Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಲೂವೇಲ್ ಚಾಲೆಂಜ್ ಆತ್ಮಹತ್ಯೆಗೆ...

ಬ್ಲೂವೇಲ್ ಚಾಲೆಂಜ್ ಆತ್ಮಹತ್ಯೆಗೆ ಪ್ರಯತ್ನಿಸಿದ ಬಾಲಕಿಯ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ5 Sept 2017 11:27 PM IST
share
ಬ್ಲೂವೇಲ್ ಚಾಲೆಂಜ್ ಆತ್ಮಹತ್ಯೆಗೆ ಪ್ರಯತ್ನಿಸಿದ ಬಾಲಕಿಯ ರಕ್ಷಣೆ

ಜೋಧ್‌ಪುರ, ಸೆ. 5: ಜಗತ್ತಿನಾದ್ಯಂತ ನೂರಾರು ಸಾವಿಗೆ ಕಾರಣವಾದ ಅಪಾಯಕಾರಿ ಆನ್‌ಲೈನ್ ಆಟ ಬ್ಲೂವೇಲ್ ಚಾಲೆಂಜ್‌ನಿಂದಾಗಿ ರಾಜಸ್ಥಾನದ ಜೋಧ್‌ಪುರದಲ್ಲಿ ಸೋಮವಾರ ಸ್ಥಳೀಯ ಕೆರೆಗೆ ಹಾರಲು ಯತ್ನಿಸಿದ 17 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದೆ.

 ಬಿಎಸ್‌ಎಫ್‌ನ ಯೋಧನ ಪುತ್ರಿಯಾದ ಈಕೆ ಸುಮಾರು 11 ಗಂಟೆ ರಾತ್ರಿ ಕೈಲಾನಾ ಕೆರೆಗೆ ಹಾರಿದ್ದಾಳೆ. ಬಾಲಕಿಯ ಹಾಗೂ ಆಕೆಯ ಹೆತ್ತವರ ಗುರುತು ಪತ್ತೆ ಹಚ್ಚಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಪುತ್ರಿ ನಾಪತ್ತೆಯಾಗಿದ್ದಾಳೆ ಎಂದು ಹೆತ್ತವರು ನಮಗೆ ವರದಿ ಮಾಡಿದ್ದರು. ನಾವು ಶೋಧ ಕಾರ್ಯಾ ಆರಂಭಿಸಿದ್ದೆವು. ಇದೆ ಸಂದರ್ಭ ಬಾಲಕಿಯೋರ್ವಳು ಕೈಲಾನಾ ಕೆರೆಗೆ ಹಾರಲು ಪ್ರಯತ್ನಿಸುತ್ತಿರುವ ಮಾಹಿತಿ ಬಂತು ಎಂದು ಮಂದೂರು ಪೊಲೀಸ್ ಠಾಣೆಯ ಅಧಿಕಾರಿ ಮುಖ್ತಾ ಪರೀಕ್ ತಿಳಿಸಿದ್ದಾರೆ.

ಬಾಲಕಿ ಆತ್ಮಹತ್ಯೆ ಮಾಡುವಾಗ ಈ ಪ್ರದೇಶದ ಸಮೀಪ ಇದ್ದ ಲಾರಿ ಚಾಲಕರು ಹಾಗೂ ಪೊಲೀಸರು ಬಾಲಕಿಯನ್ನು ರಕ್ಷಿಸಿದರು ಎಂದು ಅವರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ತಾನು ಬ್ಲೂವೇಲ್ ಚಾಲೆಂಜ್ ಆಟವನ್ನು ಮೊಬೈಲ್‌ಗೆ ಡೌನ್‌ಲೋಡ್ ಮಾಡಿಕೊಂಡಿದ್ದೇನೆ ಎಂದು ಬಾಲಕಿ ಪೊಲೀಸರಲ್ಲಿ ಹೇಳಿರುವುದಾಗಿ ಪರೀಕ್ ತಿಳಿಸಿದ್ದಾರೆ.

ಬಾಲಕಿ ಬ್ಲೂವೇಲ್ ಚಾಲೆಂಜ್‌ನ ಅಂತಿಮ ಟಾಸ್ಕ್ ಅನ್ನು ಪೂರೈಸಲು ಆತ್ಮಹತ್ಯೆ ಪ್ರಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ವಿಟ್ಟರ್ ಮಾಹಿತಿಯಿಂದ ಯುವಕನ ರಕ್ಷಣೆ

ಭುವನೇಶ್ವರ: ಕಾನ್ಪುರದ ಯುವಕನೋರ್ವ ಟ್ವಿಟ್ಟರ್ ಮೂಲಕ ನೀಡಿದ ಮಾಹಿತಿಯಂತೆ ಕಾರ್ಯಪ್ರವೃತ್ತರಾದ ಭುವನೇಶ್ವರ ಪೊಲೀಸರು ಅಪಾಯಕಾರಿ ಬ್ಲೂವೇಲ್ ಗೇಮ್‌ನ 10ನೇ ಟಾಸ್ಕ್ ತಲುಪಿದ್ದ ಯುವಕನನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.

ಕಾನ್ಪುರದ ಯುವಕ ವಿಶಾಲ್ ಶ್ರೀವಾತ್ಸವ ಟ್ವಿಟ್ಟರ್ ಮೂಲಕ ನೀಡಿದ ಸಂದೇಶದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಭುವನೇಶ್ವರ-ಕತಕ್ ಪೊಲೀಸ್ ಕಮಿಷನರೇಟ್ ಬ್ಲೂವೇಲ್ ಚಾಲೆಂಜ್ ಆಟ ಆಡುತ್ತಿದ್ದ ಬಿಟೆಕ್ ವಿದ್ಯಾರ್ಥಿಯನ್ನು ಪತ್ತೆ ಹಚ್ಚಿ ಆತನನ್ನು ಗೀಳಿನಿಂದ ಹೊರ ತರುವಲ್ಲಿ ಸಫಲವಾಗಿದೆ.

 ಈ ಎಂಜಿನಿಯರಿಂಗ್ ವಿದ್ಯಾರ್ಥಿ ಕಥಕ್‌ನ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ. ಬ್ಲೂವೇಲ್ ಚಾಲೆಂಜ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಆಟವಾಡುತ್ತಾ 10ನೇ ಹಂತದ ಟಾಸ್ಕ್ ವರೆಗೆ ತಲುಪಿದ್ದ.

ಟ್ವಿಟ್ಟರ್ ಮೂಲಕ ವಿಶಾಲ್ ನೀಡಿದ ಮಾಹಿತಿಗೆ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾದರು. ಕೊನೆಗೆ ಕತಕ್‌ನ ಹಾಸ್ಟೆಲ್‌ನಿಂದ ಆ ವಿದ್ಯಾರ್ಥಿಯನ್ನು ಪತ್ತೆ ಹಚ್ಚಿದರು. ಅನಂತರ ಆತನೊಂದಿಗೆ ಸಮಾಲೋಚನೆ ನಡೆಸಿ ಹೆತ್ತವರೊಂದಿಗೆ ಕಳುಹಿಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X