ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು
ಗಂಗೊಳ್ಳಿ, ಸೆ.5: ಗಂಗೊಳ್ಳಿ ಬಾವಿಕಟ್ಟೆಯ ಸಮೀಪ ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬಾವಿಕಟ್ಟೆಯ ರಾಜೇಶ್ ಎಂದು ಗುರುತಿಸಲಾಗಿದೆ. ಸೆ.4ರಂದು ರಾತ್ರಿ ವೇಳೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ರಾಜೇಶ್ಗೆ ತ್ರಾಸಿ ಕಡೆ ಯಿಂದ ಗಂಗೊಳ್ಳಿ ಕಡೆಗೆ ಹೋಗುತ್ತಿದ್ದ ಪ್ರಮೋದ್ ಗಾಣಿಗ ಎಂಬವರ ಬೈಕ್ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಾಜೇಶ್ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ.5ರಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಮೃತಪಟ್ಟರು.
ಈ ಅಪಘಾತದಿಂದ ಬೈಕ್ ಸವಾರ ಪ್ರಮೋದ್ ಗಾಣಿಗ ಹಾಗೂ ಸಹ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story