Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಐಟಿ ಕ್ಷೇತ್ರದಲ್ಲಿ...

ಕರ್ನಾಟಕ ಐಟಿ ಕ್ಷೇತ್ರದಲ್ಲಿ ದಿಗ್ಗಜರಾಗಲು ತಾಂತ್ರಿಕ ಕಾಲೇಜುಗಳೇ ಕಾರಣ: ಸಚಿವ ಟಿ.ಬಿ.ಜಯಚಂದ್ರ

ವಾರ್ತಾಭಾರತಿವಾರ್ತಾಭಾರತಿ11 Sept 2017 5:15 PM IST
share
ಕರ್ನಾಟಕ ಐಟಿ ಕ್ಷೇತ್ರದಲ್ಲಿ ದಿಗ್ಗಜರಾಗಲು ತಾಂತ್ರಿಕ ಕಾಲೇಜುಗಳೇ ಕಾರಣ: ಸಚಿವ ಟಿ.ಬಿ.ಜಯಚಂದ್ರ

ತುಮಕೂರು, ಸೆ.11: ದೇಶದಲ್ಲಿ ಅತೀ ಹೆಚ್ಚು ಇಂಜನಿಯರ್‍ಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನವಿದ್ದು, ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಿದ್ದರಿಂದಲೇ ರಾಜ್ಯ ಇಂದು ಐಟಿ ಕ್ಷೇತ್ರದಲ್ಲಿ ಹೆಸರು ಮಾಡುವಂತಾಗಿದೆ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ನಗರದ ಎಸ್‍ಐಟಿ ಬಿರ್ಲಾ ಆಡಿಟೋರಿಯಂನಲ್ಲಿ ನಡೆದ “ದಿ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್” (ಇಂಡಿಯಾ) ರಾಜ್ಯ ಘಟಕದ 9ನೆ ಯೂನಿಟ್ ಶಾಖೆಯನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಇಂಜಿನಿಯರ್‍ಗಳು ಹೆಚ್ಚಾದಂತೆ ಉದ್ಯೋಗಾವಕಾಶದ ಕೊರತೆ ಕಾಡುತ್ತಿದೆ. ಕಾಲೇಜಿನಿಂದ ಹೊರಬರುವ ಇಂಜಿನಿಯರ್‍ಗಳಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಆಗಬೇಕಾದ ಬದಲಾವಣೆ ಬಗ್ಗೆ ವೃತ್ತಿನಿರತರು ಚಿಂತಿಸಬೇಕಿದೆ ಎಂದರು.

ಇಂಜಿನಿಯರ್ ಕಾಲೇಜುಗಳ ಸೀಟುಗಳು ಇಂದು ಭರ್ತಿಯಾಗುತ್ತಿಲ್ಲ, ಕಂಡೆಕ್ಟರ್ ಉದ್ಯೋಗಕ್ಕೆ ಇಂಜಿನಿಯರ್ ಪದವೀಧರರು ಅರ್ಜಿ ಸಲ್ಲಿಸುತ್ತಿದ್ದಾರೆ.ಇಂತಹ ಸ್ಥಿತಿಯಲ್ಲಿ ಇಂಜಿನಿಯರಿಂಗ್ ಪಠ್ಯಕ್ರಮವನ್ನು ಬದಲಿಸಿ, ಇಂದಿನ ಕಾಲಕ್ಕೆ ತಕ್ಕಂತೆ ಬದಲಿಸಬೇಕಿದೆ. ಈ ನಿಟ್ಟಿನಲ್ಲಿ “ದ ಇನ್ ಸ್ಟಿ ಟ್ಯೂಟ್ ಆಫ್ ಇಂಜಿನಿಯರ್” ಪ್ರಯತ್ನ ಮಾಡಲಿ ಎಂದು ತಿಳಿಸಿದರು.

ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಶಿಕ್ಷಣಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕೌಶಲ್ಯಕ್ರಾಂತಿ ಆಗುತ್ತಿದ್ದು, ವೃತ್ತಿ ನಿರತರು, ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಇಂಜಿನಿಯರ್‍ಗಳು ಒಂದೆಡೆ ಸೇರುವ ಮೂಲಕ ದೊಡ್ಡ ಶಕ್ತಿಯನ್ನು ಸೃಷ್ಟಿಸಿದ್ದಾರೆ. ತಂತ್ರಜ್ಞಾನ ಹಾಗೂ ಪಠ್ಯಕ್ರಮದಲ್ಲಿನ ಅಂತರವನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಸ್ಥೆ ಕಾರ್ಯನಿರ್ವಹಿಸಲಿ ಎಂದು ಸಲಹೆ ನೀಡಿದರು.

ಶಾಸಕ ರಫೀಕ್ ಅಹ್ಮದ್ ಮಾತನಾಡಿ, ದೇಶದಲ್ಲಿ 800 ಇಂಜಿನಿಯರಿಂಗ್ ಕಾಲೇಜುಗಳು ಮುಚ್ಚುವ ಹಂತಕ್ಕೆ ತಲುಪಿವೆ, ಕಾಲದಿಂದ ಕಾಲಕ್ಕೆ ಆಗುವ ಬದಲಾವಣೆ ಬಗ್ಗೆ ಇಂಜಿನಿಯರ್‍ಗಳಿಗೆ ತಲುಪಿಸುವ ಕೆಲಸವನ್ನು  “ದ ಇನ್ ಸ್ಟಿ ಟ್ಯೂಟ್ ಆಫ್ ಎಂಜನಿಯರ್” ಮಾಡುತ್ತಿದೆ,ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಎತ್ತಿನಹೊಳೆ, ತುಂಗಾಭದ್ರಾ, ಭದ್ರಾ ಮೇಲ್ದಂಜೆ ಯೋಜನೆ ಮೂಲಕ ನೀರು ತರಲಾಗುತ್ತಿದೆ. ಆದರೆ ಪಠ್ಯಕ್ರಮದಲ್ಲಿ ಇನ್ನೂ ಹಳೆಯ ಪದ್ಧತಿಗಳೇ ಇದ್ದು, ವಿದ್ಯಾರ್ಥಿಗಳು ಹಾಗೂ ವೃತ್ತಿನಿರತರ ನಡುವಿನ ಅಂತರವನ್ನು ಕಡಿಮೆ ಮಾಡಬೇಕಿದೆ ಎಂದರು.

ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್ ಮಾತನಾಡಿ, ವೃತ್ತಿನಿರತ ಇಂಜಿನಿಯರ್‍ಗಳು ಸೇರಿಕೊಂಡಿರುವ “ದ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್” ಸಂಸ್ಥೆಗೆ ಸರಕಾರ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟರೆ ಸ್ವಂತ ಕಟ್ಟಡವನ್ನು ನಿರ್ಮಿಸಿಕೊಂಡು ಕಾರ್ಯಕ್ರಮಗಳನ್ನು ನಡೆಸಬಹುದು, ಸಂಸ್ಥೆಗೆ ಜಾಗ ನೀಡುವಂತೆ ಸಚಿವರು, ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ಜಲ ನಿಗಮದ ಮುಖ್ಯ ಇಂಜಿನಿಯರ್ ಪಿ.ಚೆನ್ನಪ್ಪ ನಾಯ್ಕ್, ಹೇಮಾವತಿ ನೀರಾವರಿ ನಾಲೆ ಮುಖ್ಯ ಇಂಜಿನಿಯರ್ ಶಿವಕುಮಾರ್,“ದ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್” ರಾಜ್ಯ ಘಟಕದ ಅಧ್ಯಕ್ಷ ಡಾ.ಎನ್.ಚಿಕ್ಕಣ್ಣ, ತುಮಕೂರು ಘಟಕದ ಅಧ್ಯಕ್ಷ ಡಾ.ಸುರೇಶ್, ಗೌರವ ಕಾರ್ಯದರ್ಶಿ ಪ್ರೊ.ಯು.ಎಸ್.ಮಲ್ಲಿಕ್, ಸದಸ್ಯರಾದ ಎಂ.ನಾಗರಾಜ್, ಆರ್.ಆನಂದಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X