Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಕ್ಕಳಿಗೆ ಪಠ್ಯದ ಜತೆಗೆ ಪರಿಶ್ರಮದ ಪಾಠ...

ಮಕ್ಕಳಿಗೆ ಪಠ್ಯದ ಜತೆಗೆ ಪರಿಶ್ರಮದ ಪಾಠ ಕಲಿಸಿ: ಶಾಸಕ ರಫೀಕ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ5 Sept 2017 11:57 PM IST
share
ಮಕ್ಕಳಿಗೆ ಪಠ್ಯದ ಜತೆಗೆ ಪರಿಶ್ರಮದ ಪಾಠ ಕಲಿಸಿ: ಶಾಸಕ ರಫೀಕ್ ಅಹ್ಮದ್

ತುಮಕೂರು, ಸೆ.5: ಮಕ್ಕಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಪಠ್ಯಕ್ರಮದೊಂದಿಗೆ ಪರಿಶ್ರಮದ ಪಾಠ ಕಲಿಸಬೇಕೆಂದು ಶಾಸಕ ಡಾ.ಎಸ್. ರಫೀಕ್ ಅಹ್ಮದ್ ಕರೆ ನೀಡಿದ್ದಾರೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಾ. ಎಚ್.ಎಂ.ಗಂಗಾಧರಯ್ಯ ಸ್ಮಾರಕ ಭವನದಲ್ಲಿಂದು ಆಯೋಜಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 130ನೆ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಶಿಕ್ಷಕ, ಉಪ ರಾಷ್ಟ್ರಪತಿ, ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿ ದೇಶಕ್ಕೆ ಅಪಾರ ಕೊಡುಗೆ ನೀಡಿದ ಡಾ.ರಾಧಾಕೃಷ್ಣನ್ ಅವರ ಗೌರವ ಸೂಚಕವಾಗಿ ಪ್ರತೀ ವರ್ಷ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಯಾರೇ ಆಗಲಿ ಇಂದು ಉನ್ನತ ಮಟ್ಟ ತಲುಪಿದ್ದರೆ ಅದಕ್ಕೆ ಅವರ ಶಿಕ್ಷಕರು ನೀಡಿದ ಶಿಕ್ಷಣವೇ ಕಾರಣವೆಂದು ತಿಳಿಸಿದ ಅವರು, ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಜ್ಞಾನಾರ್ಜನೆಗಾಗಿ ಬಳಸಿಕೊಳ್ಳದೆ ಕಾಲಹರಣ, ಆಟಗಳಿಗಾಗಿ ಉಪಯೋಗಿಸುತ್ತಿದ್ದಾರೆ ಎಂದು ತಿಳಿಸಿದರು.

ಬ್ಲೂವೇಲ್‍ನಂತಹ ಆಕರ್ಷಣೆಯ ಆಟಗಳಿಂದ ಮಕ್ಕಳ ಮನಸಿನ ಮೇಲಾಗುತ್ತಿರುವ ಪ್ರತಿಕೂಲ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಬೇಕೆಂದರಲ್ಲದೆ ಪಠ್ಯಕ್ರಮದೊಂದಿಗೆ ನೈತಿಕತೆ, ಪ್ರಾಮಾಣಿಕತೆ, ಜೀವನದ ಮೌಲ್ಯಗಳನ್ನು ಕಲಿಸಬೇಕು ಎಂದು ಕಿವಿಮಾತು ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಸುರೇಶ್‍ಗೌಡ ಮಾತನಾಡಿ, ಡಾ.ರಾಧಾಕೃಷ್ಣನ್ ಅವರು ನಡೆದ ದಾರಿಯಲ್ಲಿ ಶಿಕ್ಷಕರು ಸಾಗಬೇಕು.ಶಿಕ್ಷಣ ವ್ಯವಸ್ಥೆ ಉತ್ತಮವಾಗಿದ್ದರೆ ಆ ದೇಶದ ಆರ್ಥಿಕ,ಸಾಮಾಜಿಕ ಪರಿಸ್ಥಿತಿ ಸುಧಾರಣೆಯಲ್ಲಿರುತ್ತದೆ.  ಇಲ್ಲದಿದ್ದಲ್ಲಿ ಅರಾಜಕತೆಯುಂಟಾಗಿ ದೇಶದ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತದೆ.ಇಂದಿನ ವಿದ್ಯಾರ್ಥಿಗಳು ಬುದ್ಧಿವಂತರಿದ್ದು ಶಿಕ್ಷಕರೂ ಸಹ ಅವರ ಬೌದ್ಧಿಕ ಮಟ್ಟಕ್ಕನುಗುಣವಾಗಿ ಬದಲಾದ ಕಾಲಕ್ಕೆ ತಕ್ಕಂತೆ ಬೋಧಿಸಬೇಕೆಂದು ಸಲಹೆ ನೀಡಿದರು. 

ತುಮಕೂರು ವಿವಿಯ ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ. ನಿತ್ಯಾನಂದ ಬಿ.ಶೆಟ್ಟಿ ಮಾತನಾಡಿ, ಶಿಕ್ಷಕರು ತಮ್ಮ ಬೋಧನಾ ಕ್ರಮದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ಬೋಧನಾ ಕ್ರಮವನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳಲು ಹಾಗು ತಿದ್ದಿಕೊಳ್ಳಲು ಅನುಕೂಲವಾಗುತ್ತದೆ. ಮೌಲ್ಯಮಾಪನದ ಬಹಿಷ್ಕಾರ, ಪ್ರಯೋಜನಾ ವಾದಿಯಾಗಿ ಶಿಕ್ಷಕ ವೃತ್ತಿಯನ್ನು ಮಾಡದೆ ಧ್ಯೇಯದ ದೃಷ್ಟಿಯಿಂದ ಸೇವೆ ಸಲ್ಲಿಸಬೇಕೆಂದು ತಿಳಿಸಿದರು. 

ವಿಧಾನಪರಿಷತ್ ಸದಸ್ಯ ಕಾಂತರಾಜು ಮಾತನಾಡಿ, ಶಿಕ್ಷಕರು ದೇಶವನ್ನು ಕಟ್ಟುವ ಆಧಾರ ಸ್ತಂಭಗಳಿದ್ದಂತೆ. ತಮ್ಮ ವಿದ್ಯಾರ್ಥಿಗಳನ್ನು ಮಾದರಿ ಪ್ರಜೆಗಳನ್ನಾಗಿ ರೂಪಿಸಬೇಕೆಂದು ಶಿಕ್ಷಕರಿಗೆ ಕಿವಿ ಮಾತು ಹೇಳಿದರು. 

ಈ ವೇಳೆ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ತಲಾ 6 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ, ಖಾಸಗಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ತಲಾ 6 ಶಿಕ್ಷಕರಿಗೆ ಸಾಧಕ ಪ್ರಶಸ್ತಿ ನೀಡಲಾಯಿತು. ಅಲ್ಲದೆ ನಿವೃತ್ತಿ ಹೊಂದಿದ 52 ಪ್ರಾಥಮಿಕ ಹಾಗೂ 34 ಪ್ರೌಢಶಾಲಾ ಶಿಕ್ಷಕರನ್ನು ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರು ಶಿಕ್ಷಕರ ಸೇವೆಯನ್ನು ಮೆಚ್ಚಿ ನೀಡಿರುವ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಗೂಳರವಿ ಶಾಲೆಯ ಡಿ.ಎಸ್.ಪ್ರಕಾಶ್ ಹಾಗೂ ಎಂಪ್ರೆಸ್ ಶಾಲೆಯ ವಿ.ಟಿ.ಕೃಷ್ಣಮೂರ್ತಿ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷ ಗಂಗಾಂಜನೇಯ, ಡಿಡಿಪಿಐ ಕೆ.ಮಂಜುನಾಥ,ವಿವಿಧ ಶಿಕ್ಷಣ ಸಂಘಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕ ವೃಂದದವರು ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X