Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸತ್ವವುಳ್ಳ ಸಂಗೀತದ ಕಡೆಗಣನೆ ಸರಿಯಲ್ಲ:...

ಸತ್ವವುಳ್ಳ ಸಂಗೀತದ ಕಡೆಗಣನೆ ಸರಿಯಲ್ಲ: ಡಾ. ಕೆ.ಎಸ್.ನಿಸಾರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ10 Sept 2017 8:41 PM IST
share
ಸತ್ವವುಳ್ಳ ಸಂಗೀತದ ಕಡೆಗಣನೆ ಸರಿಯಲ್ಲ: ಡಾ. ಕೆ.ಎಸ್.ನಿಸಾರ್ ಅಹ್ಮದ್

ಬೆಂಗಳೂರು, ಸೆ. 10: ನಮ್ಮ ದೇಶದ ಸತ್ವವುಳ್ಳ ಹಾಗೂ ಪರಂಪರೆಯ ಮೂಲ ಭಾಗವಾಗಿರುವ ಹಿಂದೂಸ್ಥಾನಿ ಸಂಗೀತವನ್ನು ಕಡೆಗಣಿಸುತ್ತಿರುವುದು ಬಹಳ ವಿಷಾದನೀಯ ಎಂದು ಪದ್ಮಶ್ರೀ ಪುರಸ್ಕೃತ, ನಾಡೋಜ ಡಾ.ಕೆ.ಎಸ್ ನಿಸಾರ್ ಅಹ್ಮದ್ ವಿಷಾದ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಜೆಎಸ್‌ಎಸ್ ಸಭಾಂಗಣದಲ್ಲಿ ಉಸ್ತಾದ್ ಬಾಲೇಖಾನ್ ಮೆಮೋರಿಯಲ್ ಟ್ರಸ್ಟ್ ಹಾಗೂ ಇನ್ಫೋಸಿಸ್ ಫೌಂಡೇಶನ್ ಆಯೋಜಿಸಿದ್ದ ಇನ್‌ಫೋಸಿಸ್ ಉಸ್ತಾದ್ ಬಾಲೇಖಾನ್ ಸ್ಮರಣಾರ್ಥ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ನಮ್ಮ ದೇಶದ ಪರಂಪರೆಯನ್ನು ನಾವೇ ಕಡೆಗಣಿಸುತ್ತಿರುವುದು ಬಹಳ ವಿಷಾದನೀಯ ಸಂಗತಿ. ನಮ್ಮ ಸಂಗೀತ ಹಾಗೂ ಪರಂಪರೆಯ ಬಹಳಷ್ಟು ಭಾಗಗಳ ಪರಿಚಯ ನಮ್ಮ ಇಂದಿನ ಯುವಜನಾಂಗಕ್ಕೆ ಇಲ್ಲ. ಪಾಶ್ಚಿಮಾತ್ಯ ಸಂಗೀತಕ್ಕೆ ಮಾರು ಹೋಗಿರುವ ಬಹಳಷ್ಟು ಮಂದಿಗೆ ನಮ್ಮ ಅಂತಃಸತ್ವವುಳ್ಳ ಹಿಂದೂಸ್ಥಾನಿ ಸಂಗೀತ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯ ಮಾಡಬೇಕಾಗಿದೆ ಎಂದರು.

ಉಸ್ತಾದ್ ಬಾಲೇಖಾನ್ ಅವರ ಪರಿಚಯ ನನಗೆ 1975ರಲ್ಲಿ ಆಯಿತು. ಶಿವಮೊಗ್ಗಯಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಬಾಲೇಖಾನ್ ಅವರ ಸಂಗೀತ ವಿದ್ವತ್ ನೋಡಿ ನಾನು ದಂಗಾಗಿ ಹೋಗಿದ್ದೆ. ಆದರೆ ಬಾಲೇಖಾನ್ ಅವರ ಸೌಮ್ಯ ಹಾಗೂ ಮುಗ್ದ ವ್ಯಕ್ತಿತ್ವ ನನ್ನನ್ನು ಇನ್ನೂ ಹೆಚ್ಚು ಅವರೆಡೆಗೆ ಸೆಳೆಯುವಲ್ಲಿ ಯಶಸ್ವಿಯಾಯಿತು.

ನಮ್ಮ ದೇಶದ ಕೆಲವೇ ಸಂಸ್ಥೆಗಳು ನಮ್ಮ ದೇಶದ ಪರಂಪರೆಯ ಭಾಗವಾಗಿರುವ ಸಂಗೀತವನ್ನು ಪ್ರಚುರ ಪಡಿಸುತ್ತಿವೆ. ಬಾಲೇಖಾನ್ ಟ್ರಸ್ಟ್, ಇನ್‌ಫೋಸಿಸ್ ಫೌಂಡೇಶನ್ ಸಹಯೋಗದಲ್ಲಿ ಸಂಗೀತಾಸಕ್ತರಿಗೆ ಇಂತಹ ವೇದಿಕೆಯನ್ನು ಒದಗಿಸಿರುವುದು ಶ್ಲಾಘನೀಯ ಎಂದರು.

ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಮಾತನಾಡಿ, ಪಂಡಿತ್ ಗಣಪತಿ ಭಟ್ ಹಾಸಣಗಿ ಅವರು ಸಂಗೀತ ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆಯನ್ನು ನೀಡಿದ್ದಾರೆ. ಇವರು ಪದ್ಮ ಪ್ರಶಸ್ತಿಗೂ ಅರ್ಹರು ಎಂದರು. ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಪಂಡಿತ್ ಗಣಪತಿ ಭಟ್ ಹಾಸಣಗಿ ಅವರು, ಬಾಲೇಖಾನ್ ಅವರು ನನ್ನ ಅಣ್ಣನಿಂದ್ದಂತೆ, ಅವರ ಸ್ಮರಣಾರ್ಥ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ಬಹಳ ಸಂತಸದ ವಿಷಯ ಎಂದರು.

ಧಾರವಾಡ ನಗರ ಉತ್ತರ ಮತ್ತು ದಕ್ಷಿಣ ಭಾರತದ ಕಲೆಗಳ ಸಂಗಮ ಸ್ಥಳವಾಗಿದೆ. ಅಂತಹ ಸಂಗಮ ಸ್ಥಳ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಉಸ್ತಾದ್ ಬಾಲೇಖಾನ್ ಅವರನ್ನು ನೋಡುವ ಹಾಗೂ ಅವರ ಸಂಗೀತ ಕೇಳುವ ಸದಾವಕಾಶ ನನಗೆ ಸಿಕ್ಕಿತ್ತು. ಬಾಲೆಖಾನ್ ಸಂಗೀತದಲ್ಲಿ ಕಿರಾಣಾ-ಗ್ವಾಲಿಯರ್ ಘರಾಣಗಳ ಶ್ರಮ್ಮಿಶ್ರಣವಿತ್ತು. ಅವರ ಕುಟುಂಬದವರು ಅವರ ಹೆಸರಿನಲ್ಲಿ ಉತ್ತಮ ಸೇವೆ ಮಾಡುತ್ತಿದ್ದಾರೆ ಎಂದರು.

ಹಿಂದುಸ್ಥಾನಿ ಗಾಯಕ ಪಂಡಿತ್ ಗಣಪತಿ ಭಟ್ ಹಾಸಣಗಿ ಅವರಿಗೆ ಉಸ್ತಾದ್ ಬಾಲೆಖಾನ್ ಸ್ಮರಣಾರ್ಥ ಪ್ರಶಸ್ತಿ, ಫಲಕ ಹಾಗೂ ಒಂದು ಲಕ್ಷ ರೂಗಳ ಚೆಕ್ ನೀಡಿ ಗೌರವಿಸಲಾಯಿತು. ಬಿಎನ್‌ಎಂ ಚಾರಿಟೀಸ್ ಟ್ರಸ್ಟ್‌ನ ಕಾರ್ಯದರ್ಶಿ ನಾರಾಯಣ ರಾವ್ ಆರ್ ಮಾನೆ, ಉಸ್ತಾದ್ ಬಾಲೆಖಾನ್ ಪುತ್ರ ಹಫೀಜ್ ಬಾಲೇಖಾನ್ ಸೇರಿದಂತೆ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.

ರೈಸ್ ಬಾಲೇಖಾನ್ ಮತ್ತು ಹಫೀಸ್ ಬಾಲೇಖಾನ್ ಅವರು ಹಾಡಿರುವ ಮತ್ತು ಉಸ್ತಾದ್ ರಫೀಕ್ ಖಾನ್ ಮತ್ತು ಪಂಡಿತ್ ಶ್ರೀನಿವಾಸ್ ಜೋಶಿ ಅವರು ಸಂಗೀತ ಸಂಯೋಜನೆಯನ್ನು ಮಾಡಿರುವ ವಚನ ಸ್ವರಧಾರೆ ಸಿಡಿಯನ್ನು ಕೆ.ಎಸ್.ನಿಸಾರ್ ಅಹ್ಮದ್ ಬಿಡುಗಡೆಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X