Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀರ್ಪಿಗೆ ಮುನ್ನ ಹಿಂಸಾಚಾರ ಪ್ರಚೋದಿಸಲು...

ತೀರ್ಪಿಗೆ ಮುನ್ನ ಹಿಂಸಾಚಾರ ಪ್ರಚೋದಿಸಲು ಐದು ಕೋ.ರೂ.ನೀಡಿದ್ದ ಡೇರಾ ಸಚ್ಚಾ ಸೌದಾ

ವಾರ್ತಾಭಾರತಿವಾರ್ತಾಭಾರತಿ7 Sept 2017 7:55 PM IST
share
ತೀರ್ಪಿಗೆ ಮುನ್ನ ಹಿಂಸಾಚಾರ ಪ್ರಚೋದಿಸಲು ಐದು ಕೋ.ರೂ.ನೀಡಿದ್ದ ಡೇರಾ ಸಚ್ಚಾ ಸೌದಾ

ಪಂಚಕುಲಾ,ಸೆ.7: ಅತ್ಯಾಚಾರ ಪ್ರಕರಣಗಳಲ್ಲಿ ಗುರ್ಮೀತ್ ಸಿಂಗ್‌ನನ್ನು ಅಪರಾಧಿಯೆಂದು ಸಿಬಿಐ ವಿಶೇಷ ನ್ಯಾಯಾಲಯವು ಘೋಷಿಸಿದ ಬಳಿಕ ಪಂಚಕುಲಾ ದಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಲು ಡೇರಾ ಸಚ್ಚಾ ಸೌದಾ ಕನಿಷ್ಠ ಐದು ಕೋ.ರೂ.ಗಳನ್ನು ನೀಡಿತ್ತು ಎಂದು ವಿಶೇಷ ತನಿಖಾ ತಂಡ(ಸಿಟ್)ವು ಗುರುವಾರ ಬಹಿರಂಗಗೊಳಿಸಿದೆ. ಡೇರಾದ ಪ್ರಮುಖ ಸದಸ್ಯರಾದ ಆದಿತ್ಯ ಇನ್ಸಾನ್, ಹನಿಪ್ರೀತ್ ಇನ್ಸಾನ್ ಮತ್ತು ಸುರೇಂದರ್ ಧಿಮಾನ್ ಇನ್ಸಾನ್ ಅವರನ್ನೊಳಗೊಂಡ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಟ್ ನಡೆಸುತ್ತಿದೆ.

ಡೇರಾ ಆಡಳಿತದಿಂದ ಹಣವನ್ನು ಪಡೆದುಕೊಂಡು ಅದನ್ನು ಹಂಚುವಲ್ಲಿ ಡೇರಾದ ಪಂಚಕುಲಾ ಶಾಖೆಯ ಮುಖ್ಯಸ್ಥ ಚಮಕೌರ್ ಸಿಂಗ್ ಪ್ರಮುಖ ಪಾತ್ರವನ್ನು ವಹಿಸಿದ್ದ ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಮೊಹಾಲಿ ಜಿಲ್ಲೆಯ ಧಾಕೋಲಿ ನಿವಾಸಿಯಾಗಿರುವ ಚಮಕೌರ್ ಆ.28ರಂದು ಉಚ್ಚ ನ್ಯಾಯಾಲಯದ ನಿರ್ದೇಶದಂತೆ ತನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾದ ಬಳಿಕ ಕುಟುಂಬ ಸಹಿತ ನಾಪತ್ತೆಯಾಗಿದ್ದಾನೆ.

ಗುರ್ಮೀತ್ ವಿರುದ್ಧ ತೀರ್ಪು ಹೊರಬಿದ್ದ ಬಳಿಕ ಹಿಂಸಾಚಾರ ಭುಗಿಲ್ಲೆದ್ದಿದ್ದ ಪಂಜಾಬ್‌ನ ವಿವಿಧ ಸ್ಥಳಗಳಿಗೂ ಡೇರಾದಿಂದ ಹಣ ರವಾನೆಯಾಗಿತ್ತು. ಹಿಂಸಾಚಾರದ ವೇಳೆ ಪ್ರಾಣ ಕಳೆದುಕೊಂಡರೆ ಕುಟುಂಬಕ್ಕೆ ಪರಿಹಾರವನ್ನು ನೀಡುವುದಾಗಿಯೂ ಡೇರಾ ಅನುಯಾಯಿಗಳಿಗೆ ತಿಳಿಸಲಾಗಿತ್ತು ಎಂದು ಮೂಲಗಳು ಹೇಳಿದವು.

ಚಮಕೌರ್ ಬಂಧನದ ಬಳಿಕ ಹೆಚ್ಚಿನ ವಿವರಗಳು ಹೊರಬೀಳಲಿವೆ. ಆತನ ಸಂಭಾವ್ಯ ಅಡಗುದಾಣಗಳ ಮೇಲೆ ನಮ್ಮ ತಂಡಗಳು ದಾಳಿಗಳನ್ನು ನಡೆಸುತ್ತಿವೆ ಎಂದು ಹರ್ಯಾಣ ಡಿಜಿಪಿ ಬಿ.ಎಸ್.ಸಂಧು ತಿಳಿಸಿದರು.

ಹಿಂಸಾಚಾರದ ಹಿಂದಿದ್ದ ಅಥವಾ ಬೆಂಬಲ ನೀಡಿದ್ದ ಇನ್ನೂ ಕೆಲವರ ಮೇಲೆ ಪೊಲೀಸರು ನಿಗಾಯಿರಿಸಿದ್ದಾರೆ. ಈ ಪೈಕಿ ಓರ್ವ ಪ್ರಮುಖ ವ್ಯಕ್ತಿ ತೋಟಗಾರಿಕೆ ವಿಜ್ಞಾನಿ ಯಾಗಿದ್ದು, ಹಿಂಸಾಚಾರವನ್ನು ಪ್ರಚೋದಿಸಲು ಈತನೂ ಹಣವನ್ನು ನೀಡಿದ್ದ ಎಂಬ ಬಲವಾದ ಶಂಕೆಯಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X