Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಜಾಗತೀಕರಣ ದಲಿತರ ಮೇಲೆ ಬೀರಿದ ಪರಿಣಾಮ

ಜಾಗತೀಕರಣ ದಲಿತರ ಮೇಲೆ ಬೀರಿದ ಪರಿಣಾಮ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ5 Sept 2017 12:12 AM IST
share
ಜಾಗತೀಕರಣ ದಲಿತರ ಮೇಲೆ ಬೀರಿದ ಪರಿಣಾಮ

ಜಾಗತೀಕರಣ ಮತ್ತು ಉದಾರೀಕರಣ ತೆರೆದುಕೊಂಡ ಸಂದರ್ಭದಲ್ಲಿ, ಇದರಿಂದ ದಲಿತರಿಗೆ ಹೆಚ್ಚು ಪ್ರಯೋಜನವಾಗುತ್ತದೆ ಎಂದು ಕೆಲವು ದಲಿತ ನಾಯಕರುಗಳೇ ವಾದಿಸಿದ್ದರು. ಜಾಗತೀಕರಣದಿಂದ ಸಂಭವಿಸುವ ದುರಂತಗಳಿಗೂ ದಲಿತ ಸಮುದಾಯಕ್ಕೂ ಸಂಬಂಧವಿಲ್ಲ ಎಂಬ ಅರ್ಥದಲ್ಲಿ ಅವರು ಮಾತನಾಡುತ್ತಿದ್ದರು. ಈ ನಿಟ್ಟಿನಲ್ಲಿ ಜಾಗತೀಕರಣ ಹೇಗೆ ದಲಿತರ ಬದುಕಿನ ಮೇಲೆ ತನ್ನ ಪರಿಣಾಮವನ್ನು ಬೀರಿದೆ ಎನ್ನುವುದನ್ನು ಡಾ. ಆನಂದ್ ತೇಲ್ತುಂಬ್ಡೆ ಅವರು ‘ಜಾಗತೀಕರಣ ಮತ್ತು ದಲಿತರು’ ಕೃತಿಯಲ್ಲಿ ಚರ್ಚಿಸಿದ್ದಾರೆ.

ನವ ಉದಾರವಾದ ನೀತಿಯೂ ಸಹ ತನ್ನ ಆಕ್ರಮಣಕಾರಿ ಪ್ರವೃತ್ತಿಯನ್ನು ಬದಿಗಿಟ್ಟು, ನೊಂದ ಜನಸಮುದಾಯಗಳ ಮನಗೆಲ್ಲಲು ವಿಭಿನ್ನ ತಂತ್ರಗಳನ್ನು ಅನುಸರಿಸುತ್ತಿದೆ. ನವ ಉದಾರವಾದದ ಕರಾಳ ಬಾಹುಗಳನ್ನು ಪ್ರತಿರೋಧಿಸುವ ಜನಪರ ಚಳವಳಿಗಳನ್ನು ದೇಶದ ಭದ್ರತೆಗೆ ಮಾರಕ ಎಂದು ಬಿಂಬಿಸುವುದು ಈ ತಂತ್ರಗಳಲ್ಲಿ ಒಂದಾಗಿದೆ. ವಿಪರ್ಯಾಸವೆಂದರೆ ದೇಶದ ದಲಿತ ಸಮುದಾಯಗಳು, ಸಾಮುದಾಯಿಕ ಪ್ರಜ್ಞೆಯನ್ನೇ ಕಳೆದುಕೊಳ್ಳುತ್ತಿರುವ ಸಂಘಟನೆಗಳು ಆಳ್ವಿಕರ ಈ ತಂತ್ರಕ್ಕೆ ಸುಲಭವಾಗಿ ತುತ್ತಾಗುತ್ತಿವೆ ಎಂದು ಕೃತಿಯ ಮುನ್ನುಡಿಯಲ್ಲಿ ನಾ. ದಿವಾಕರ್ ಅಭಿಪ್ರಾಯಪ ಡುತ್ತಾರೆ. ತತ್ಪರಿಣಾಮವಾಗಿ ಜಾಗತೀಕರಣದಿಂದ ದಲಿತರಿಗೆ ಅನುಕೂಲಗಳೇ ಹೆಚ್ಚು ಎಂಬ ವಾದಕ್ಕೆ ಹೆಚ್ಚು ಪುಷ್ಟಿ ದೊರೆಯುತ್ತಿದೆ. ಈ ಗೊಡ್ಡು ವಾದವನ್ನು ನಿರಾಕರಿಸುವುದಷ್ಟೇ ಅಲ್ಲದೆ, ಅಂಕಿ ಅಂಶಗಳ ಸಮೇತ ತಿರಸ್ಕರಿಸಲು ಪ್ರಸ್ತುತ ಕೃತಿ ನೆರವಾಗುತ್ತದೆ. ಈ ಹಿನ್ನೆಲೆ ಯಲ್ಲಿ ಪ್ರಸ್ತುತ ಕೃತಿ ಜಾಗತೀಕರಣದ ಪರಿಣಾಮ ಮತ್ತು ದಲಿತ ಸಮುದಾಯಗಳ ಸ್ಥಿತ್ಯಂತರಗಳ ಬಗ್ಗೆ ಆಮೂಲಾಗ್ರ ಚಿತ್ರಣ ನೀಡುತ್ತದೆ.

ಕೃತಿಯಲ್ಲಿ ಜಾಗತೀಕರಣವನ್ನು ಶಿಸ್ತು ಬದ್ದವಾಗಿ ಅಧ್ಯಯನ ಮಾಡಲಾಗಿದೆ. ಆರಂಭದಲ್ಲಿ ಜಾಗತೀಕರಣದ ಚಾರಿತ್ರಿಕ ದೃಷ್ಟಿಕೋನವನ್ನು ಲೇಖಕರು ತೆರೆದಿಟ್ಟಿದ್ದಾರೆ. ಜಾಗತಿಕ ವ್ಯವಸ್ಥೆಗೆ ಭಾರತದ ಪ್ರವೇಶವಾದ ಸಂದರ್ಭ ಮತ್ತು ಭಾರತದಲ್ಲಿ ದಲಿತರ ವಾಸ್ತವ ಸ್ಥಿತಿಯನ್ನು ಈ ಅಧ್ಯಾಯದಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಎರಡನೆ ಅಧ್ಯಾಯದಲ್ಲಿ ಬಡಜನತೆಯ ಮೇಲೆ ಸುಧಾರಣೆ ಮಾಡಿರುವ ಪ್ರಭಾವ ಯಾವ ರೀತಿಯದ್ದು ಎನ್ನುವುದು ಬಿಡಿ ಬಿಡಿಯಾಗಿ ನೋಡಲಾಗಿದೆ. ಹಾಗೆಯೇ ಅವಕಾಶ ವಂಚಿತ ಸಾಮಾಜಿಕ ಸಮುದಾಯಗಳಾಗಿ ದಲಿತರ ಮೇಲೆ ಸುಧಾರಣೆಯ ಪ್ರಭಾವವನ್ನು, ಶಿಕ್ಷಣ, ಉದ್ಯೋಗ, ದೌರ್ಜನ್ಯಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ವಿವರಿಸಲಾಗಿದೆ.

ಲಡಾಯಿ ಪ್ರಕಾಶ ಹೊರತಂದಿರುವ ಕೃತಿಯನ್ನು ನಾ. ದಿವಾಕರ ಅವರು ಸರಳ ಕನ್ನಡಕ್ಕಿಳಿಸಿದ್ದಾರೆ. ಕೃತಿಯ ಮುಖಬೆಲೆ 60 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X