Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಪುರುಷರ ಹಾಕಿ ನೂತನ ಕೋಚ್ ಆಗಿ...

ಭಾರತದ ಪುರುಷರ ಹಾಕಿ ನೂತನ ಕೋಚ್ ಆಗಿ ಮಾರಿಜಿನ್ ಆಯ್ಕೆ

ಹರೇಂದ್ರ ಸಿಂಗ್ ಮಹಿಳಾ ತಂಡದ ಉನ್ನತ ಪ್ರದರ್ಶನದ ವಿಶೇಷ ಕೋಚ್

ವಾರ್ತಾಭಾರತಿವಾರ್ತಾಭಾರತಿ8 Sept 2017 11:50 PM IST
share
ಭಾರತದ ಪುರುಷರ ಹಾಕಿ ನೂತನ ಕೋಚ್ ಆಗಿ ಮಾರಿಜಿನ್ ಆಯ್ಕೆ

ಹೊಸದಿಲ್ಲಿ, ಸೆ.8: ಭಾರತದ ಪುರುಷರ ತಂಡದ ನೂತನ ಮುಖ್ಯ ಕೋಚ್ ಆಗಿ ಹಾಲೆಂಡ್‌ನ ಜೊಯೆರ್ಡ್ ಮಾರಿಜಿನ್ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ನೂತನ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ತಮ್ಮ ಅಧಿಕೃತ ಟ್ವಿಟರ್ ಪೇಜ್‌ನಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಪ್ರಸ್ತುತ ಮಹಿಳಾ ರಾಷ್ಟ್ರೀಯ ತಂಡದ ಕೋಚ್ ಆಗಿರುವ ಜೊಯೆರ್ಡ್‌ಗೆ ಸೀನಿಯರ್ ಪುರುಷರ ತಂಡಕ್ಕೆ ಕೋಚಿಂಗ್ ನೀಡಿರುವ ಯಾವುದೇ ಅನುಭವವಿಲ್ಲ. ಈ ಹಿನ್ನೆಲೆಯಲ್ಲಿ ಜೊಯೆರ್ಡ್ ಆಯ್ಕೆ ಅಚ್ಚರಿ ಮೂಡಿಸಿದೆ.

ಕಳಪೆ ನಿರ್ವಹಣೆಯ ಹಿನ್ನೆಲೆಯಲ್ಲಿ ಕೋಚ್ ಹುದ್ದೆಯಿಂದ ಉಚ್ಚಾಟಿಸಲ್ಪಟ್ಟಿದ್ದ ಡಚ್‌ನ ರೊಲ್ಯಾಂಟ್ ಒಲ್ಟಮನ್ಸ್ ಅವರಿಂದ ತೆರವಾದ ಸ್ಥಾನಕ್ಕೆ ಜೊಯೆರ್ಡ್‌ರನ್ನು ಆಯ್ಕೆ ಮಾಡಲಾಗಿದೆ.

ವಿಶ್ವಕಪ್ ವಿಜೇತ ಜೂನಿಯರ್ ತಂಡದ ಕೋಚ್ ಹರೇಂದ್ರ ಸಿಂಗ್‌ರನ್ನು ಸೀನಿಯರ್ ಮಹಿಳಾ ತಂಡದ ಉನ್ನತ ಪ್ರದರ್ಶನದ ವಿಶೇಷ ಕೋಚ್ ಆಗಿ ಆಯ್ಕೆ ಮಾಡಲಾಗಿದೆ.

ಮಹಿಳಾ ಹಾಕಿ ತಂಡದೊಂದಿಗೆ ಯುರೋಪ್ ಪ್ರವಾಸದಲ್ಲಿರುವ ಮಾರಿಜಿನ್ ಭಾರತಕ್ಕೆ ವಾಪಸಾದ ಬಳಿಕ ಸೆ.20 ರಂದು ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹರೇಂದ್ರ ಶನಿವಾರವೇ ತಮ್ಮ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ.

‘‘ಭಾರತೀಯ ಸೀನಿಯರ್ ಮಹಿಳಾ ತಂಡದ ಹಾಲಿ ಕೋಚ್ ಜೊಯೆರ್ಡ್ ಮಾರಿಜನ್ ಭಾರತದ ಪುರುಷರ ತಂಡದ ಮುಖ್ಯ ಕೋಚ್ ಆಗಿಯೂ, ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಹರೇಂದ್ರ ಸಿಂಗ್ ಸೀನಿಯರ್ ಮಹಿಳಾ ತಂಡದ ಉನ್ನತ ಪ್ರದರ್ಶನದ ವಿಶೇಷ ಕೋಚ್ ಆಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲು ನನಗೆ ಅತೀವ ಸಂತೋಷವಾಗುತ್ತಿದೆ’’ ಎಂದು ಸಚಿವ ರಾಥೋಡ್ ಟ್ವೀಟ್ ಮಾಡಿದ್ದಾರೆ.

ಮಾರಿಜನ್ ಹಾಗೂ ಹರೇಂದ್ರ ಸಿಂಗ್‌ರನ್ನು 2020ರ ಟೋಕಿಯೊ ಒಲಿಂಪಿಕ್ಸ್ ತನಕ ಕೋಚ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಹಾಕಿ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.

‘‘ಗುರುವಾರ ನಡೆದ ಭಾರತದ ಕ್ರೀಡಾ ಪ್ರಾಧಿಕಾರ ಹಾಗೂ ಹಾಕಿ ಇಂಡಿಯಾ ನಡುವಿನ ಜಂಟಿ ಸಭೆಯ ವೇಳೆ ಹರೇಂದ್ರ ಸಿಂಗ್‌ರನ್ನು ಕೋಚ್‌ರನ್ನಾಗಿ ಆಯ್ಕೆ ಮಾಡಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು. 2016ರಲ್ಲಿ ಲಕ್ನೊದಲ್ಲಿ ನಡೆದ ಜೂನಿಯರ್ ಪುರುಷರ ವಿಶ್ವಕಪ್‌ನಲ್ಲಿ ಕಿರಿಯ ಹಾಕಿ ಆಟಗಾರರು ಪ್ರಶಸ್ತಿ ಜಯಿಸಲು ನೀಡಿದ್ದ ಕೋಚಿಂಗ್‌ನ್ನು ಆಧರಿಸಿ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಸಿಂಗ್ 2008 ರಿಂದ 2009ರ ತನಕ ಪುರುಷರ ಹಾಕಿ ತಂಡದ ಕೋಚ್ ಆಗಿದ್ದರು’’ ಎಂದು ಹಾಕಿ ಇಂಡಿಯಾ ಪ್ರಕಟನೆಯೊಂದರಲ್ಲಿ ತಿಳಿಸಿದೆ.

ಆರಕ್ಕೂ ಅಧಿಕ ತಿಂಗಳಿಂದ ಭಾರತದಲ್ಲಿರುವ ಮಾರಿಜಿನ್ ಭಾರತದ ಪುರುಷರ ತಂಡದ ಮುಖ್ಯ ಕೋಚ್ ಹುದ್ದೆಗೆ ಉತ್ತಮ ಅಭ್ಯರ್ಥಿ ಎಂದು ಸಾಯ್ ಹಾಗೂ ಹಾಕಿ ಇಂಡಿಯಾದ ಜಂಟಿ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಕೋಚ್ ಹುದ್ದೆಗೆ ಜಾಹೀರಾತು ನೀಡುವ ನಿರ್ಧಾರವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಸುದ್ದಿ ಸಂಸ್ಥೆಗೆ ಹಾಕಿ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ಭಾರತದ ಮಹಿಳಾ ತಂಡದ ಕೋಚ್ ಆಗಿ ಆಯ್ಕೆಯಾಗಿರುವ 43ರ ಹರೆಯದ ಮಾರಿಜಿನ್‌ಗೆ ಹಿರಿಯ ಪುರುಷರ ರಾಷ್ಟ್ರೀಯ ತಂಡದಲ್ಲಿ ಕೆಲಸ ಮಾಡಿರುವ ಅನುಭವವಿಲ್ಲ. ಹಾಕಿ ಇಂಡಿಯಾ ಹಾಗೂ ಸಾಯ್ ಒತ್ತಾಯದ ಬಳಿಕ ಕೋಚ್ ಹುದ್ದೆಯ ಕೊಡುಗೆಯನ್ನು ಸ್ವೀಕರಿಸಿದ್ದಾರೆ.

ನಿರ್ಗಮನ ಕೋಚ್ ಒಲ್ಟಮನ್ಸ್ 4 ವರ್ಷಗಳ ಹಿಂದೆ ಉನ್ನತ ಪ್ರದರ್ಶನದ ನಿರ್ದೇಶಕರಾಗಿ ಭಾರತಕ್ಕೆ ಬಂದಿದ್ದರು. ಪಾಲ್ ವ್ಯಾನ್ ಅಸ್ ಉಚ್ಚಾಟನೆಯ ಬಳಿಕ 2015ರಲ್ಲಿ ಭಾರತದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದರು.

ಮಾರಿಜಿನ್‌ರನ್ನು ನೂತನ ಕೋಚ್‌ರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಹಾಕಿ ಸಮುದಾಯ ಅಚ್ಚರಿ ವ್ಯಕ್ತಪಡಿಸಿದೆ. ಮೂರು ಪ್ರಮುಖ ಟೂರ್ನಿಗಳಾದ ಕಾಮನ್‌ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಹಾಗೂ ವಿಶ್ವಕಪ್‌ಗೆ ಮೊದಲು ಅನನುಭವಿ ಮಾರಿಜಿನ್‌ರನ್ನು ಆಯ್ಕೆ ಮಾಡಿರುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಹಾಲೆಂಡ್ ಪರ ಆಡಿರುವ ಮಾರಿಜಿನ್ ಡಚ್‌ನ ಅಂಡರ್-21 ಮಹಿಳಾ ತಂಡ ಹಾಗೂ ಸೀನಿಯರ್ ಮಹಿಳಾ ತಂಡಗಳು ಕ್ರಮವಾಗಿ ವಿಶ್ವಕಪ್ ಹಾಗೂ ಹಾಕಿ ವಿಶ್ವ ಲೀಗ್‌ನಲ್ಲಿ ಚಿನ್ನ ಗೆಲ್ಲಲು ಕೋಚಿಂಗ್ ನೀಡಿದ್ದರು. 2011-14ರ ನಡುವೆ ಹಾಲೆಂಡ್‌ನ ಅಂಡರ್-21 ಪುರುಷರ ತಂಡಕ್ಕೆ ಮುಖ್ಯ ಕೋಚ್ ಆಗಿದ್ದರು.

ಮುಂದಿನ ತಿಂಗಳು ಢಾಕಾದಲ್ಲಿ ಆರಂಭವಾಗಲಿರುವ ಏಷ್ಯಾಕಪ್‌ನ ಮೂಲಕ ಮಾರಿಜಿನ್ ಭಾರತದ ಕೋಚ್ ಆಗಿ ವೃತ್ತಿ ಆರಂಭಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X