ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಇಸ್ಮಾಯಿಲ್ ಆತ್ರಾಡಿ
ಉಡುಪಿ, ಸೆ.11: ಎಐಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕುರ್ಷಿದ್ ಅಹ್ಮದ್ ಸೈಯದ್ ಅವರ ಒಪ್ಪಿಗೆಯಂತೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವೈ. ಸೈಯದ್ ಅಹ್ಮದ್ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಇಸ್ಮಾಯಿಲ್ ಆತ್ರಾಡಿಯವರನ್ನು ನೇಮಕ ಮಾಡಿದ್ದಾರೆ.
ಈ ಮೊದಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಉಡುಪಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕರಾಗಿ ಪ್ರಸ್ತುತ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಇವರ ಈ ಆಯ್ಕೆಗೆ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಗೋಪಾಲ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕರಾದ ವಿನಯ ಕುಮಾರ್ ಸೊರಕೆ, ಪ್ರತಾಪ ಚಂದ್ರ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್ ಶಿಫಾರಸು ಮಾಡಿದ್ದರು ಎಂದು ಪ್ರಕಟಣೆ ತಿಳಿಸಿದೆ.
Next Story