ಸ್ಕೂಟರ್ ಆಯತಪ್ಪಿ ಬಿದ್ದು ಯುವಕ ಮೃತ್ಯು

ಬೆಂಗಳೂರು, ಸೆ.7:ಶರವೇಗವಾಗಿ ಸ್ಕೂಟರ್ನಲ್ಲಿ ಚಲಿತ್ತಿದ್ದ ಯುವಕನೋರ್ವ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕೋಡಿಯಾಲದ ನಾಗರಾಜ್(28) ಮೃತಪಟ್ಟ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.
ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಅವರು ರಾತ್ರಿ 7:30ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್ನಲ್ಲಿ ನೈಸ್ ರಸ್ತೆಯ ಸೊಂಪುರ ಟೋಲ್ ಬಳಿ ಹೋಗುತ್ತಿದ್ದಾಗ ಆಯತಪ್ಪಿ ಕೆಳಗೆಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story





