Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್‌ನಲ್ಲಿ ಜನಾಂಗೀಯ ನಿರ್ಮೂಲನೆ...

ಮ್ಯಾನ್ಮಾರ್‌ನಲ್ಲಿ ಜನಾಂಗೀಯ ನಿರ್ಮೂಲನೆ ನಡೆಯುತ್ತಿದೆ

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮುಖ್ಯಸ್ಥ ಝೈದ್ ಅಲ್ ಹಸ್ಸನ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ11 Sept 2017 9:39 PM IST
share
ಮ್ಯಾನ್ಮಾರ್‌ನಲ್ಲಿ ಜನಾಂಗೀಯ ನಿರ್ಮೂಲನೆ ನಡೆಯುತ್ತಿದೆ

ವಿಶ್ವಸಂಸ್ಥೆ,ಸೆ.11: ಮ್ಯಾನ್ಮಾರ್‌ನಲ್ಲಿ ಜನಾಂಗೀಯ ಅಲ್ಪಸಂಖ್ಯಾತರಾದ ರೋಹಿಂಗ್ಯಾ ಮುಸ್ಲಿಮರು ಅನುಭವಿಸುತ್ತಿರುವ ಹಿಂಸೆ ಹಾಗೂ ದೌರ್ಜನ್ಯದ ವಿರುದ್ಧ ವಿಶ್ವಸಂಸ್ಥೆಯ ಮಾನವಹಕ್ಕುಗಳ ಸಂಸ್ಥೆಯ ಮುಖ್ಯಸ್ಥರು ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಖ್ನೆ ರಾಜ್ಯದ ಗಲಭೆಗ್ರಸ್ತ ಪ್ರದೇಶಕ್ಕೆ ವಿಶ್ವಸಂಸ್ಥೆಯ ಮಾನವಹಕ್ಕುಗಳ ಸಂಸ್ಥೆಯ ತನಿಖಾಧಿಕಾರಿಗಳಿಗೆ ಪ್ರವೇಶಿಸಲು ಅನುಮತಿ ನಿರಾಕರಿಸಿರುವುದು, ‘‘ಜನಾಂಗೀಯ ನಿರ್ಮೂಲನೆಗೆ ಒಂದು ಸ್ಪಷ್ಟವಾದ ಉದಾಹರಣೆ’’ಎಂಬಂತೆ ಭಾಸವಾಗುತ್ತಿದೆಯೆಂದು ಹೇಳಿದ್ದಾರೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯ ಅಧಿವೇಶದಲ್ಲಿ ಮಾತನಾಡುತ್ತಿದ್ದ ಸಂಸ್ಥೆಯ ಮುಖ್ಯಸ್ಥ ಝೈದ್ ಅಲ್ ಹಸ್ಸನ್ ಅವರು ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯನ್ನರ ಮಾನವಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

  ರೊಹಿಂಗ್ಯನ್ನರು ಅಧಿಕ ಸಂಖ್ಯೆಯಲ್ಲಿರುವ ರಾಖೈನ್ ರಾಜ್ಯದಲ್ಲಿ ಮ್ಯಾನ್ಮಾರ್ ಸೇನೆಯು ಬೃಹತ್ ಪ್ರಮಾಣದಲ್ಲಿ ಬರ್ಬರವಾದ ಸೇನಾ ಕಾರ್ಯಾಚರಣೆಯನ್ನು ನಡೆಸುತ್ತಿದೆಯೆಂದು ಅವರು ಆರೋಪಿಸಿದರು. ಕಳೆದ ಮೂರು ವಾರಗಳಲ್ಲಿ 2.70 ಲಕ್ಷಕ್ಕೂ ಅಧಿಕ ರೊಹಿಂಗ್ಯಾಗಳು ಮ್ಯಾನ್ಮಾರ್‌ನಿಂದ ಪಲಾಯನಗೈದು ಬಾಂಗ್ಲಾದ ಗಡಿಯನ್ನು ಪ್ರವೇಶಿಸಿದ್ದಾರೆಂದು ಜೋರ್ಡಾನ್ ಯುವರಾಜರೂ ಆದ ಝೈದ್ ಅಲ್ ಹಸ್ಸನ್ ತಿಳಿಸಿದ್ದಾರೆ. ಭದ್ರತಾ ಪಡೆಗಳು ಹಾಗೂ ಸ್ಥಳೀಯ ಬೌದ್ಧ ತೀವ್ರವಾದಿ ಗುಂಪುಗಳು ರೊಹಿಂಗ್ಯಾ ಗ್ರಾಮಗಳನ್ನು ಸುಟ್ಟುಹಾಕುತ್ತಿವೆ ಹಾಗೂ ಕಾನೂನುಬಾಹಿರ ಹತ್ಯೆಗಳನ್ನು ನಡೆಸುತ್ತಿರುವುದಾಗಿ ಅವರು ಆಕ್ರೋಶ ವ್ಯಕ್ತಪಡಿಸಿದರು.

 ಮ್ಯಾನ್ಮಾರ್ ಸರಕಾರವು ಮಾನವ ಹಕ್ಕುಗಳ ತನಿಖಾಧಿಕಾರಿಗಳಿಗೆ ಹಿಂಸಾಗ್ರಸ್ತ ಪ್ರದೇಶಗಳಿಗೆ ಭೇಟಿ ನೀಡಲು ಅವಕಾಶವನ್ನು ನಿರಾಕರಿಸಿರುವುದರಿಂದ ಅಲ್ಲಿನ ಹಾಲಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಅಂದಾಜಿಸಲು ಸಾಧ್ಯವಿಲ್ಲ. ಆದರೆ ಈ ಸನ್ನಿವೇಶವು ಜನಾಂಗೀಯ ಮೂಲೋತ್ಪಾಟನೆಯ ಸ್ಪಷ್ಟ ಉದಾಹರಣೆಯೆಂಬಂತೆ ಭಾಸವಾಗುತ್ತಿದೆ ಎಂದವರು ಆಘಾತ ವ್ಯಕ್ತಪಡಿಸಿದ್ದಾರೆ. ರೊಹಿಂಗ್ಯನ್ನರು ಬಾಂಗ್ಲಾಗೆ ಪಲಾಯನಗೈಯುವ ದಾರಿಗಳಲ್ಲಿ ಮ್ಯಾನ್ಮಾರ್ ಸೇನೆಯು ನೆಲಬಾಂಬ್ ಆಳವಡಿಸುತ್ತಿರುವ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X