Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1.25 ಲಕ್ಷ ರೊಹಿಂಗ್ಯರು ಬಾಂಗ್ಲಾದೇಶಕ್ಕೆ...

1.25 ಲಕ್ಷ ರೊಹಿಂಗ್ಯರು ಬಾಂಗ್ಲಾದೇಶಕ್ಕೆ ಪಲಾಯನ

ಹಿಂಸೆ ನಿಲ್ಲಿಸುವಂತೆ ಸೂ ಕಿ ಮೇಲೆ ಮುಸ್ಲಿಮ್ ದೇಶಗಳಿಂದ ಒತ್ತಡ

ವಾರ್ತಾಭಾರತಿವಾರ್ತಾಭಾರತಿ5 Sept 2017 10:14 PM IST
share
1.25 ಲಕ್ಷ ರೊಹಿಂಗ್ಯರು ಬಾಂಗ್ಲಾದೇಶಕ್ಕೆ ಪಲಾಯನ

ಕಾಕ್ಸ್ ಬಝಾರ್ (ಬಾಂಗ್ಲಾದೇಶ), ಸೆ. 5: ಮ್ಯಾನ್ಮಾರ್‌ನಲ್ಲಿ ಸೇನೆ ನಡೆಸುತ್ತಿರುವ ದಮನ ಕಾರ್ಯಾಚರಣೆಗೆ ಬೆದರಿ ಸುಮಾರು 1.25 ಲಕ್ಷ ಅಲ್ಪಸಂಖ್ಯಾತ ರೊಹಿಂಗ್ಯ ಮುಸ್ಲಿಮರು ಈಗಾಗಲೇ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಗಂಭೀರ ಪರಿಸ್ಥಿತಿ ನೆಲೆಸಿರುವಂತೆಯೇ, ಹಿಂಸಾಚಾರವನ್ನು ನಿಲ್ಲಿಸುವಂತೆ ಮುಸ್ಲಿಮ್ ಬಾಹುಳ್ಯದ ದೇಶಗಳಾದ ಬಾಂಗ್ಲಾದೇಶ, ಇಂಡೋನೇಶ್ಯ ಮತ್ತು ಪಾಕಿಸ್ತಾನಗಳು ಮ್ಯಾನ್ಮಾರ್ ನಾಯಕಿ ಆಂಗ್ ಸಾನ್ ಸೂ ಕಿ ಮೇಲೆ ಒತ್ತಡ ಹೇರಿವೆ.

ರಕ್ತಪಾತವನ್ನು ನಿಲ್ಲಿಸುವಂತೆ ಮ್ಯಾನ್ಮಾರನ್ನು ಒತ್ತಾಯಿಸಲು ಇಂಡೋನೇಶ್ಯದ ವಿದೇಶ ಸಚಿವೆ ರೆಟ್ನೊ ಮರ್ಸೂಡಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆಯೂ ಆಗಿರುವ ಸೂ ಕಿ ಮತ್ತು ಮ್ಯಾನ್ಮಾರ್ ಸೇನಾ ಮುಖ್ಯಸ್ಥ ಮಿನ್ ಆಂಗ್ ಹಲಯಾಂಗ್‌ರನ್ನು ಸೋಮವಾರ ಭೇಟಿಯಾದರು.

 ‘‘ಅಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ಹಿಂಸಾಚಾರವನ್ನು ಸೇನಾ ಪಡೆಗಳು ತಕ್ಷಣ ನಿಲ್ಲಿಸಬೇಕು ಹಾಗೂ ತಕ್ಷಣದ ಮತ್ತು ದೀರ್ಘಾವಧಿಗಾಗಿ ಮಾನವೀಯ ನೆರವು ಮತ್ತು ಅಭಿವೃದ್ಧಿ ನಿಧಿಯನ್ನು ಒದಗಿಸಬೇಕು’’ ಎಂದು ಮ್ಯಾನ್ಮಾರ್ ರಾಜಧಾನಿ ಯಾಂಗನ್‌ನಲ್ಲಿ ಸಭೆಗಳನ್ನು ನಡೆಸಿದ ಬಳಿಕ ರೆಟ್ನೊ ಹೇಳಿದರು.

ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ಆಗಸ್ಟ್ 25ರಂದು ರೊಹಿಂಗ್ಯ ಬಂಡುಕೋರರು ಪೊಲೀಸ್ ಠಾಣೆಗಳ ಮೇಲೆ ಸಂಘಟಿತ ದಾಳಿ ನಡೆಸಿದ ಬಳಿಕ ಹೊಸದಾಗಿ ಹಿಂಸಾಚಾರ ಆರಂಭವಾಗಿದೆ ಎಂದು ಹೇಳಲಾಗಿದೆ.

ಬಳಿಕ ಸೇನೆ ನಡೆಸಿದ ದಮನ ಕಾರ್ಯಾಚರಣೆಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟಿದ್ದಾರೆ ಹಾಗೂ ಭಾರಿ ಸಂಖ್ಯೆಯ ರೊಹಿಂಗ್ಯರು ಬಾಂಗ್ಲಾದೇಶಕ್ಕೆ ಸಾಮೂಹಿಕ ಪಲಾಯನಗೈದಿದ್ದಾರೆ.

ರೊಹಿಂಗ್ಯ ಬಂಡುಕೋರರು ಸಾವಿರಾರು ಮನೆಗಳನ್ನು ಸುಟ್ಟುಹಾಕಿದ್ದಾರೆ ಎಂದು ಮ್ಯಾನ್ಮಾರ್ ಸರಕಾರ ಹೇಳಿದೆ. ಆದರೆ, ರೊಹಿಂಗ್ಯರನ್ನು ಹೊರದಬ್ಬುವುದಕ್ಕಾಗಿ ಅವರ ಮನೆಗಳಿಗೆ ಸೇನೆಯೇ ಬೆಂಕಿ ಕೊಡುತ್ತಿದೆ ಎಂದು ಮಾನವಹಕ್ಕುಗಳ ಸಂಘಟನೆಗಳು ಮತ್ತು ಬಾಂಗ್ಲಾದೇಶಕ್ಕೆ ಪರಾರಿಯಾಗಿ ಬಂದಿರುವ ರೊಹಿಂಗ್ಯರು ಆರೋಪಿಸಿದ್ದಾರೆ.

ಇಸ್ಲಾಮಿಕ್ ಸಹಕಾರ ಸಂಘಟನೆ ಖಂಡನೆ

ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ರೊಹಿಂಗ್ಯ ಮುಸ್ಲಿಮರ ವಿರುದ್ಧ ನಡೆಯುತ್ತಿರುವ ಹಿಂಸಾಚಾರವನ್ನು ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ)ಯ ಸ್ವತಂತ್ರ ಮಾನವಹಕ್ಕುಗಳ ಆಯೋಗ (ಐಪಿಎಚ್‌ಆರ್‌ಸಿ) ಪ್ರಬಲವಾಗಿ ಖಂಡಿಸಿದೆ.

ರೊಹಿಂಗ್ಯ ಅಲ್ಪಸಂಖ್ಯಾತರ ಮಾನವಹಕ್ಕುಗಳನ್ನು ರಕ್ಷಿಸುವಂತೆ ಮ್ಯಾನ್ಮಾರನ್ನು ಒತ್ತಾಯಿಸುವಂತೆ ಐಪಿಎಚ್‌ಆರ್‌ಸಿ ಎಲ್ಲ ಒಐಸಿ ಸದಸ್ಯ ದೇಶಗಳಿಗೆ, ಅದರಲ್ಲೂ ಮುಖ್ಯವಾಗಿ ನೆರೆಯ ದೇಶಗಳಿಗೆ ಕರೆ ನೀಡಿದೆ ಹಾಗೂ ವಿಶ್ವಸಂಸ್ಥೆಯ ಮಾನವಹಕ್ಕುಗಳ ಸಮಿತಿ ಮತ್ತು ಭದ್ರತಾ ಮಂಡಳಿ ಮುಂತಾದ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವಂತೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X