Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡೋಕ್ಲಾಮ್‌ನಂತಹ ಬಿಕ್ಕಟ್ಟು...

ಡೋಕ್ಲಾಮ್‌ನಂತಹ ಬಿಕ್ಕಟ್ಟು ಮರುಕಳಿಸಬಾರದು: ಮೋದಿ-ಜಿನ್ ಪಿಂಗ್ ಸಹಮತ

ವಾರ್ತಾಭಾರತಿವಾರ್ತಾಭಾರತಿ5 Sept 2017 8:09 PM IST
share
ಡೋಕ್ಲಾಮ್‌ನಂತಹ ಬಿಕ್ಕಟ್ಟು ಮರುಕಳಿಸಬಾರದು: ಮೋದಿ-ಜಿನ್ ಪಿಂಗ್ ಸಹಮತ

ಕ್ಸಿಯಾಮೆನ್,ಸೆ.5: ಮಂಗಳವಾರ ಇಲ್ಲಿ ಯಶಸ್ವಿ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು, ಭವಿಷ್ಯದಲ್ಲಿ ಉಭಯ ರಾಷ್ಟ್ರಗಳ ನಡುವೆ ಡೋಕ್ಲಾಮ್‌ನಂತಹ ಗಡಿ ಬಿಕ್ಕಟ್ಟುಗಳು ಪುನರಾವರ್ತನೆಗೊಳ್ಳಬಾರದು ಎನ್ನುವುದಕ್ಕೆ ಸಹಮತವನ್ನು ವ್ಯಕ್ತಪಡಿಸಿದರು.

ಸಿಕ್ಕಿಂ ಗಡಿ ವಿಭಾಗದ ಡೋಕ್ಲಾಮ್‌ನಲ್ಲಿ ಉಭಯ ಸೇನೆಗಳ ನಡುವೆ ಸೃಷ್ಟಿಯಾಗಿದ್ದ ಎರಡು ತಿಂಗಳಿಗೂ ಅಧಿಕ ಅವಧಿಯ ಬಿಕ್ಕಟ್ಟಿನ ಬಳಿಕ ಇದು ಮೋದಿ ಮತ್ತು ಜಿನ್ ಪಿಂಗ್ ನಡುವಿನ ಮೊದಲ ಮುಖಾಮುಖಿ ಮಾತುಕತೆಯಾಗಿದೆ. ಕೆಲವೇ ದಿನಗಳ ಹಿಂದೆ ಉಭಯ ರಾಷ್ಟ್ರಗಳು ಡೋಕ್ಲಾಮ್‌ನಿಂದ ತಮ್ಮ ಸೇನೆಗಳನ್ನು ವಾಪಸ್ ಕರೆಸಿಕೊಂಡಿದ್ದು, ವಿವಾದವೀಗ ತಣ್ಣಗಾಗಿದೆ.

ಒಂಭತ್ತನೇ ಬ್ರಿಕ್ಸ್ ಶೃಂಗಸಭೆ ಅಂತ್ಯಗೊಂಡ ಬಳಿಕ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ ಉಭಯ ನಾಯಕರು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಚರ್ಚಿಸಿದರು.

ಜಿನ್ ಪಿಂಗ್ ಅವರೊಂದಿಗೆ ಭೇಟಿ ಸಂದರ್ಭದಲ್ಲಿ ಭಾರತ ಮತ್ತು ಚೀನಾ ನಡುವೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಫಲದಾಯಕ ಮಾತುಕತೆಗಳನ್ನು ನಡೆಸಿದ್ದೇವೆ ಎಂದು ಮೋದಿ ಟ್ವೀಟಿಸಿದ್ದಾರೆ. ಜಿನ್ ಪಿಂಗ್ ಜೊತೆ ಭೇಟಿಯ ಬಳಿಕ ಮೋದಿ ಮ್ಯಾನ್ಮಾರ್‌ಗೆ ತೆರಳಿದರು.

ಚೀನಾ ಮತ್ತು ಭಾರತಗಳ ನಡುವೆ ಆರೋಗ್ಯಕರ ಮತ್ತು ಸ್ಥಿರ ಸಂಬಂಧಗಳು ಉಭಯ ರಾಷ್ಟ್ರಗಳ ಜನತೆಯ ಮೂಲಭೂತ ಹಿತಾಸಕ್ತಿಗಳಿಗೆ ಅನುಗುಣವಾಗಿವೆ ಎಂದು ಹೇಳಿದ ಜಿನ್ ಪಿಂಗ್,ಪರಸ್ಪರ ರಾಜಕೀಯ ನಂಬಿಕೆಯನ್ನು ಉತ್ತಮಗೊಳಿಸಲು,ಪರಸ್ಪರ ಲಾಭದಾಯಕ ಸಹಕಾರವನ್ನು ಉತ್ತೇಜಿಸಲು ಮತ್ತು ಚೀನಾ-ಭಾರತ ಸಂಬಂಧವನ್ನು ಸರಿಯಾದ ಮಾರ್ಗದಲ್ಲಿ ಮುಂದುವರಿಸಲು ಪಂಚತತ್ವಗಳ ಆಧಾರದಲ್ಲಿ ಭಾರತ ದೊಂದಿಗೆ ಶ್ರಮಿಸಲು ಚೀನಾ ಬಯಸಿದೆ ಎಂದು ತಿಳಿಸಿದರು.

ಮೋದಿ ಮತ್ತು ಜಿನ್ ಪಿಂಗ್ ನಡುವಿನ ಭೇಟಿಯು ರಚನಾತ್ಮಕವಾಗಿದ್ದು,ಮುನ್ನೋಟವನ್ನು ಹೊಂದಿತ್ತು ಎಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ತಿಳಿಸಿದರು.

ಉಭಯ ದೇಶಗಳ ನಡುವಿನ ನಂಬಿಕೆಯನ್ನು ಇನ್ನಷ್ಟು ಹೆಚ್ಚಿಸಲು ಮತ್ತು ಸದೃಢಗೊಳಿಸಲು ಹೆಚ್ಚಿನ ಪ್ರಯತ್ನಗಳು ನಡೆಯಬೇಕು ಎನ್ನುವುದನ್ನು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ ಎಂದ ಅವರು, ಎರಡು ಬೃಹತ್ ಶಕ್ತಿಗಳ ನಡುವೆ ಭಿನ್ನಾಭಿಪ್ರಾಯದ ಕ್ಷೇತ್ರಗಳು ಇರುವುದು ಸಹಜವಾಗಿದೆ ಮತ್ತು ಅದನ್ನು ಪರಸ್ಪರ ಗೌರವದೊಂದಿಗೆ ನಿರ್ವಹಿಸಬೇಕಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X