Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಸಾಯಿನಾಥರ ‘ಅಸಮಾನತೆಯ ಜಾಗತೀಕರಣ’

ಸಾಯಿನಾಥರ ‘ಅಸಮಾನತೆಯ ಜಾಗತೀಕರಣ’

ವಾರ್ತಾಭಾರತಿವಾರ್ತಾಭಾರತಿ10 Sept 2017 12:13 AM IST
share
ಸಾಯಿನಾಥರ ‘ಅಸಮಾನತೆಯ ಜಾಗತೀಕರಣ’

ಇದು ದೇಶ ಗ್ರಾಮೀಣ ಸಮಸ್ಯೆಗಳನ್ನು ಒಂದಿಷ್ಟಾದರೂ ಗಂಭೀರವಾಗಿ ತೆಗೆದುಕೊಂಡಿದೆಯೆಂದರೆ ಅದರ ಹಿಂದೆ ಹಿರಿಯ ಪತ್ರಕರ್ತ ಪಿ. ಸಾಯಿನಾಥರ ಕೊಡುಗೆ ಬಹುದೊಡ್ಡದು. ಅವರ ಚಿಂತನೆ, ಬರಹಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿವೆ. ‘ಅಸಮಾನತೆಯ ಜಾಗತೀಕರಣ’ ಪಿ.ಸಾಯಿನಾಥರ ಭಾಷಣ ಮತ್ತು ಲೇಖನವನ್ನೊಳಗೊಂಡ ಪುಟ್ಟ ಕೃತಿ.

2005ರ ಫೆಬ್ರವರಿ 25ರಂದು ಅಮೆರಿಕದ ವ್ಯಾಂಕೋವರ್‌ನಲ್ಲಿ ವಾಷಿಂಗ್ಟನ್ ಸ್ಟೇಟ್ ಯೂನಿವರ್ಸಿಟಿಯ ‘ಸಾಮಾಜಿಕ ಮತ್ತು ಪರಿಸರ ನ್ಯಾಯ ಕೇಂದ್ರ’ ಪ್ರಾಯೋಜಿಸಿ, ಪಿಡಿಎಕ್ಸ್ ಮೀಡಿಯಾ ಪ್ರೊಡಕ್ಷನ್ಸ್ ಪ್ರಸ್ತುತಪಡಿಸಿದ ಕಾರ್ಯಕ್ರಮದಲ್ಲಿ ಅವರು ಮಾಡಿದ ಭಾಷಣವನ್ನು ಇಲ್ಲಿ ನೀಡಲಾಗಿದೆ. ಪತ್ರಿಕೆಗಳು ಹೇಗೆ ಕೃಷಿ ಕ್ಷೇತ್ರವನ್ನು ಮತ್ತು ಕಾರ್ಮಿಕ ರಂಗವನ್ನು ನಿರ್ಲಕ್ಷಿಸಿವೆ ಎನ್ನುವ ಅಂಶವನ್ನೂ ಈ ಲೇಖನದಲ್ಲಿ ಪ್ರಖರವಾಗಿ ನಿರೂಪಿಸುತ್ತಾರೆ. ಭಾಷಣದ ಕೊನೆಯಲ್ಲಿ ಅವರು ಹೇಳುವ ಮಾತು, ಈ ದೇಶ ಮಾತ್ರವಲ್ಲ, ಈ ಜಗತ್ತಿನ ಭವಿಷ್ಯದ ಬಗ್ಗೆ ಕಳವಳ ಹುಟ್ಟಿಸುವಂತಹದು.

‘...ನನ್ನ ಭರವಸೆಯನ್ನೆಲ್ಲ ಮುರಿದು ಬಿಡುವಂಥ ಒಂದು ವಿಚಾರವೆಂದರೆ ಸಾವಿರಾರು ಮಾನವ ಜೀವಿಗಳ ಆತ್ಮಹತ್ಯೆಯನ್ನು ವರದಿ ಮಾಡಬೇಕಾಗಿರುವುದು. ಆ ಸಾವುಗಳು ಅನಿವಾರ್ಯವಲ್ಲದವು. ಅವು ನಡೆಯಬೇಕಾಗಿರಲಿಲ್ಲ. ಅವುಗಳನ್ನು ಕುರಿತು ವರದಿ ಮಾಡುತ್ತಿರುವ ಕಳೆದ ಐದು ವರ್ಷಗಳಲ್ಲಿ ನನಗೆ, ‘ನೀರೋನ ಅತಿಥಿಗಳು ಯಾರಾಗಿದ್ದರು?’ ಎಂಬ ನನ್ನ ಪ್ರಶ್ನೆಗೆ ಉತ್ತರ ಸಿಕ್ಕಿ ಬಿಟ್ಟಿದೆ. ಬಹುಶಃ ಅದು ನಾವೆಲ್ಲರೂ ಆಗಿದ್ದೇವೆ ಎನ್ನಿಸುತ್ತದೆ....’ ವ್ಯವಸ್ಥೆಯ ಭಾಗವಾಗಿರುವ ನಮ್ಮೆಲ್ಲರ ವೌನವೇ ಈ ಆತ್ಮಹತ್ಯೆಯ ಮೂಲ ಕಾರಣ ಎನ್ನುವುದನ್ನು ಅವರು ಉಲ್ಲೇಖಿಸುತ್ತಾರೆ. ಇದಕ್ಕೆ ಪರಿಹಾರವೆಂದರೆ ನಾವು ವೌನವನ್ನು ಮುರಿಯುವುದು ಮತ್ತು ವರ್ತಮಾನದ ದುರಂತಗಳಿಗೆ ಸ್ಪಂದಿಸುವುದು. ಪರಿಹಾರದ ಮೊದಲ ಆರಂಭ ಬಿಂದುವೆಂದರೆ, ನಾವ್ಯಾರೂ ನೀರೋನ ಅತಿಥಿಗಳಾಗಲು ಸಮ್ಮತಿಸದೇ ಇರುವುದು. ಅಸಮಾನತೆಯ ಜಾಗತೀಕರಣಕ್ಕೆ ಹೇಗೆ ಗ್ರಾಮೀಣ ಜನರು ಬಲಿಪಶುವಾಗುತ್ತಿದ್ದಾರೆ ಎನ್ನುವುದನ್ನು ಹೇಳುತ್ತಲೇ ಸಾಮೂಹಿಕ ಹೊಣೆಗಾರಿಕೆಯನ್ನೂ ಎಚ್ಚರಿಸುವ ಕೃತಿ ಇದಾಗಿದೆ. ಸಿಂಚನ ತಂಡ ಕೃತಿಯನ್ನು ಕನ್ನಡಕ್ಕಿಳಿಸಿದೆ.

ಲಡಾಯಿ ಪ್ರಕಾಶನ ಗದಗ ಕೃತಿಯನ್ನು ಹೊರತಂದಿದೆ. 62 ಪುಟಗಳ ಈ ಕೃತಿಯ ಮುಖಬೆಲೆ 40 ರೂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X