Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2.09 ಲಕ್ಷ ಸಂಸ್ಥೆಗಳ ನೋಂದಣಿ ರದ್ದು : ...

2.09 ಲಕ್ಷ ಸಂಸ್ಥೆಗಳ ನೋಂದಣಿ ರದ್ದು : ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ5 Sept 2017 9:32 PM IST
share
2.09 ಲಕ್ಷ ಸಂಸ್ಥೆಗಳ ನೋಂದಣಿ ರದ್ದು :  ಕೇಂದ್ರ ಸರಕಾರ

ಹೊಸದಿಲ್ಲಿ, ಸೆ.5: ಕಾನೂನು ಅವಶ್ಯಕತೆಗಳನ್ನು ಪೂರೈಸಲು ವಿಫಲವಾಗಿರುವ 2.09 ಲಕ್ಷಕ್ಕೂ ಹೆಚ್ಚು ಸಂಸ್ಥೆಗಳ ಹೆಸರನ್ನು ಕಂಪೆನಿಗಳ ನೋಂದಣಿ ದಾಖಲೆಯಿಂದ ತೆಗೆದುಹಾಕಲಾಗಿದ್ದು , ಈ ಸಂಸ್ಥೆಗಳ ಬ್ಯಾಂಕ್ ಖಾತೆ ನಿರ್ವಹಣೆಯನ್ನು ನಿರ್ಬಂಧಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ  ಸರಕಾರ ತಿಳಿಸಿದೆ.

ತೆರಿಗೆ ತಪ್ಪಿಸುವ ಹಾಗೂ ಅಕ್ರಮ ಹಣ ವರ್ಗಾವಣೆಗಾಗಿ ಹುಟ್ಟುಹಾಕಲಾಗಿರುವ ಬೇನಾಮಿ ಸಂಸ್ಥೆಗಳ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸಿರುವ ಸರಕಾರ, ಈ ಕಂಪೆನಿಗಳು ತಮ್ಮ ವ್ಯವಹಾರವನ್ನು ಕಾನೂನುಬದ್ಧವಾಗಿ ನಡೆಸುವವರೆಗೆ ಈ ಕಂಪೆನಿಗಳು ತಮ್ಮ ಬ್ಯಾಂಕ್ ಖಾತೆ ನಿರ್ವಹಿಸುವುದನ್ನು ನಿಬರ್ಂಧಿಸಿರುವುದಾಗಿ ತಿಳಿಸಿದೆ.

 ಕಂಪೆನಿಗಳ ಕಾಯ್ದೆಯ ಸೆಕ್ಷನ್ 248(5)ರಡಿ 2,09,032 ಕಂಪೆನಿಗಳ ಹೆಸರನ್ನು ಕಂಪೆನಿಗಳ ನೋಂದಣಿ ದಾಖಲೆಯಿಂದ ತೆಗೆದುಹಾಕಲಾಗಿದೆ. ಇಂತಹ ಕಂಪೆನಿಗಳ ಹಾಲಿ ನಿರ್ದೇಶಕರು ಇನ್ನುಮುಂದೆ ಮಾಜಿ ನಿರ್ದೇಶಕರಾಗಿರುತ್ತಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇಂತಹ ಕಂಪೆನಿಗಳ ಬ್ಯಾಂಕ್ ಖಾತೆಗಳ ನಿರ್ವಹಣೆಯನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಆರ್ಥಿಕ ಸೇವೆಗಳ ವಿಭಾಗವು ಭಾರತೀಯ ಬ್ಯಾಂಕ್‌ಗಳ ಸಂಘಟನೆಯ ಮೂಲಕ ಎಲ್ಲಾ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.

  ಈ ಸಂಸ್ಥೆಗಳನ್ನು ಕಾನೂನುಬದ್ಧಗೊಳಿಸಿದ ಬಳಿಕ ಈ ಕಂಪೆನಿಗಳ ಹೆಸರನ್ನು ‘ರದ್ದುಗೊಳಿಸಿರುವ’ ವಿಭಾಗದಿಂದ ತೆಗೆದು ‘ಸಕ್ರಿಯ’ ವಿಭಾಗದಲ್ಲಿ ಸೇರಿಸಲಾಗುವುದು ಎಂದು ಸರಕಾರ ತಿಳಿಸಿದೆ. ಅಲ್ಲದೆ ಇತರ ಸಂಸ್ಥೆಗಳೊಡನೆ ವ್ಯವಹಾರ ನಡೆಸುವ ಸಂದರ್ಭ ಗರಿಷ್ಠ ಜಾಗರೂಕತೆ ವಹಿಸುವಂತೆ ತಿಳಿಸಿದೆ. ಕೆಲವು ಸಂಸ್ಥೆಗಳು ಕಾರ್ಪೊರೇಟರ್ ವ್ಯವಹಾರಗಳ ಸಚಿವಾಲಯದ ವೆಬ್‌ಸೈಟ್‌ನಲ್ಲಿ ‘ಸಕ್ರಿಯ’ ಸ್ಥಾನಮಾನ ಪಡೆದಿದ್ದರೂ, ವಾರ್ಷಿಕ ವರದಿ ಸೇರಿದಂತೆ ಹಣಕಾಸು ವಿವರಣೆ ಕುರಿತ ದಾಖಲೆಯನ್ನು ಕ್ರಮಬದ್ಧವಾಗಿ ಸಲ್ಲಿಸಿರುವುದಿಲ್ಲ. ಇಂತಹ ಕಂಪೆನಿಗಳೊಡನೆ ವ್ಯವಹರಿಸುವಾಗ ಗರಿಷ್ಟ ಎಚ್ಚರಿಕೆ ಅಗತ್ಯ ಎಂದು ತಿಳಿಸಲಾಗಿದೆ.

ಸುದೀರ್ಘ ಕಾಲಾವಧಿಯಲ್ಲಿ ನಿಷ್ಕ್ರಿಯವಾಗಿರುವುದೂ ಸೇರಿದಂತೆ ಹಲವು ಕಾರಣಗಳಿಗೆ ಕಂಪೆನಿಗಳ ಹೆಸರನ್ನು ನೋಂದಣಿ ಪುಸ್ತಕದಿಂದ ತೆಗೆದುಹಾಕಲು ಕಂಪೆನಿಗಳ ಕಾಯ್ದೆಯ ಸೆಕ್ಷನ್ 248ರಲ್ಲಿ ಅವಕಾಶವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X