Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 94ರಲ್ಲಿ ನಿವೃತ್ತರಾದ ರಾಮ್ ಜೇಠ್ಮಲಾನಿ

94ರಲ್ಲಿ ನಿವೃತ್ತರಾದ ರಾಮ್ ಜೇಠ್ಮಲಾನಿ

ಈ ವಿವಿಐಪಿ ವಕೀಲ ಪ್ರತಿನಿಧಿಸಿದ ವಿಐಪಿ ಕೇಸುಗಳು ಯಾವುವು ?

ವಾರ್ತಾಭಾರತಿವಾರ್ತಾಭಾರತಿ11 Sept 2017 5:19 PM IST
share
94ರಲ್ಲಿ ನಿವೃತ್ತರಾದ ರಾಮ್ ಜೇಠ್ಮಲಾನಿ

ಹೊಸದಿಲ್ಲಿ, ಸೆ.11: ಹಿರಿಯ ವಕೀಲ ಹಾಗೂ ರಾಜಕಾರಣಿ ರಾಮ್ ಜೇಠ್ಮಲಾನಿ ಅವರು ಕಾನೂನು ವೃತ್ತಿಯಿಂದ ಕಳೆದ ಶನಿವಾರವಷ್ಟೇ ತಮ್ಮ 94ನೆ ವಯಸ್ಸಿನಲ್ಲಿ ನಿವೃತ್ತಿ ಘೋಷಿಸಿದರು. ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮವೊಂದರಲ್ಲಿ ಜೇಠ್ಮಲಾನಿ ತಮ್ಮ ನಿವೃತ್ತಿ ಘೋಷಿಸಿದ್ದರು.

ದೇಶದ ಅತ್ಯಂತ ಪ್ರಮುಖ ವಕೀಲರುಗಳಲ್ಲೊಬ್ಬರಾಗಿದ್ದ ಜೇಠ್ಮಲಾನಿ ಅವರು ರಾಜ್ಯಸಭಾ ಸದಸ್ಯರೂ ಆಗಿ ಸೇವೆ ಸಲ್ಲಿಸಿದ್ದಾರಲ್ಲದೆ ಆಡಳಿತ ಬಿಜೆಪಿಯೊಂದಿಗೆ ನಂಟೂ ಹೊಂದಿದವರು.

2 ಜಿ ಹಗರಣ ಹಾಗೂ ಜೆಸ್ಸಿಕಾ ಲಾಲ್ ಕೊಲೆ ಪ್ರಕರಣ ಸಹಿತ ಹಲವಾರು ವಿಐಪಿ ಕೇಸುಗಳನ್ನು ಅವರು ತಮ್ಮ 76 ವರ್ಷಗಳ ಕಾನೂನು ವೃತ್ತಿಯಲ್ಲಿ ಪ್ರತಿನಿಧಿಸಿದ್ದರು.

ಇತ್ತೀಚೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಿಂದನಾತ್ಮಕ ಪದ ಉಪಯೋಗಿಸಿದ್ದಾರೆಂದು ಆರೋಪಿಸುವ ಮೂಲಕ ಜೇಠ್ಮಲಾನಿ ಸುದ್ದಿಯಲ್ಲಿದ್ದರು. ಜೇಟ್ಲಿ ಅವರು ಕೇಜ್ರಿವಾಲ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ ನಂತರ ಹಾಗೂ ಜೇಠ್ಮಲಾನಿ ಶುಲ್ಕವಾದ ರೂ 3.86 ಕೋಟಿ ನೀಡಲು ಸಾರ್ವಜನಿಕ ನಿಧಿಯನ್ನು ಕೇಜ್ರಿವಾಲ್ ಕೋರಿದ ಬಳಿಕ ಈ ಬೆಳವಣಿಗೆ ನಡೆದಿತ್ತು.

ಜೇಠ್ಮಲಾನಿ ಅವರು ಪ್ರತಿನಿಧಿಸಿದ್ದ ಏಳು ವಿಐಪಿ ಕೇಸುಗಳು ಇಂತಿವೆ

* ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯಲ್ಲಿ ಶಿಕ್ಷೆಗೊಳಗಾಗಿದ್ದ ಸತ್ವಂತ್ ಸಿಂಗ್ ಹಾಗೂ ಕೇಹರ್ ಸಿಂಗ್ ಅವರ ಪರವಾಗಿ ಜೇಠ್ಮಲಾನಿ ವಾದಿಸಿದ್ದರು.

* ಇನ್ನೊಬ್ಬ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ವಿ ಶ್ರೀಹರನ್ ಆಲಿಯಾಸ್ ಮುರುಗನ್ ವಕೀಲರಾಗಿಯೂ ಜೇಠ್ಮಲಾನಿ ಕೆಲಸ ಮಾಡಿದ್ದರು. ರಾಜೀವ್ ಗಾಂಧಿ ಅವರು 1991ರಲ್ಲಿ ಬಾಂಬ್ ದಾಳಿಯಲ್ಲಿ ಹತರಾದ ಘಟನೆಯ ಬಗ್ಗೆ ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಜೇಠ್ಮಲಾನಿ ಅದು ಭಾರತದ ವಿರುದ್ಧ ನಡೆದ ಅಪರಾಧವಲ್ಲ ಎಂದು ಹೇಳಿದ್ದರು.

* ಜೇಠ್ಮಲಾನಿ ಅವರು ಹಿರಿಯ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅವರ ವಕೀಲರಾಗಿ ಹವಾಲ ಹಗರಣದಲ್ಲಿ ವಾದಿಸಿದ್ದರು. ತಾನು ಅಡ್ವಾಣಿ ಅವರ ವಕೀಲರಾಗಿ ಕಾರ್ಯನಿರ್ವಹಿಸಿದ್ದರಿಂದಲೇ ಅಡ್ವಾಣಿ ಈ ಕೇಸನ್ನು ಗೆದ್ದರು ಎಂದು ಜೇಠ್ಮಲಾನಿ ಇತ್ತೀಚೆಗೆ ಹೇಳಿಕೊಂಡಿದ್ದರು.

* ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಮನು ಶರ್ಮನ ವಕೀಲರೂ ಆಗಿದ್ದರು ಜೇಠ್ಮಲಾನಿ.

* ಹಲವಾರು ನಕಲಿ ಎನ್‌ಕೌಂಟರ್ ಪ್ರಕರಣಗಳಲ್ಲಿ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಕೀಲರಾಗಿದ್ದರು.

* ರಾಜಸ್ಥಾನದ ಜೋಧಪುರದ ತನ್ನ ಆಶ್ರಮದಲ್ಲಿ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತ ಸ್ವಘೋಷಿತ ದೇವಮಾನವ ಅಸಾರಾಂ ಬಾಪುವಿಗೆ ಜಾಮೀನು ಸಿಗಲು ಜೇಠ್ಮಲಾನಿ ಕಾರಣರಾಗಿದ್ದರು.

* ಅಕ್ರಮ ಆಸ್ತಿ ಪ್ರಕರಣದಲ್ಲಿ ಜೇಠ್ಮಲಾನಿ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ವಕೀಲರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X