Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಪ್ರೀತಿಯ ಅಮ್ಮ' ನನ್ನ ಕಳಕೊಂಡ ಸಾಮಾಜಿಕ...

'ಪ್ರೀತಿಯ ಅಮ್ಮ' ನನ್ನ ಕಳಕೊಂಡ ಸಾಮಾಜಿಕ ಚಳವಳಿಗಳು, ಕಾರ್ಯಕರ್ತರು !

ಲಂಕೇಶರನ್ನು ಮೀರಿ ಮುನ್ನಡೆದ ಗೌರಿ ಲಂಕೇಶ್

ವಾರ್ತಾಭಾರತಿವಾರ್ತಾಭಾರತಿ5 Sept 2017 11:49 PM IST
share
ಪ್ರೀತಿಯ  ಅಮ್ಮ ನನ್ನ ಕಳಕೊಂಡ ಸಾಮಾಜಿಕ ಚಳವಳಿಗಳು, ಕಾರ್ಯಕರ್ತರು !

ಬೆಂಗಳೂರು, ಸೆ. 5: ಮಂಗಳವಾರ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ತಮ್ಮ ತಂದೆ ದಿವಂಗತ ಲಂಕೇಶರ ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿದ್ದು ಮಾತ್ರವಲ್ಲದೆ ನಿರ್ಭೀತ ಪತ್ರಕರ್ತೆ ಹಾಗೂ ಸಕ್ರಿಯ ಸಾಮಾಜಿಕ ಕಾರ್ಯಕರ್ತೆಯಾಗಿ ರಾಜಿಯಿಲ್ಲದೆ ಕರ್ತವ್ಯ ನಿರ್ವಹಿಸುತ್ತಲೇ ಇಹಲೋಕದಿಂದ ನಿರ್ಗಮಿಸಿದ್ದಾರೆ.

ಈ ಮೂಲಕ ಪತ್ರಿಕೋದ್ಯಮದಲ್ಲಿ ಲಂಕೇಶರು ಸಾಧಿಸಿದ್ದ ಜನಪ್ರಿಯತೆಯನ್ನು ಮೀರಿದ ಸಾಮಾಜಿಕ ಆಂದೋಲನಗಳ ನಾಯಕಿ ಹಾಗೂ ಅಸಂಖ್ಯಾತ ಯುವ ಕಾರ್ಯಕರ್ತರ ಪ್ರೀತಿಯ ಅಮ್ಮನಾಗಿ ಬೆಳೆಯುವ ಮೂಲಕ ಲಂಕೇಶರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.

2000 ಇಸವಿಯಲ್ಲಿ ಲಂಕೇಶ್ ನಿಧನರಾದರು. ಅಲ್ಲಿಯವರೆಗೆ ರಾಷ್ಟ್ರ ಮಟ್ಟದಲ್ಲಿ ಇಂಗ್ಲಿಷ್ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದ ಗೌರಿ ಅದನ್ನು ಸಂಪೂರ್ಣವಾಗಿ ಬಿಟ್ಟು ಬಂದು ಲಂಕೇಶ್ ಪತ್ರಿಕೆಯ ಸಾರಥ್ಯ ವಹಿಸಿಕೊಂಡರು. ಆಕೆ ಮೊದಲ ವಿರೋಧ ಎದುರಿಸಿದ್ದು ತಮ್ಮ ಪ್ರೀತಿಯ ಸೋದರನಿಂದಲೇ. ತಮ್ಮ ಇಂದ್ರಜಿತ್ ಲಂಕೇಶ್, ಲಂಕೇಶ್ ಪತ್ರಿಕೆಯ ಮೇಲೆ ಹಕ್ಕು ಸಾಧಿಸಿದಾಗ ತಮ್ಮ ನಿಲುವಿನೊಂದಿಗೆ ರಾಜಿ ಮಾಡಿಕೊಳ್ಳಲು ಒಪ್ಪದ ಗೌರಿ ಆ ಪತ್ರಿಕೆಯನ್ನು ತಮ್ಮನಿಗೆ ಬಿಟ್ಟು 'ಗೌರಿ ಲಂಕೇಶ್' ಹೆಸರಿನಲ್ಲಿ ಹೊಸ ಪತ್ರಿಕೆಯನ್ನು ಪ್ರಾರಂಭಿಸಿದರು.

ಲಂಕೇಶರು ತಮ್ಮ ನೇರ, ನಿಷ್ಠುರ ಅಭಿಪ್ರಾಯ, ಬರಹಗಳು ಹಾಗೂ ಪತ್ರಿಕೆಯಲ್ಲಿ ಪ್ರಕಟಿಸುವ ಕೆಣಕುವ ವರದಿಗಳಿಂದ ರಾಜ್ಯಾದ್ಯಂತ ಹೆಸರು ಗಳಿಸಿದವರು. ಆದರೆ ಗೌರಿ ಕೇವಲ ಪತ್ರಿಕಾ ಮಾಧ್ಯಮಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳಲಿಲ್ಲ. 'ಗೌರಿ ಲಂಕೇಶ್' ಮೂಲಕ ಕೋಮುವಾದಿಗಳು ಹಾಗೂ ಭ್ರಷ್ಟರಿಗೆ ಚಾಟಿ ಬೀಸಿದರು. ಆದರೆ ಅದರ ಜೊತೆ ಜೊತೆಗೆ ಸಕ್ರಿಯವಾಗಿ ಸಾಮಾಜಿಕ ಆಂದೋಲನಗಳಲ್ಲಿ ಕಾರ್ಯಕರ್ತೆಯಾಗಿ, ನಾಯಕಿಯಾಗಿ ಗುರುತಿಸಿಕೊಂಡರು.

ತಾವು ದೃಢವಾಗಿ ನಂಬಿ, ಪಾಲಿಸುವ ಜಾತ್ಯತೀತ ತತ್ವಗಳಿಗೆ ಧಕ್ಕೆ ಬಂದಾಗ ಯಾವುದೇ ಮುಲಾಜಿಲ್ಲದೆ ಅದನ್ನು ಕಟು ಶಬ್ದಗಳಲ್ಲಿ ಖಂಡಿಸುವ ಜೊತೆಗೆ ಬೀದಿಗಿಳಿದು ಅದನ್ನು ವಿರೋಧಿಸುತ್ತಿದ್ದರು. ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಮೂಲಕ ರಾಜ್ಯಾದ್ಯಂತ ವಿವಿಧ ವಿಷಯಗಳಲ್ಲಿ ಪ್ರತಿಭಟನೆ, ಧರಣಿ, ಆಂದೋಲನ, ಅಭಿಯಾನಗಳಲ್ಲಿ ಅವರು ಸದಾ ಮುಂಚೂಣಿಯಲ್ಲಿರುತ್ತಿದ್ದರು. 

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ನೀತಿಗಳನ್ನು ಅತ್ಯಂತ ಕಟುವಾಗಿ ಟೀಕಿಸುತ್ತಿದ್ದ ಗೌರಿ, ಬಿಜೆಪಿ ಹಾಗೂ ಸಂಘ ಪರಿವಾರಗಳ ಅತ್ಯಂತ ಪ್ರಬಲ ಟೀಕಾಕಾರರಾಗಿದ್ದರು. ಅವುಗಳನ್ನು ವಿರೋಧಿಸುವ ಯಾವುದೇ ಪ್ರಜಾಸತ್ತಾತ್ಮಕ  ವ್ಯಕ್ತಿ ಅಥವಾ ಸಂಘಟನೆಯನ್ನು ಗೌರಿ ಬೆಂಬಲಿಸುತ್ತಿದ್ದರು. ಅದಕ್ಕಾಗಿಯೇ 
ಜೆ ಎನ್ ಯು ವಿವಾದದಲ್ಲಿ ಸುದ್ದಿಯಾದ ಕನ್ಹಯ್ಯಾ  ಕುಮಾರ್ ಹಾಗೂ ಉಮರ್ ಖಾಲಿದ್ ಮತ್ತು ಗುಜರಾತ್ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿಯವರನ್ನು ತನ್ನ 'ಪುತ್ರರು' ಎಂದೇ ಘೋಷಿಸಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಈ ಮೂವರು ಯುವನಾಯಕರ ಜೊತೆ ಅವರು ಆಪ್ತ ಒಡನಾಟವನ್ನು ಹೊಂದಿದ್ದು ಅವರ ಚಳವಳಿಗಳ ಕುರಿತು ಸದಾ ಮೆಚ್ಚುಗೆಯ ಮಾತುಗಳನ್ನಾಡಿ, ಅವರಿಗೆ ಉಡುಗೊರೆಗಳನ್ನು ನೀಡಿ ಸಂಭ್ರಮಿಸುತ್ತಿದ್ದರು.

ಅವರು ದೇಶದ ಭವಿಷ್ಯ ಎಂದು ಆಗಾಗ ಹೇಳುತ್ತಿದ್ದರು. ಅವರು ಮಾತ್ರವಲ್ಲದೆ ರಾಜ್ಯದಲ್ಲೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಯುವಜನರಿಗೆ "ನೀವು ನನ್ನ ಮಕ್ಕಳು" ಎಂದೇ ಕರೆದು ಪ್ರೋತ್ಸಾಹಿಸುತ್ತಿದ್ದರು. 

ಬೆಂಗಳೂರಿನ ವಿಜಯ ಹೈ ಸ್ಕೂಲ್ ಹಾಗೂ ಸೆಂಟ್ರಲ್ ಕಾಲೇಜುಗಳಲ್ಲಿ ಅಧ್ಯಯನ ಮಾಡಿರುವ ಗೌರಿ ವಿದೇಶದಲ್ಲಿ ಪತ್ರಿಕೋದ್ಯಮ ತರಬೇತಿ ಪಡೆದಿದ್ದರು. ಇಂಗ್ಲಿಷ್ ಪತ್ರಿಕೋದ್ಯಮದಲ್ಲಿ ಉನ್ನತ ಸ್ಥಾನ ತಲುಪಬಹುದಾಗಿದ್ದ ಗೌರಿ ತಮ್ಮ ತಂದೆಯ ನಿಧನದ ಬಳಿಕ ಅದನ್ನು ಬಿಟ್ಟು ಕನ್ನಡ ಪತ್ರಿಕೋದ್ಯಮ ಪ್ರವೇಶಿಸಿ ಲಂಕೇಶ್ ಪತ್ರಿಕೆಯನ್ನು ಮುನ್ನಡೆಸಿದರು.

ಅವರು ಕೆಲವು ನಕ್ಸಲ್ ನಾಯಕರನ್ನು ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X