Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಷ್ಕರ್, ಜೈಶ್ ನಿಯಂತ್ರಣ ಅಗತ್ಯ: ಪಾಕ್...

ಲಷ್ಕರ್, ಜೈಶ್ ನಿಯಂತ್ರಣ ಅಗತ್ಯ: ಪಾಕ್ ವಿದೇಶ ಸಚಿವ ಖವಾಜ ಆಸಿಫ್ ಅಭಿಮತ

ವಾರ್ತಾಭಾರತಿವಾರ್ತಾಭಾರತಿ7 Sept 2017 10:08 PM IST
share
ಲಷ್ಕರ್, ಜೈಶ್ ನಿಯಂತ್ರಣ ಅಗತ್ಯ: ಪಾಕ್ ವಿದೇಶ ಸಚಿವ ಖವಾಜ ಆಸಿಫ್ ಅಭಿಮತ

ಇಸ್ಲಾಮಾಬಾದ್, ಸೆ. 7: ಲಷ್ಕರೆ ತಯ್ಯಬ ಮತ್ತು ಜೈಶೆ ಮುಹಮ್ಮದ್ ಮುಂತಾದ ಭಯೋತ್ಪಾದಕ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಅಗತ್ಯವನ್ನು ಪಾಕಿಸ್ತಾನದ ವಿದೇಶ ಸಚಿವ ಖವಾಜ ಆಸಿಫ್ ಮನಗಂಡಿದ್ದಾರೆ. ಆಗ, ‘ನಮ್ಮ ಕೆಲಸಗಳನ್ನು ನಾವು ಮಾಡಿದ್ದೇವೆ’ ಎಂಬುದಾಗಿ ವಿಶ್ವ ಸಮುದಾಯಕ್ಕೆ ಪಾಕಿಸ್ತಾನ ಪ್ರತ್ಯುತ್ತರ ನೀಡಬಹುದು ಎಂದು ಹೇಳಿದ್ದಾರೆ.

ಅವರು ‘ಜಿಯೋ ನ್ಯೂಸ್’ ಚಾನೆಲ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಪಾಕಿಸ್ತಾನದಲ್ಲಿ ನೆಲೆಸಿರುವ ಲಷ್ಕರೆ ತಯ್ಯಬ ಮತ್ತು ಜೈಶೆ ಮುಹಮ್ಮದ್ ಭಯೋತ್ಪಾದಕ ಸಂಘಟನೆಗಳು ಇಸ್ಲಾಮಿಕ್ ಸ್ಟೇಟ್ ಮತ್ತು ಅಲ್-ಖಾಯಿದ ಗುಂಪುಗಳಿಗೆ ಸಮವಾಗಿದೆ ಎಂಬ ‘ಬ್ರಿಕ್ಸ್’ ಘೋಷಣೆಯ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸುತ್ತಿದ್ದರು.

ಲಷ್ಕರೆ ತಯ್ಯಬ ಮತ್ತು ಜೈಶೆ ಮುಹಮ್ಮದ್ ಪ್ರಾದೇಶಿಕ ಭದ್ರತೆಗೆ ಅಪಾಯಕಾರಿಯಾಗಿವೆ ಎಂಬುದಾಗಿ ‘ಬ್ರಿಕ್ಸ್’ ಘೋಷಣೆ ಹೇಳಿತ್ತು.

ಭಯೋತ್ಪಾದನೆಯನ್ನು ನಿಭಾಯಿಸುವ ವಿಷಯದಲ್ಲಿ ಜಗತ್ತಿನಲ್ಲಿ ಬದಲಾವಣೆಗಳು ಆಗುತ್ತಿದ್ದು, ಭಯೋತ್ಪಾದನೆ ನಿಗ್ರಹ ವಿಷಯದಲ್ಲಿ ಚೀನಾ ಮುಂತಾದ ನಮ್ಮ ಸ್ನೇಹಿತರನ್ನು ನಾವು ಇನ್ನೂ ಹೆಚ್ಚಿನ ‘ಪರೀಕ್ಷೆ’ಗೊಳಪಡಿಸುವುದು ಸಾಧ್ಯವಿಲ್ಲ ಎಂದರು.

‘‘ನಮ್ಮ ದೇಶದಲ್ಲಿರುವ ಇಂಥ ಸಂಘಟನೆಗಳ ಬಗ್ಗೆ ನಾವು ಕುರುಡರಾದರೆ, ನಾವು ಇಂಥ ಮುಜುಗರದ ಸ್ಥಿತಿಯನ್ನು ಮುಂದೆಯೂ ಎದುರಿಸುತ್ತಲೇ ಇರುತ್ತೇವೆ’’ ಎಂದರು.

ಹಿಂದಿನ ತಪ್ಪು ಮುಂದುವರಿಸುವುದು ಬೇಡ

‘‘ನಮ್ಮ ಹಿಂದಿನ ತಪ್ಪನ್ನು ಮುಂದುವರಿಸಬಾರದು’’ ಎಂದರು. 1980ರ ದಶಕದಲ್ಲಿ ಅಪ್ಘಾನಿಸ್ತಾನದಲ್ಲಿನ ಸೋವಿಯತ್ ಆಕ್ರಮಣ ಪಡೆಗಳ ವಿರುದ್ಧದ ಅಮೆರಿಕ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇರಿಕೊಂಡ ಬಳಿಕ ಭಯೋತ್ಪಾದಕ ಗುಂಪುಗಳಿಗೆ ಲಭಿಸಿದ ಉತ್ತೇಜನದ ಬಗ್ಗೆ ಅವರು ಪ್ರಸ್ತಾಪಿಸುತ್ತಿದ್ದರು.

‘‘ನಮ್ಮ ದೇಶದಲ್ಲಿ ಜೈಶೆ ಮುಹಮ್ಮದ್ ಮತ್ತು ಲಷ್ಕರೆ ತಯ್ಯಬ ಉಗ್ರ ಸಂಘಟನೆಗಳ ಚಟುವಟಿಕೆಗಳ ಮೇಲೆ ನಾವು ಕೆಲವು ನಿರ್ಬಂಧಗಳನ್ನು ವಿಧಿಸಬೇಕು. ಆಗ, ನಾವು ಸರಿಯಾಗಿದ್ದೇವೆ ಎಂದು ಜಾಗತಿಕ ಸಮುದಾಯಕ್ಕೆ ಹೇಳಬುದಾಗಿದೆ’’ ಎಂದು ಪಾಕ್ ವಿದೇಶ ಸಚಿವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X