Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಘಾತಕ್ಕೀಡಾದ ಸೈನಿಕರಿಗೆ ನೆರವಾದ...

ಅಪಘಾತಕ್ಕೀಡಾದ ಸೈನಿಕರಿಗೆ ನೆರವಾದ ಕಾಶ್ಮೀರಿ ಯುವಕರು

ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ5 Sept 2017 6:50 PM IST
share
ಅಪಘಾತಕ್ಕೀಡಾದ ಸೈನಿಕರಿಗೆ ನೆರವಾದ ಕಾಶ್ಮೀರಿ ಯುವಕರು

ಶ್ರೀನಗರ,ಸೆ.5: ಕ್ರುದ್ಧ ಯುವಕರು ಪೊಲೀಸರು ಮತ್ತು ಯೋಧರತ್ತ ಕಲ್ಲುತೂರಾಟ ನಡೆಸುತ್ತಿರುವ ಚಿತ್ರಗಳು ಇತ್ತೀಚಿನ ದಿನಗಳಲ್ಲಿ ಕಾಶ್ಮೀರದಿಂದ ಹೊರಬೀಳುತ್ತಿರುವ ಅತ್ಯಂತ ಸಾಮಾನ್ಯ ಚಿತ್ರಗಳಾಗಿಬಿಟ್ಟಿವೆ. ಕಳೆದ ರವಿವಾರ, ಬಕ್ರೀದ್‌ನ ಮರುದಿನ ರಾತ್ರಿ ಬುಡ್ಗಾಂವ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಸ್ಕಿಡ್ ಆಗಿ ಅಪಘಾತ ಸಂಭವಿಸಿದ್ದಾಗ ಕಾಶ್ಮೀರಿ ಯುವಕರ ತಂಡವೊಂದು ಯೋಧರಿಗೆ ನೆರವಾಗುತ್ತಿರುವ ಚಿತ್ರಣವೊಂದು ಈ ಏಕತಾನತೆಯಲ್ಲಿ ಬದಲಾವಣೆಯನ್ನು ತಂದಿದೆ.

ಈ ಮಾನವೀಯತೆಯ ದೃಶ್ಯವನ್ನು ಸೆರೆ ಹಿಡಿದಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದು ನಿಜವಾದ ‘ಕಾಶ್ಮೀರಿಯತ್’ ಎಂದು ಹೆಚ್ಚಿನವರು ಪ್ರಶಂಸಿಸಿದ್ದಾರೆ. ಒಂದೂವರೆ ನಿಮಿಷಗಳ ಈ ವೀಡಿಯೊ ಅಡಿಮೇಲಾಗಿ ಬಿದ್ದ ಸೇನಾ ವಾಹನ ಮತ್ತು ಕೆಲವು ಕಾಶ್ಮೀರಿ ಯುವಕರು ಅದರಿಂದ ಹೊರಗೆ ಬರಲು ಯೋಧರಿಗೆ ನೆರವಾಗುತ್ತಿರುವ ದೃಶ್ಯವನ್ನೊಳಗೊಂಡಿದೆ. ಈ ಯುವಕರು ಯೋಧರಿಗೆ ಕುಡಿಯಲು ನೀರು ಮತ್ತು ಅವರ ಗಾಯಗಳಿಗೆ ಪ್ರಥಮ ಚಿಕಿತ್ಸೆ ಒದಗಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.

 ‘‘ಸ್ಥಳೀಯರ ಔದಾರ್ಯಕ್ಕಾಗಿ ಚಿನಾರ್ ಕಾರ್ಪ್ಸ್‌ನ ಕಮಾಂಡರ್ ಲೆಜಜೆ.ಎಸ್ ಸಂಧು ಅವರು ಕೃತಜ್ಞತೆಗಳನ್ನು ಹೇಳಿದ್ದಾರೆ. ಇದು ಜನರು ಪರಸ್ಪರರಿಗೆ ನೆರವಾಗುವ ಕಾಶ್ಮೀರಿಯತ್ ಮತ್ತು ಇನ್ಸಾನಿಯತ್(ಮಾನವೀಯತೆ)ನ ನಿಜವಾದ ಸಂಕೇತವಾಗಿದೆ. ಇದು ಮುಂದಿನ ದಿನಗಳಲ್ಲಿ ಜನಸಾಮಾನ್ಯರು ಮತ್ತು ಯೋಧರ ನಡುವೆ ಗೆಳೆತನವನ್ನು ಗಟ್ಟಿಗೊಳಿಸಲಿದೆ’’ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ ಕಾಲಿಯಾ ಹೇಳಿದರು.

ಚಡೂರಾದ ಚೆಕ್-ಎ-ಪೆಹ್ರೋ ಗ್ರಾಮದ ನಿವಾಸಿಗಳು ಅಪಘಾತದಲ್ಲಿ ಗಾಯ ಗೊಂಡಿದ್ದ ಯೋಧರ ನೆರವಿಗೆ ತಕ್ಷಣವೇ ಧಾವಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾಶ್ಮೀರಿ ಯುವಕರ ಈ ಕಾರ್ಯ ಕಾಶ್ಮೀರಿಯತ್ ಆಗಿದೆ ಎಂದು ಕಾಂಗ್ರೆಸ ರಾಜಕಾರಣಿ ಸಲ್ಮಾನ್ ನಿಝಾಮಿ ಟ್ವೀಟಿಸಿದ್ದರೆ, ನಾವು ಪರಸ್ಪರರಿಗೆ ಸೇರಿದವರು ಎನ್ನುವುದನ್ನು ನಾವು ಮರೆತಿಲ್ಲ ಎಂದು ಈ ಅಪಘಾತವು ತೋರಿಸಿದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸದಸ್ಯೆ ರಬಿಯಾ ನೂರ್ ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X