Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಳೆ ಜಿಎಸ್‌ಟಿ ಮಂಡಳಿ ಸಭೆ

ನಾಳೆ ಜಿಎಸ್‌ಟಿ ಮಂಡಳಿ ಸಭೆ

ತೆರಿಗೆ ವೈರುಧ್ಯಗಳ ನಿವಾರಣೆ,ಕಾರುಗಳ ಮೇಲೆ ಸೆಸ್ ಏರಿಕೆ ಪ್ರಮಾಣ ನಿಗದಿ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ8 Sept 2017 9:29 PM IST
share
ನಾಳೆ ಜಿಎಸ್‌ಟಿ ಮಂಡಳಿ ಸಭೆ

ಹೈದರಾಬಾದ್,ಸೆ.8: ಶನಿವಾರ ಇಲ್ಲಿ ಸಭೆ ಸೇರಲಿರುವ ಜಿಎಸ್‌ಟಿ ಮಂಡಳಿಯು ಹಲವಾರು ಸಾಮಾನ್ಯ ಬಳಕೆಯ ವಸ್ತುಗಳ ಮೇಲಿನ ತೆರಿಗೆಗಳಲ್ಲಿನ ವೈರುಧ್ಯಗಳನ್ನು ನಿವಾರಿಸುವ ಜೊತೆಗೆ ಐಷಾರಾಮಿ ಮತ್ತು ಮಧ್ಯಮ ಗಾತ್ರದ ಕಾರುಗಳ ಮೇಲೆ ಸೆಸ್ ಏರಿಕೆಯ ಪ್ರಮಾಣವನ್ನು ನಿಗದಿಗೊಳಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.

ಇತ್ತೀಚಿಗೆ ತಾಂತ್ರಿಕ ತೊಂದರೆಗೊಳಗಾಗಿದ್ದ ಜಿಎಸ್‌ಟಿ ನೆಟ್‌ವರ್ಕ್‌ನಲ್ಲಿ ಮಾಹಿತಿ ತಂತ್ರಜ್ಞಾನ ಸಂಬಂಧಿತ ವಿಷಯಗಳನ್ನೂ ಮಂಡಳಿಯು ಚರ್ಚಿಸಲಿದೆ.

ವಿತ್ತಸಚಿವ ಅರುಣ್ ಜೇಟ್ಲಿ ನೇತೃತ್ವದ, ರಾಜ್ಯ ಹಣಕಾಸು ಸಚಿವರನ್ನೊಳಗೊಂಡಿರುವ ಮಂಡಳಿಯು ಇಡ್ಲಿ/ದೋಸೆ ಹಿಟ್ಟು, ಒಣ ಹುಣಸೆಹಣ್ಣು, ಕಸ್ಟರ್ಡ್ ಪೌಡರ್ ಮತ್ತು ಕಿಚನ್ ಗ್ಯಾಸ್ ಲೈಟರ್ ಸೇರಿದಂತೆ ತೆರಿಗೆ ವೈರುಧ್ಯಗಳನ್ನು ಬೆಟ್ಟು ಮಾಡಲಾಗಿರುವ ಎರಡು ಡಝನ್‌ಗೂ ಅಧಿಕ ಉತ್ಪನ್ನಗಳ ಮೇಲಿನ ತೆರಿಗೆ ದರಗಳ ಇಳಿಕೆಯನ್ನು ಪರಿಶೀಲಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದರು.

ಜುಲೈ 1ರಿಂದ ಜಿಎಸ್‌ಟಿ ಜಾರಿಗೊಂಡ ಬಳಿಕ ತೆರಿಗೆಯಿಂದ ಪಾರಾಗಲು ತಮ್ಮ ಬ್ರಾಂಡ್‌ಗಳ ನೋಂದಣಿಯನ್ನು ರದ್ದುಗೊಳಿಸುತ್ತಿರುವ ಉದ್ಯಮಗಳನ್ನು ನಿಭಾಯಿಸುವ ವ್ಯವಸ್ಥೆಯೊಂದನ್ನೂ ಮಂಡಳಿಯು ರೂಪಿಸಲಿದೆ.

ಬ್ರಾಂಡ್‌ರಹಿತ ಆಹಾರ ವಸ್ತುಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದ್ದರೆ, ಬ್ರಾಂಡೆಡ್ ಮತ್ತು ಪ್ಯಾಕೇಜ್ಡ್ ಆಹಾರ ವಸ್ತುಗಳ ಮೇಲೆ ಶೇ.5ರಷ್ಟು ತೆರಿಗೆಯನ್ನು ಹೇರಲಾಗಿದೆ.

ವಿವಿಧ ಕಾರುಗಳ ಮೇಲೆ ಸೆಸ್ ಏರಿಕೆ ಪ್ರಮಾಣವನ್ನೂ ಶನಿವಾರದ ಸಭೆಯು ನಿರ್ಧರಿಸಲಿದೆ.

ಆ.5ರಂದು ನಡೆದಿದ್ದ ತನ್ನ ಹಿಂದಿನ ಸಭೆಯಲ್ಲಿ ಮಂಡಳಿಯು ಮಧ್ಯಮ ಮತ್ತು ದೊಡ್ಡ ಗಾತ್ರದ ಕಾರುಗಳು, ಎಸ್‌ಯುವಿ ಮತ್ತು ಐಷಾರಾಮಿ ಕಾರುಗಳ ಮೇಲಿನ ಸೆಸ್ ಅನ್ನು ಶೇ.15ರಿಂದ ಶೇ.25ರವರೆಗೆ ಹೆಚ್ಚಿಸಲು ಒಪ್ಪಿಗೆ ನೀಡಿತ್ತು. ಇದಕ್ಕಾಗಿ ಅಧ್ಯಾದೇಶವೊಂದನ್ನು ಹೊರಡಿಲಾಗಿದ್ದು, ಏರಿಕೆಯ ಪ್ರಮಾಣವನ್ನು ಮಂಡಳಿಯು ಈಗ ನಿರ್ಧರಿಸಲಿದೆ.

ವ್ಯಾಪಾರಿಗಳು ಮತ್ತು ಉದ್ಯಮಗಳ ವಿವಿಧ ಅಹವಾಲುಗಳನ್ನು ರಾಜ್ಯಗಳು ಸಭೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ.

ಜಿಎಸ್‌ಟಿ ಜಾರಿಗೊಂಡ ಬಳಿಕ ಕಾರುಗಳ ಬೆಲೆಗಳು ಮೂರು ಲಕ್ಷ ರೂ.ವರೆಗೂ ಇಳಿಕೆಯಾಗಿದ್ದವು. ಈಗ ಕೆಲವು ವರ್ಗಗಳ ಕಾರುಗಳ ಮೇಲಿನ ಸೆಸ್ ಅನ್ನು ಶೇ.25ರ ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಜಿಎಸ್‌ಟಿಗೆ ಮುನ್ನ ಕಾರುಗಳ ಮೇಲೆ ಶೇ.52ರಿಂದ ಶೇ.54.72 ತೆರಿಗೆ ಮತ್ತು ಕೇಂದ್ರೀಯ ಮಾರಾಟ ತೆರಿಗೆ ಹಾಗೂ ಆಕ್ಟ್ರಾಯ್ ಎಂದು ಶೇ.2.5 ಹೆಚ್ಚುವರಿ ತೆರಿಗೆ ಬೀಳುತ್ತಿತ್ತು. ಜಿಎಸ್‌ಟಿ ಜಾರಿಯ ಬಳಿಕ ಕಾರುಗಳ ಮೇಲೆ ಒಟ್ಟೂ ತೆರಿಗೆ ಪ್ರಮಾಣ ಶೇ.43ಕ್ಕಿಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X