Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯ ಪಕ್ಷಗಳು ಯುವಶಕ್ತಿಯನ್ನು...

ರಾಷ್ಟ್ರೀಯ ಪಕ್ಷಗಳು ಯುವಶಕ್ತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ: ಎಚ್.ಡಿ. ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ5 Sept 2017 10:56 PM IST
share
ರಾಷ್ಟ್ರೀಯ ಪಕ್ಷಗಳು ಯುವಶಕ್ತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ: ಎಚ್.ಡಿ. ದೇವೇಗೌಡ

ದಾವಣಗೆರೆ, ಸೆ.5: ಮಂಗಳೂರಿನಲ್ಲಿ ಸಾಮರಸ್ಯ ಕಾಪಾಡಬೇಕಾದ ಪಕ್ಷಗಳೇ ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುತ್ತಾ ಯುವಶಕ್ತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಅಭಿವೃದ್ಧಿ ಬಗ್ಗೆ ಚಿಂತಿಸದೆ ಯುವಶಕ್ತಿ ದುರ್ಬಳಕೆ ಮಾಡಿಕೊಂಡು ಮಂಗಳೂರಿನಲ್ಲಿ ಶಾಂತಿ ಕದಡುವುದಕ್ಕೆ ಪೈಪೋಟಿಗೆ ಬಿದ್ದಂತಾಗಿರುವುದು ನನಗೆ ಅರ್ಥವಾಗುತ್ತಿಲ್ಲ. ಹಿಂಸಾಚಾರ ಶಮನ ಮಾಡುವ ಬದಲಿಗೆ, ಯುವಶಕ್ತಿ ದುರ್ಬಳಕೆ ಮಾಡಿಕೊಳ್ಳುತ್ತಿವೆ. ಉಭಯ ಪಕ್ಷಗಳೂ ಇದರ ದುಷ್ಪರಿಣಾಮವನ್ನೂ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಹಿಂದೆ ಜೆ.ಎಚ್. ಪಟೇಲ್ ತಮ್ಮ ಕೊನೆಯ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಪೆಟ್ರೋಲ್ ಸುರಿದರೆ, ಬಿಜೆಪಿ ಬೆಂಕಿ ಹಚ್ಚುತ್ತದೆಂಬ ಮಾತು ಹೇಳಿದ್ದು ಗಮನಾರ್ಹ ಎಂದರು.

ಬಿಕ್ಸ್ ಸಮ್ಮೇಳನದಲ್ಲಿ ಭಯೋತ್ಪಾದನೆ ಕುರಿತು ಚರ್ಚಿಸಲಾಗುತ್ತಿದೆ. ಆದರೆ ಉತ್ತರಕೋರಿಯಾ ದೇಶವನ್ನು ಆತಂಕವಾದಿ ಎಂದು ಅಮೇರಿಕಾ ಹೇಳಿದೆ. ವಿಶ್ವದಲ್ಲಿ ಶಾಂತಿ ಕದಡಲು ಉತ್ತರ ಕೋರಿಯಾ ಮುಂದಿದೆ. ಈ ಎರಡು ದೇಶಗಳ ಸಮಸ್ಯೆಗಳ ಕುರಿತು ವಿಶ್ವಸಂಸ್ಥೆಯಲ್ಲಿ ಚರ್ಚೆಯಾಗಬೇಕು ಎಂದ ಅವರು, ಮಂಗಳೂರಿಗೆ ಬಿಜೆಪಿ ಯಾವ ಪುರುಷಾರ್ಥಕ್ಕೆ ಬೈಕ್ ರ್ಯಾಲಿ ಹಮ್ಮಿಕೊಂಡಿದೆ. ಅಲ್ಲಿ ಶಾಂತಿ ಕದಡುವ ಕೆಲಸ ಸಾಗಿದೆ. ರಾಜ್ಯದಲ್ಲಿ ಈಚಿನ ಅಹಿತಕರ ಘಟನೆಗಳು ಶಾಂತಿ, ಸುವ್ಯವಸ್ಥೆಗೆ ಭಂಗ ತರುವಂತಿವೆ. ಶಾಂತಿ, ಸಾಮರಸ್ಯ ಕಾಪಾಡಲು ಶ್ರಮಿಸಬೇಕೆ ಹೊರತು, ಸ್ಪರ್ಧೆಗೆ ಬೀಳಬಾರದು ಎಂದು ಆಡಳಿತ, ವಿಪಕ್ಷಕ್ಕೆ ದೇವೇಗೌಡ ಕಿವಿಮಾತು ಹೇಳಿದರು. 

ಈ ಸಂದರ್ಭ ಮುಖಂಡರಾದ ಜಫರುಲ್ಲಾಖಾನ್, ಶಾಸಕ ಹೆಚ್.ಎಸ್. ಶಿವಶಂಕರ್, ರಮೇಶ್‍ಬಾಬು, ಚಿದಾನಂದಪ್ಪ, ಹೊದಿಗೆರೆ ರಮೇಶ್, ಹೆಚ್.ಸಿ.ನೀರಾವರಿ, ಹೆಚ್.ಸಿ. ಗುಡ್ಡಪ್ಪ, ಟಿ.ದಾಸ್‍ಕರಿಯಪ್ಪ, ಶೀಲಾ ನಾಯಕ್, ಜೆ. ಅಮಾನುಲ್ಲಾಖಾನ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X