Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಕ್ ರ್ಯಾಲಿಗೆ ಅವಕಾಶ ನಿರಾಕರಣೆ:...

ಬೈಕ್ ರ್ಯಾಲಿಗೆ ಅವಕಾಶ ನಿರಾಕರಣೆ: ಜಿಲ್ಲಾ ಕಾಂಗ್ರೆಸ್ ಸಮರ್ಥನೆ

ವಾರ್ತಾಭಾರತಿವಾರ್ತಾಭಾರತಿ5 Sept 2017 10:55 PM IST
share

ಮಂಗಳೂರು, ಸೆ.5: ಬಿಜೆಪಿ ಮತ್ತು ಸಂಘ ಪರಿವಾರದವರು ಆಯೋಜಿಸಿರುವ ಬೈಕ್ ರ್ಯಾಲಿಗೆ ಜಿಲ್ಲಾಡಳಿತ ಅವಕಾಶ ನಿರಾಕರಿಸಿರುವುದು ಸರಿಯಾದ ಕ್ರಮವಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂದಿನ ದಿನಗಳಲ್ಲಿ ದ.ಕ.ಜಿಲ್ಲೆಯನ್ನು ಕೇಂದ್ರವಾಗಿರಿಸಿ ಕೋಮುವಾದಿ ಸಂಘಟನೆಗಳು ಶಾಂತಿ ಕದಡುವ ಹುನ್ನಾರ ನಡೆಸುತ್ತಿರುವುದರಿಂದ ಜಿಲ್ಲೆಯ ಶಾಂತಿ ಪ್ರಿಯ ನಾಗರಿಕರಲ್ಲಿ ಬೇಸರ ಮೂಡಿಸಿದೆ. ಎರಡು ವರ್ಷಗಳಲ್ಲಿ ಈ ಜಿಲ್ಲೆಯಲ್ಲಿ ಪ್ರವೀಣ್ ಪೂಜಾರಿ, ಕಾರ್ತಿಕ್ ರಾಜ್, ಹರೀಶ್ ಪೂಜಾರಿ, ವಿನಾಯಕ ಬಾಳಿಗ, ಪ್ರತಾಪ್ ಪೂಜಾರಿ, ಅಶ್ರಫ್ ಕಲಾಯಿ, ಶರತ್ ಮಡಿವಾಳರ ಹತ್ಯೆಗಳಾಗಿದ್ದು, ಇವು ಕೋಮುದ್ವೇಷಗಳಿಂದ ಕೂಡಿರುವುದರಿಂದ ಮತ್ತು ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯಕ್ಕೆ ಧಕ್ಕೆಯಾಗಿರುವುದರಿಂದ ಇಂತಹ ಬೈಕ್ ರ್ಯಾಲಿಗಳನ್ನು ನಿಷೇಧಿಸಿರುವುದು ಸರಿಯಾದ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯನ್ನು ಬಿಜೆಪಿ ಬಹಿಷ್ಕರಿಸಿರುವ ಹಿಂದಿನ ಮರ್ಮವೇನು?. ಬಂಟ್ವಾಳದಲ್ಲಿ ಸೆಕ್ಷನ್ ಜಾರಿಯಾಗಿದ್ದ ಸಂದರ್ಭ ಕಾನೂನು ಉಲ್ಲಂಘಿಸಿ ರ್ಯಾಲಿ ನಡೆಸಿ ಕಾನೂನನ್ನು ಬಿಜೆಪಿ ಗೌರವಿಸುವುದಿಲ್ಲ ಎಂಬ ಸಂದೇಶ ರವಾನಿಸಿದೆ. ಓರ್ವನ ಹತ್ಯೆಯ ಕುರಿತು ನಡೆದ ರ್ಯಾಲಿಯಲ್ಲಿ ಸಂಭ್ರಮಾಚರಣೆ ನಡೆಸಿರುವುದು ಯಾವ ಧರ್ಮ?.

ಇದರಲ್ಲಿ ಕಾನೂನು ರೂಪಿಸುವ ಸಂಸದರುಗಳೇ ಪಾಲ್ಗೊಂಡು ಕಾನೂನನ್ನು ಕೈಗೆತ್ತಿಕೊಂಡಿದ್ದು ಚುನಾಯಿತ ಪ್ರತಿನಿಧಿಗಳಿಗೆ ಮಾಡಿದ ಅವಮಾನವಲ್ಲವೇ? ಶರತ್ ಮಡಿವಾಳರ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ ಸಂಘ ಪರಿವಾರ ಮತ್ತು ಯುವಮೋರ್ಚಾದ ಪದಾಧಿಕಾರಿಗಳು ಕಲ್ಲು ತೂರಾಟ ನಡೆಸಿ ಮುಸ್ಲಿಮರ ತಲೆಗೆ ಕಟ್ಟುವ ಪ್ರಯತ್ನ ನಡೆಸಿ ಸಿ.ಸಿ.ಕ್ಯಾಮೆರಾದಲ್ಲಿ ಸಿಕ್ಕಿ ಬಿದ್ದು ನಗೆಪಾಟಲಿಗೀಡಾಗಿಲ್ಲವೇ? ಎಂದು ಪ್ರಶ್ನಿಸಿರುವ ಹರೀಶ್ ಕುಮಾರ್ ಬಿಜೆಪಿಗರ ನಿಜಬಣ್ಣ ಬಯಲಾಗಿದ್ದು ಇದೆಲ್ಲಾ ಕೋಮು ಘರ್ಷಣೆ ನಡೆಸಿ ಮತಗಳಿಸುವ ತಂತ್ರವೆಂಬುದು ಪ್ರಜ್ಞಾವಂತ ನಾಗರಿಕರಿಗೆ ಮನವರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರ್ಯಾಲಿ ನಡೆಸುವುದಾದರೆ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟು ನಡೆಸಲಿ. ರಾಜ್ಯಾದ್ಯಂತ ಬೈಕ್ ರ್ಯಾಲಿಯೊಂದಿಗೆ ಜನರನ್ನು ಕರೆತಂದು ಜಿಲ್ಲೆಯಲ್ಲಿ ಶಾಂತಿ ಕದಡುವ ತಂತ್ರ ಬೇಡ. ಇಂತಹ ರ್ಯಾಲಿಯಿಂದಾಗಿ ಬೇರೆ ಬೇರೆ ಜಿಲ್ಲೆಗಳಿಂದ ರ್ಯಾಲಿ ಬರುವಾಗ ವಾಹನ ಸಂಚಾರಕ್ಕೆ ತೊಡಕುಂಟಾಗುತ್ತದೆ ಹಾಗೂ ರಾಜ್ಯಾದ್ಯಂತ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಕೆಲಸ ಸರಕಾರಕ್ಕೆ ದುಬಾರಿಯಾಗಲಿದೆ. ಎಲ್ಲಿಯಾದರೂ ಕಿಡಿಗೇಡಿಗಳು ರ್ಯಾಲಿಗೆ ತೊಂದರೆ ಉಂಟು ಮಾಡಿದಲ್ಲಿ ಅಥವಾ ಯುವ ಮೋರ್ಚಾದ ಸದಸ್ಯರೇ ಕಲ್ಲು ತೂರಾಟ ನಡೆಸಿದ ಇತಿಹಾಸ ಇರುವಾಗ ಮತ್ತೆ ಮರುಕಳಿಸಿದರೆ ಸರಕಾರ ಜವಾಬ್ದಾರಿ ಆಗುವುದರಿಂದ ರ್ಯಾಲಿಗೆ ಅವಕಾಶ ನೀಡದಿರುವ ಪೋಲಿಸ್ ಇಲಾಖೆ ಹಾಗೂ ದಂಡಾಧಿಕಾರಿಯವರ ತೀರ್ಮಾನ ಸಮಂಜಸವಾಗಿದೆ ಎಂದು ತಿಳಿಸಿದ್ದಾರೆ.

ನಾಝಿ ಸಿದ್ಧಾಂತವನ್ನು ಬಿಜೆಪಿ ಹಿರಿಯ ನಾಯಕರೇ ಅಳವಡಿಸಿಕೊಂಡಿದ್ದು, ಆರೆಸ್ಸೆಸ್ ಕೂಡಾ ಇದಕ್ಕೆ ಹೊರತಾಗಿಲ್ಲ. ಹೀಗಿರುವಾಗ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯವರನ್ನು ನಾಝಿ ಸಿದ್ಧಾಂತದವರೆಂದು ದೂರುವ ಬಿಜೆಪಿಯವರು ಚರಿತ್ರೆಯನ್ನು ಸರಿಯಾಗಿ ಓದಿ ತಿಳಿದುಕೊಳ್ಳಲಿ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X