ಥಳಾಂತರಕ್ಕೆ ತತ್‍ಕ್ಷಣವೇ ಕ್ರಮಕೈಗೊಳ್ಳಬೇಕು. ಅತ್ಯದಿಕ ಜನ, ವಾಹನ ದಟ್ಟಣೆಯಿರುವ ಗೋಪಿ ವೃತ್ತದಲ್ಲಿ ಸ್ಕೈ ವಾಕ್ ನಿರ್ಮಾಣ ಮಾಡಬೇಕೆಂದು' ಸಿಟ ಬಸ್ ಮಾಲೀಕರ ಸಂಘದ ಗೌರವಾಧ್ಯಕ್ಷ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಖಜಾಂಚಿ ಪಿ. ರುದ್ರೇಶ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಸೋಮವಾರ ನಗರದ ಡಿ.ಸಿ. ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಸಲಹೆ ನೀಡಿದ್ದಾರೆ.

ಉಷಾ ನರ್ಸಿಂಗ್ ಹೋಂ ವೃತ್ತದ ಸಮೀಪವೇ ಬಸ್ ನಿಲ್ದಾಣವಿದೆ. ಇಲ್ಲಿ ಬಸ್‍ಗಳು ನಿಲುಗಡೆ ಮಾಡುವುದರಿಂದ ತೀವ್ರ ಸ್ವರೂಪದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಜೊತೆಗೆ ಸಣ್ಣಪುಟ್ಟ ಅಪಘಾತಗಳಿಗೂ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಸ್ ನಿಲ್ದಾಣವನ್ನು ಕೊಂಚ ದೂರಕ್ಕೆ ಸ್ಥಳಾಂತರಿಸಿದರೆ ಸುಗಮ ವಾಹನ ಸಂಚಾರಕ್ಕೆ ಅವಕಾಶವಾಗಲಿದೆ ಎಂದು ತಿಳಿಸಿದ್ದಾರೆ. 

ಗೋಪಿ ವೃತ್ತದಲ್ಲಿ ಜನ ಹಾಗೂ ವಾಹನ ಸಂಚಾರ ದಟ್ಟಣೆ ಹೆಚ್ಚಿದೆ. ಸುತ್ತಮುತ್ತಲು ಶಾಲಾ - ಕಾಲೇಜುಗಳಿರುವುದರಿಂದ ವಿದ್ಯಾರ್ಥಿಗಳ ಓಡಾಟವಿದೆ. ಈ ಹಿನ್ನೆಲೆಯಲ್ಲಿ ಈ ವೃತ್ತದಲ್ಲಿ ಸ್ಕೈ ವಾಕ್ ನಿರ್ಮಾಣ ಮಾಡಿದರೆ ಪಾದಚಾರಿಗಳಿಗೆ ಸಾಕಷ್ಟು ಅನುಕೂಲವಾಲಿಗದೆ ಎಂದರು. 
ಪ್ರತಿ ಮಂಗಳವಾರದಂದು ಸಂತೆ ನಡೆಯುವ ಮಿಳಘಟ್ಟ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಿಗಳು ಅಂಗಡಿ - ಮುಂಗಟ್ಟು ಹಾಕಿಕೊಳ್ಳುತ್ತಾರೆ. ಇದರಿಂದ ಸುಗಮ ವಾಹನ ಸಂಚಾರದ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ರಸ್ತೆಯ ಬದಿಯಲ್ಲಿ ಮಾತ್ರ ಅಂಗಡಿ - ಮುಂಗಟ್ಟು ಹಾಕಲು ಅವಕಾಶ ನೀಡಿ, ಮತ್ತೊಂದು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಇದೇ ಸಂದರ್ಭದಲ್ಲಿ ಪಿ.ರುದ್ರೇಶ್ ಸಲಹೆ ನೀಡಿದ್ದಾರೆ. 

ಪ್ರವಾಸಿ ಮೋಟಾರು ವಾಹನ ಹಾಗೂ ಚಾಲಕರ ಸಂಘದ ಅಧ್ಯಕ್ಷ ಮಹಮ್ಮದ್ ಆರೀಫ್‍ರವರು ಮಾತನಾಡಿ, ನಗರದ ಓ.ಟಿ. ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಿದ್ದು ವಾಹನಗಳ ನಿಲುಗಡೆ ಮಾಡುವುದೆ ಸಮಸ್ಯೆಯಾಗಿದೆ. ರಸ್ತೆಗೆ ಹೊಂದಿಕೊಂಡಂತೆ ಪಲ್ಲವಿ ಹೋಟೆಲ್ ಬಳಿಯಿರುವ ಕನ್ಸರ್‍ವೆನ್ಸಿ ಅಭಿವೃದ್ದಿಗೊಳಿಸಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು. 

ಹೋರಾಟಗಾರ ಅಶೋಕ್ ಯಾದವ್‍ರವರು ಮಾತನಾಡಿ, ನಗರದ ಡಿವೈಡರ್‍ಗಳ ಮಧ್ಯದಲ್ಲಿ ಅವೈಜ್ಞಾನಿಕವಾಗಿ ಫ್ಲೆಕ್ಸ್ ಅಳವಡಿಕೆ ಮಾಡುತ್ತಿರುವುದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಅಪಘಾತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಡಿವೈಡರ್‍ಗಳ ಮಧ್ಯೆ ಫ್ಲೆಕ್ಸ್ ಅಳವಡಿಕೆ ಮಾಡದಂತೆ ಆದೇಶ ಹೊರಡಿಸಬೇಕು ಎಂದು ಸಲಹೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X