Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರೊ.ಇಜಾಝುದ್ದೀನ್ ಸೌಹಾರ್ದ ಶಿಲ್ಪಿ:...

ಪ್ರೊ.ಇಜಾಝುದ್ದೀನ್ ಸೌಹಾರ್ದ ಶಿಲ್ಪಿ: ಶಿವರುದ್ರ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ7 Sept 2017 7:37 PM IST
share
ಪ್ರೊ.ಇಜಾಝುದ್ದೀನ್ ಸೌಹಾರ್ದ ಶಿಲ್ಪಿ: ಶಿವರುದ್ರ ಸ್ವಾಮಿ

ಬೆಂಗಳೂರು, ಸೆ.7: ನಾಡಿಗೆ ಅತ್ಯಗತ್ಯವಾಗಿರುವ ಸಾಮರಸ್ಯವನ್ನು ತಮ್ಮ ಬದುಕಿನುದ್ದಕ್ಕೂ ಅಳವಡಿಸಿಕೊಂಡು ಬಂದಿದ್ದ ಪ್ರೊ.ಇಜಾಝುದ್ದೀನ್ ನಿಜಕ್ಕೂ ಸೌಹಾರ್ದ ಶಿಲ್ಪಿ ಎಂದು ಬೇಲಿಮಠದ ಶ್ರೀ ಶಿವರುದ್ರಸ್ವಾಮಿ ಬಣ್ಣಿಸಿದರು.

ಗುರುವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಖಿಲ ಕರ್ನಾಟಕ ಮಹಮದೀಯರ ವೇದಿಕೆಯು ಕನ್ನಡ ಶ್ರೀಸಾಮಾನ್ಯರ ಕೂಟದ ಸಹಯೋಗ ದೊಂದಿಗೆ ಆಯೋಜಿಸಿದ್ದ ‘ಸೌರ್ಹಾದ ಶಿಲ್ಪಿ ಪ್ರೊ.ಇಜಾಝುದ್ದೀನ್ ನುಡಿನಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆತ್ಮವಿಶ್ವಾಸದಲ್ಲಿ ಕ್ರಿಯಾಶಕ್ತಿಯಿದೆ ಎಂದು ನಂಬಿದ್ದ ಇಜಾಝುದ್ದೀನ್, ಅದರಿಂದಲೇ ಪ್ರೀತಿ, ವಿಶ್ವಾಸ, ಗೌರವ ಎಲ್ಲವನ್ನೂ ಪಡೆದು ಇತರರಿಗೂ ಮಾದರಿಯಾದರು. ಕೇವಲ ನುಡಿಯೊಳಗೆ ಸೀಮಿತವಾಗದೆ, ತಮ್ಮ ಆಚರಣೆಯಲ್ಲಿಯೂ ನಿಜವಾದ ಸಾಮರಸ್ಯದ ಸಂಕೇತವಾಗಿದ್ದರು ಎಂದು ಶಿವರುದ್ರಸ್ವಾಮಿ ಸ್ಮರಿಸಿಕೊಂಡರು.

ಶಿಕ್ಷಣ ತಜ್ಞ ಪ್ರೊ.ಕೆ.ಇ.ರಾಧಾಕೃಷ್ಣ ಮಾತನಾಡಿ, ಶಿಷ್ಯರ ಪ್ರೀತಿ ಆದರಗಳಿಗೆ ಪಾತ್ರವಾಗಿದ್ದ ಅಪರೂಪದ ಪ್ರಾಧ್ಯಾಪಕ ಇಜಾಝಾದ್ದೀನ್. ಅವರನ್ನು ಗುರುತಿಸಿ ರಾಮಕೃಷ್ಣ ಹೆಗಡೆ ತಮ್ಮ ಅಧಿಕಾರವಧಿಯಲ್ಲಿ ವಿಧಾನಪರಿಷತ್ತಿನ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ್ದರು ಎಂದರು.

ಸೂಫಿ ಪಂಥದಿಂದ ಈ ದೇಶದಲ್ಲಿ ಭಕ್ತಿ ಭಾವಗಳು ಹರಿದು ಬಂದವು. ಅಂತಹ ಮಹಾನ್ ಸೂಫಿ ಸಂತ ಇಜಾಝುದ್ದೀನ್ ಭಕ್ತಿಯ ಬೆಳೆಯನ್ನು ಬೆಳೆಸಿದ ಮೇಳೈಸಿದ ಅಪ್ರತಿಮ ವಾಗ್ಮಿ ಎಂದರು.

ಶಿಕ್ಷಣ ತಜ್ಞ ಡಾ.ಟಿ.ಎನ್.ಚಂದ್ರಕಾಂತ್ ಮಾತನಾಡಿ, ಇಜಾಝುದ್ದೀನ್ ಸ್ಮರಣಾರ್ಥ ನಾಡಿನ ಸೌಹಾರ್ದತೆಗೆ ಶ್ರಮಿಸುವ ಮಹನೀಯರನ್ನು ಗುರುತಿಸಿ ಪ್ರತಿವರ್ಷ ಒಂದು ಪ್ರಶಸ್ತಿಯನ್ನು ಸ್ಥಾಪಿಸಬೇಕು ಕರೆ ನೀಡಿದರು.

ಶಾಸಕ ಡಾ.ಅಶ್ವತ್ಥನಾರಾಯಣ ಮಾತನಾಡಿ, ಇಜಾಝುದ್ದೀನ್ ಸ್ಮರಣೆಯಲ್ಲಿ ವಿಶ್ವವಿದ್ಯಾನಿಲಯದಲ್ಲಿ ಪೀಠವನ್ನು ಸ್ಥಾಪಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗುವುದು. ತಪಸ್ವಿಯ ಜೀವನ ನಡೆಸುತ್ತಾ ಸಮಾಜಕ್ಕೆ ಅಗತ್ಯವಾದ ಸಾಮರಸ್ಯದ ಸಂದೇಶವನ್ನು ನೀಡಿದ ಮಹಾನುಭಾವ ಎಂದು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಕವಯತ್ರಿ ಹಾಜಿರಾ ಖಾನಂ ಇಜಾಝುದ್ದೀನ್ ಕುರಿತಾದ ಕವನವನ್ನು ವಾಚಿಸಿದರು. ಕನ್ನಡ ಶ್ರೀಸಾಮಾನ್ಯರ ಕೂಟದ ಅಧ್ಯಕ್ಷ ಶ್ರ.ದೇ. ಪಾರ್ಶ್ವನಾಥ, ಮಹಮದೀಯರ ಕನ್ನಡ ವೇದಿಕೆಯ ಅಧ್ಯಕ್ಷ ಸಮೀಉಲ್ಲಾಖಾನ್, ವಚನಜ್ಯೋತಿ ಬಳಗದ ಅಧ್ಯಕ್ಷ ಎಸ್.ಪಿನಾಕಪಾಣಿ, ಇಜಾಝುದ್ದೀನ್ ಅವರ ಬಾಲ್ಯದ ಸಹಪಾಠಿಗಳಾದ ತುಡಾ ಮಾಜಿ ಅಧ್ಯಕ್ಷ ಶಿವಮೂರ್ತಿ, ತುಮಕೂರು ಛೇಂಬರ್ಸ್‌ ಆಫ್ ಕಾಮರ್ಸ್‌ನ ಕಾರ್ಯದರ್ಶಿ ಅಬ್ದುಲ್ ಜಲೀಲ್, ವಕ್ಫ್ ಕೌನ್ಸಿಲ್ ನಿರ್ದೇಶಕ ನಜೀರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X