Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಟ್ಟಿದ ಭಾವನೆಗೆ ಅಕ್ಷರ ನೀಡುವುದೇ...

ಹುಟ್ಟಿದ ಭಾವನೆಗೆ ಅಕ್ಷರ ನೀಡುವುದೇ ಕವಿತೆ: ಪ್ರಸನ್ನ ಗೌಡಹಳ್ಳಿ

ಮೂಡಿಗೆರೆಯಲ್ಲಿ ಸ್ವರಚಿತ ಕವನ ವಾಚನ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ10 Sept 2017 5:32 PM IST
share
ಹುಟ್ಟಿದ ಭಾವನೆಗೆ ಅಕ್ಷರ ನೀಡುವುದೇ ಕವಿತೆ: ಪ್ರಸನ್ನ ಗೌಡಹಳ್ಳಿ

ಮೂಡಿಗೆರೆ, ಸೆ.10: ಹುಟ್ಟಿದ ಭಾವನೆಗೆ ಅಕ್ಷರ ನೀಡುವುದೇ ಕವಿತೆಯಾಗಿದ್ದು, ಅದನ್ನು ಸೂಕ್ತವಾದ ಪದಗಳನ್ನು ಬಳಸಿ ಅಲಂಕಾರ, ವರ್ಣನೆ, ಛಂದಸ್ಸು, ಭಾಷಾ ವೈವಿದ್ಯತೆಯಿಂದ ಸಮನ್ವಯಗೊಳಿಸಿದರೇ ಉತ್ತಮ ಕವಿತೆ ರೂಪುಗೊಳ್ಳುತ್ತದೆ ಎಂದು ಮೂಡಿಗೆರೆ ಜೇಸಿಐ ನಿಕಟಪೂರ್ವ ಅಧ್ಯಕ್ಷ ಪ್ರಸನ್ನ ಗೌಡಹಳ್ಳಿ ಹೇಳಿದರು.

ಅವರು ಮೂಡಿಗೆರೆ ಪಟ್ಟಣದಲ್ಲಿ ಜೇಸಿಐ ವತಿಯಿಂದ ನಡೆದ ಸ್ವರಚಿತ ಕವನವಾಚನ ಸ್ಪರ್ದೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕವಿತೆಯೂ ಸ್ವವಿಮರ್ಶೆಯ ಜೊತೆಗೆ ಸಮಾಜದ ಬದಲಾವಣೆಗೆ ಸ್ಪಂದಿಸುವ ಪರಿಣಾಮಕಾರಿ ಅಸ್ತ್ರವಾಗಿದ್ದು ಕವಿತೆಯೂ ಆತ್ಮವಿಮರ್ಶೆಯ ಮಾರ್ಗವಾಗಲಿ. ಕವಿತೆ ಬರೆಯುವ ಹವ್ಯಾಸ ಒತ್ತಡದ ಬದುಕಿನಲ್ಲಿ ಆತ್ಮಸೈರ್ಯ ಮತ್ತು ಜೀವನೋತ್ಸಾಹ ಮೂಡಿಸುತ್ತದೆ. ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯವೂ ಪರಿಣಾಮಕಾರಿ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿದರು.

ಕವನವಾಚನ ಸ್ಪರ್ಧೆಯ ತೀರ್ಪುಗಾರ ನಂದೀಶ್ ಬಂಕೇನಹಳ್ಳಿ ಮಾತನಾಡಿ, ಧಾವಂತದ ಬದುಕಿನಲ್ಲಿ ಕವಿತೆ ಬರೆಯುವ ಹವ್ಯಾಸ ಕಡಿಮೆಯಾಗುತ್ತಿದೆ. ತಯಾರಿಸುವುದು ಮತ್ತು ಹುಟ್ಟುವುದಕ್ಕೆ ವ್ಯತ್ಯಾಸವಿದೆ. ಹುಟ್ಟು ಎಂದಾಗ ಅಲ್ಲಿ ಜೀವ, ಭಾವನೆ ಮತ್ತು ಸ್ಪಂದನೆ ಇರುತ್ತದೆ. ಕವಿತೆಗಳಲ್ಲಿ ಜೀವಸ್ಪಂದನೆ ಇದ್ದಾಗ ಮಾತ್ರ ಓದುಗರನ್ನು ತಲುಪುತ್ತದೆ ಎಂದರು.

ಕವನವಾಚನ ಸ್ಪರ್ಧೆಯ ಮತ್ತೋರ್ವ ತೀರ್ಪುಗಾರ ಸಂಪತ್ ಬೆಟ್ಟಗೆರೆ ಮಾತನಾಡಿ, ಕವಿತೆ ಹುಟ್ಟಲು ನಿರ್ದಿಷ್ಟ ಸಮಯ ಎಂದಿರುವುದಿಲ್ಲ. ಯಾವಾಗ ಬೇಕಾದರೂ ಕವಿತೆ ಹುಟ್ಟಬಹುದು. ಅದೊಂದು ಸಹಜ ಪ್ರಕ್ರಿಯೆಯಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಉದಯೋನ್ಮುಖ ಕವಿಗಳಿದ್ದು, ಇಂತಹ ವೇದಿಕೆಗಳ ಮೂಲಕ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ನುಡಿದರು.

ತಾಲೂಕಿನ ವಿವಿದಡೆಯಿಂದ ಬಂದಿದ್ದ 20ಕ್ಕೂ ಹೆಚ್ಚು ಕವಿಗಳು ಕವಿಗೋಷ್ಠಿಯಲ್ಲಿ ಭಾಗವಹಿಸಿದರು. ಪರಿಸರ, ಪ್ರೇಮಕವಿತೆ ಮತ್ತು ಪ್ರಚಲಿತ ವಿದ್ಯಾಮಾನಗಳಿಗೆ ಸಂಬಂದಿಸಿದ ಕವಿತೆಗಳು ಗಮನಸೆಳೆದವು. ಗೌರಿಲಂಕೇಶ್ ಹತ್ಯೆಯ ಕುರಿತ ಕವಿತೆಗಳು ಗೋಷ್ಟಿಯಲ್ಲಿ ಬಂದುಹೋದವು. 

ಕವಿಗಳಾದ ಅಲ್ತಾಫ್ ಬಿಳುಗುಳ, ಮಲ್ಲಿಕಾ ಮತ್ತಿಕಟ್ಟೆ, ಎಂ.ಎಸ್.ನಾಗರಾಜ್, ಸುನೀಲ್, ಅಬ್ದುಲ್ ನಾಜೀಮ್, ಹಾ.ಬಾ.ನಾಗೇಶ್, ಹೇಮಲತಾನಾಗೇಶ್, ರಾಜಪ್ಪ, ಮಹಾಂತೇಶ್‍ಕುಮಾರ್, ಸುಂದರೇಶ್, ಪ್ರಕಾಶ್, ವಿಶ್ವ ಹಾರ್ಲಗದ್ದೆ, ಭಾನುಮತಿ, ಶ್ರೇಷ್ಠಿ, ಧನಿಕ್, ಸುಂದರೇಶ್ ಕವನ ವಾಚಿಸಿದರು. ಸ್ವರಚಿತ ಕವನವಾಚನ ಸ್ಪರ್ದೆಯಲ್ಲಿ ಮಲ್ಲಿಕಾ ಮತ್ತಿಕಟ್ಟೆ ಪ್ರಥಮ, ಅಬ್ದುಲ್ ನಾಜೀಮ್ ದ್ವಿತೀಯ ಮತ್ತು ಹೇಮಲತಾನಾಗೇಶ್ ತೃತೀಯ ಬಹುಮಾನ ಪಡೆದರು.

ಜೇಸಿಐ ಅಧ್ಯಕ್ಷ ನಯನ ಕಣಚೂರು, ಕಾರ್ಯದರ್ಶಿ ಶಶಿಕಿರಣ್, ಸಪ್ತಾಹದ ನಿರ್ದೇಶಕ ಯೋಗೇಶ್, ಅಣ್ಣಾನಾಯಕ್, ಮಣಿಕಂಠ ಬಿಳ್ಳೂರು ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X