Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ:...

ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಸಂಕೇತ್ ಪೂವಯ್ಯ

ಜಿಲ್ಲಾ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ11 Sept 2017 8:06 PM IST
share
ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಸಂಕೇತ್ ಪೂವಯ್ಯ

ಮಡಿಕೇರಿ, ಸೆ.11: ಮಾನಸಿಕ ಹಾಗೂ ದೈಹಿಕವಾಗಿ ಒತ್ತಡದಲ್ಲಿರುವ ಪತ್ರಕರ್ತರಿಗೆ ಕ್ರೀಡಾಕೂಟ ಮನರಂಜನೆ ನೀಡಬಲ್ಲದೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೊಡಗು ಪ್ರೆಸ್‍ಕ್ಲಬ್ ಸಹಯೋಗದಲ್ಲಿ ಆರ್ಜಿ ಗ್ರಾಮದಲ್ಲಿರುವ ಬಲ್ಲಚಂಡ ರಂಜನ್ ಬಿದ್ದಪ್ಪ ಅವರ ಗದ್ದೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪತ್ರಕರ್ತರ ಜಿಲ್ಲಾಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪತ್ರಕರ್ತರ ಮೇಲೆ ಹಲ್ಲೆ ಮಾಡುವುದು ಸಾಮಾನ್ಯವಾಗಿದೆ. ದೇಶದ ವಿವಿಧೆಡೆಯಲ್ಲಿ ಪತ್ರಕರ್ತರ ಹತ್ಯೆಯಾಗಿದೆ. ಪ್ರಜಾಪ್ರಭುತ್ವದಲ್ಲಿ ಪತ್ರಕರ್ತರಿಂದು ನಿಜವಾದ ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿ ಹಿಡಿಯುತ್ತಿದ್ದಾರೆ. ಸಾಮಾನ್ಯರಿಗೆ ನ್ಯಾಯಾಂಗ, ಪತ್ರಿಕಾರಂಗದ ಮೇಲೆ ಮಾತ್ರ ವಿಶ್ವಾಸ, ನಂಬಿಕೆ ಇದೆ ಎಂದು ತಿಳಿಸಿದರು. 

ಗೌರಿ ಲಂಕೇಶ್ ಹತ್ಯೆಯ ನಂತರ 2 ದಿನದಲ್ಲಿ ಬಿಹಾರದಲ್ಲಿ ಪತ್ರಕರ್ತನ ಕೊಲೆಯಾಗಿದೆ. ಇದರಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. 1990 ರಿಂದ 2017 ರವರೆಗೆ 142 ಪತ್ರಕರ್ತರ ಕೊಲೆ ಯಾಗಿದೆ. ಅನೇಕ ಪತ್ರಕರ್ತರಿಗೆ ಕೊಲೆ ಬೆದರಿಕೆ, ಮಾನನಷ್ಟ ಮೊಕದ್ದಮೆ ಹೂಡುತ್ತಿದ್ದಾರೆಂದರು.

ಡೇರಾ ಸತ್ಯ ಸೌಧದ ಪ್ರಕರಣ ಬೆಳಕಿಗೆ ತಂದ ಪತ್ರಕರ್ತರನ್ನು ಕೊಲೆ ಮಾಡಲಾಗಿದೆ. ಮಧ್ಯ ಪ್ರದೇಶದಲ್ಲಿ ವ್ಯಾಪಂ ಪ್ರಕರಣ ಬಹಿರಂಗಗೊಳಿಸಿದ ಪತ್ರಕರ್ತರನ್ನು ಕೊಲೆ ಮಾಡಲಾ ಗಿದೆ. ಹಸ್ತಕ್ಷೇಪವಿಲ್ಲದೆ ಮಾಧ್ಯಮಕ್ಕೆ ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿದೆ ಎಂಬ ಸಮೀಕ್ಷೆಯಲ್ಲಿ ಭಾರತ 136ನೆ ಸ್ಥಾನ ಪಡೆದಿದೆ. ಕಾರ್ಯಾಂಗ, ಶಾಸಕಾಂಗದ ಮೇಲೆ ಜನರಿಗೆ ಭ್ರಮನಿರಸನ ಉಂಟಾಗಿದೆ. ನ್ಯಾಯ ದೇಗುಲಗಳು ಹಾಗೂ ಮಾಧ್ಯಮಗಳು ಸಾಮಾನ್ಯ ಮನುಷ್ಯನ ಕೂಗನ್ನು ಸರ್ಕಾರಕ್ಕೆ ತಲುಪಿಸುವ ಕೆಲಸ ಮಾಡಬೇಕು. ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸರ್ಕಾರ ಸೂಕ್ತ ರಕ್ಷಣೆ ಹಾಗೂ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದರಿಂದ ಒತ್ತಡದಿಂದ ಮುಕ್ತರಾಗಿ ಸ್ಫೂರ್ತಿಯಿಂದ ವೃತ್ತಿಯಲ್ಲಿ ಮುಂದುವರಿಯಬಹುದು ಎಂದು ವಿವರಿಸಿದರು.

ರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಸದಸ್ಯ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ಪತ್ರಕರ್ತರು ನಿರಂತರ ಪ್ರತಿಪಕ್ಷದ ಸ್ಥಾನದಲ್ಲಿ ಕಾರ್ಯನಿರ್ವಹಿಸಬೇಕು. ಆಡಳಿತ ವೈಫಲ್ಯಗಳನ್ನು ಕಂಡು ಹಿಡಿಯಲು ಪತ್ರಕರ್ತರಿಂದ ಮಾತ್ರ ಸಾಧ್ಯ ಎಂದರು.

ಕ್ರೀಡಾಕೂಟ ಸಂಚಾಲಕ ಪಳೆಯಂಡ ಪಾರ್ಥ ಚಿಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಉದ್ಯಮಿ ಬಿ.ಬಿ. ಚುಪ್ಪ ನಾಗರಾಜ್, ನಿವೃತ್ತ ಶಿಕ್ಷಕಿ ಬಲ್ಲಚಂಡ ಕಮಲ, ಕಾಫಿ ಬೆಳೆಗಾರ ಬಲ್ಲಚಂಡ ರಂಜನ್ ಬಿದ್ದಪ್ಪ, ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಕುಪ್ಪಂಡ ದತ್ತಾತ್ರಿ, ಸೋಮವಾರ ಪೇಟೆ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ರಾಜ್ಯ ಪತ್ರಕರ್ತರ ಸಂಘ ನಿರ್ದೇಶಕರಾದ ಎಸ್.ಐ. ಮುರಳೀಧರ್, ಅನು ಕಾರ್ಯಪ್ಪ ಮತ್ತಿತರರಿದ್ದರು.

ಎಸ್.ಐ. ಮುರಳೀಧರ್ ಪ್ರಾರ್ಥಿಸಿದರು. ಅಮ್ಮಣಿಚಂಡ ಪ್ರವೀಣ್ ಚಂಗಪ್ಪ ಸ್ವಾಗತಿಸಿದರು. ಕುಡೆಕಲ್ ಸಂತೋಷ್, ಕೆ.ಬಿ.ಮಂಜುನಾಥ್ ನಿರೂಪಿಸಿದರು. ಡಿ.ಪಿ. ರಾಜೇಶ್ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X