Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೌಶಲ ವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಯೂ...

ಕೌಶಲ ವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಯೂ ಆಗಬೇಕು: ಪ್ರೊ.ಎನ್.ಆರ್.ಶೆಟ್ಟಿ

ಮಂಗಳೂರು ವಿವಿಯಲ್ಲಿ ಶಿಕ್ಷಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ7 Sept 2017 7:52 PM IST
share
ಕೌಶಲ ವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಯೂ ಆಗಬೇಕು: ಪ್ರೊ.ಎನ್.ಆರ್.ಶೆಟ್ಟಿ

ಕೊಣಾಜೆ, ಸೆ. 7: ಶಿಕ್ಷಣ ಸಂಸ್ಥೆಗಳು ಉತ್ತಮ ಆಡಳಿತದ ಜೊತೆಗೆ ಗುಣಮಟ್ಟದ ಶಿಕ್ಷಣಕ್ಕೂ ಗಮನ ಹರಿಸಬೇಕು. ಶಿಕ್ಷಣದಲ್ಲಿ ಬದಲಾವಣೆ ಎಂಬುದು ಅರ್ಥ ರಹಿತವಾಗಬಾರದು. ಪರೀಕ್ಷೆಯಿಂದ ಮೊದಲ್ಗೊಂಡು ಎಲ್ಲ ಬಗೆಯಲ್ಲೂ ಸಮಗ್ರ ಅಧ್ಯಯನ ಅಗತ್ಯ. ವಿದ್ಯಾದಾನ ಶ್ರೇಷ್ಠವಾಗಿದ್ದು ಆಧುನಿಕ ಕಾಲಘಟ್ಟದಲ್ಲಿ ಶಿಕ್ಷಣದಲ್ಲಿ ಬಹಳಷ್ಟು ಸವಾಲುಗಳಿವೆ. ಭಾರತ ಅಭಿವೃದ್ಧಿ ಸಾಧಿಸುತ್ತಾ ಮುಂದುವರಿಯುತ್ತಿದ್ದು ಭಾರತಕ್ಕೆ ಯುವ ಸಮುದಾಯ ಬಲ ನೀಡಿದೆ. ಹಾಗಾಗಿ ಇಲ್ಲಿ ಬದಲಾವಣೆಗೆ ಸಾಕಷ್ಟು ಅವಕಾಶಗಳಿದ್ದು ಕೌಶಲ್ಯ ವೃದ್ಧಿಯತ್ತ ಗಮನ ಹರಿಸುತ್ತಾ ಉದ್ಯೋಗ ಸೃಷ್ಟಿಸುವ ಕಾರ್ಯ ನಡೆಯಬೇಕು ಎಂದು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ. ಎನ್. ಆರ್. ಶೆಟ್ಟಿ ಹೇಳಿದರು.

ಅವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಜ್ಞಾನ ಪಸರಿಸುತ್ತಾ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಶಿಕ್ಷಕರನ್ನು ಗೌರವಿಸುವ ಸಲುವಾಗಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದ್ದು ಆ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸುವ ಶಿಕ್ಷಕರ ಮಹತ್ವವನ್ನು ಸಮಾಜಕ್ಕೆ ಸಾರಿದಂತಾಗಿದೆ ಎಂದರು.

ಭಾರತದ ಶಿಕ್ಷಣ ವ್ಯವಸ್ಥೆ ಹಲವು ಶತಮಾನಗಳ ಹಿಂದೆಯೇ ಪ್ರಪಂಚದ ಇತರ ರಾಷ್ಟ್ರಗಳ ಗಮನ ಹರಿಸಿತ್ತು. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಗುರುಕುಲ ಶಿಕ್ಷಣ ಪದ್ಧತಿ ಪರಿಣಾಮಕಾರಿ ಪ್ರಭಾವ ಬೀರಿತ್ತು. ಚಾಣಕ್ಯನಂತಹ ಖ್ಯಾತ ಅರ್ಥಶಾಸ್ತ್ರಜ್ಞರು ಗುರುಕುಲ ಪದ್ಧತಿಯಲ್ಲಿಯೇ ಕಲಿತವರು. ಹಾಗೆಯೇ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದ ನಲಂದಾ, ತಕ್ಷಶಿಲಾ ವಿಶ್ವವಿದ್ಯಾಲಯಗಳು ಇಂದಿಗೂ ನಮ್ಮ ಶಿಕ್ಷಣದ ಹೆಗ್ಗುರುತಾಗಿ ಉಳಿದಿದೆ. ಮಂಗಳೂರು ವಿವಿ ಕಳೆದ ಕೆಲವು ವರ್ಷಗಳಲ್ಲಿ ಅಮೂಲಾಗ್ರ ಬದಲಾವಣೆ ಕಂಡಿದ್ದು ನಿಜಕ್ಕೂ ಶ್ಲಾಘನೀಯ ಎಂದು ಸಂತಸ ವ್ಕಕ್ತಪಡಿಸಿದರು.

ಮಂಗಳೂರು ವಿವಿಯ ಕುಲಪತಿ ಪ್ರೊ.ಕೆ. ಭೈರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿವಿಯ ವ್ಯಾಪ್ತಿಯಲ್ಲಿನ ಬೋಧನ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಅಫ್ ಇಂಡಿಯಾ ಯುನಿವರ್ಸಿಟಿಯ ವಿಶ್ರಾಂತ ಕುಲಪತಿ ಪ್ರೊ.ಎ. ಜಯಗೋವಿಂದ, ಮಣಿಪಾಲ ಮಾಧವ ಪೈ ಸ್ಮಾರಕ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪ್ರೊ. ಶ್ರೀಪತಿ ತಂತ್ರಿ ಹಾಗೂ ಮಡಿಕೇರಿಯ ಫೀಲ್ಡ್ ಮಾರ್ಶಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಪ್ರೊ. ಪುಷ್ಪಾ ಪುಟ್ಟಣ್ಣ ಅವರನ್ನು ಸನ್ಮಾನಿಸಲಾಯಿತು. ಬಳಿಕ ಸನ್ಮಾನಿತರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಕೆ. ಭೈರಪ್ಪ ಅವರು ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆಸಿದ ಸಾಧನೆಯ ವಿವರಗಳುಳ್ಳ ಸಂಚಿಕೆಯನ್ನು ಪ್ರೊ.ಎ್.ಅರ್. ಶೆಟ್ಟಿ ಬಿಡುಗಡೆಗೊಳಿಸಿದರು.

ಮಂಗಳೂರು ವಿವಿಯ ಟೀಚರ್ಸ್ ಎಸೋಸಿಯೇಶನ್‌ನ ನಿರ್ದೇಶಕ ಪ್ರೊ. ಇಸ್ಮಾಯಿಲ್, ವಿವಿಯ ಹಣಕಾಸು ಅಧಿಕಾರಿ ಡಾ. ದಯಾನಂದ ನಾಯಕ್ ಹಾಗೂ ವಿವಿಯ ದೈಹಿಕ ಶಿಕ್ಷಕ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸನ್ಮಾನಪತ್ರ ವಾಚಿಸಿದರು.

ಇದೇ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಕೊಡಲಾಗುವ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಇತಿಹಾಸ ವಿಭಾಗದ ಪ್ರೊ.ಉದಯ ಬಾರ್ಕೂರು ಹಾಗೂ ವಿಜ್ಞಾನ ವಿಭಾಗದ ಪ್ರೊ.ನಾರಾಯಣ ಅವರು ಪಡೆದುಕೊಂಡರು.

ಮಂಗಳೂರು ವಿವಿಯ ಕುಲಸಚಿವ ಪ್ರೊ.ಕೆ.ಎಂ. ಲೋಕೇಶ್ ಸ್ವಾಗತಿಸಿದರು. ವಿವಿಯ ಡಾ. ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಹಾಗೂ ವಿವಿಯ ಆಂಗ್ಲಭಾಷಾ ವಿಭಾಗದ ಪ್ರಾಧ್ಯಾಪಕ ಪ್ರೊ. ರವಿಶಂಕರ್ ಕಾರ್ಯಕ್ರಮ ನಿರೂಪಿಸಿದರು. ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಎಂ. ಖಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X