ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗೃಹಸಚಿವರಿಗೆ ಮನವಿ
ಬಂಟ್ವಾಳ, ಸೆ. 8: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಇಮ್ತಿಯಾಝ್ ಶಾ ಅವರನ್ನು ಪೊಲೀಸರು ಬಂಧಿಸಿರುವುದನ್ನು ಬಂಟ್ವಾಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ಖಂಡಿಸಿದ್ದು, ಈ ಕುರಿತು ರಾಜ್ಯದ ಗೃಹ ಸಚಿವರಿಗೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಮೂಲಕ ಮನವಿಯನ್ನು ಶುಕ್ರವಾರ ಸಲ್ಲಿಸಿದೆ.
ಅಧ್ಯಕ್ಷ ಮೌನೇಶ ವಿಶ್ವಕರ್ಮ ನೇತೃತ್ವದಲ್ಲಿ ಸಂಘದ ಸದಸ್ಯರು ಈ ಕುರಿತು ಮನವಿ ಸಲ್ಲಿಸಿದ್ದು, ಅವರ ಮೇಲಿನ ಪ್ರಕರಣಗಳನ್ನು ಪರಿಶೀಲಿಸಿ ಹಿಂಪಡೆಯುವಂತೆ ವಿನಂತಿಸಿ, ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ಸಂಘದ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.
Next Story