Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆರಳಚ್ಚಿನ ತದ್ರೂಪ ಬಳಸಿ ನಕಲಿ ಆಧಾರ್...

ಬೆರಳಚ್ಚಿನ ತದ್ರೂಪ ಬಳಸಿ ನಕಲಿ ಆಧಾರ್ ಕಾರ್ಡ್ ತಯಾರಿ: 10 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Sept 2017 10:40 PM IST
share
ಬೆರಳಚ್ಚಿನ ತದ್ರೂಪ ಬಳಸಿ ನಕಲಿ ಆಧಾರ್ ಕಾರ್ಡ್ ತಯಾರಿ: 10 ಮಂದಿಯ ಬಂಧನ

ಹೊಸದಿಲ್ಲಿ, ಸೆ. 10: ಹ್ಯಾಕರ್‌ಗಳು ಕೇವಲ ಬೆರಳಚ್ಚಿನ ಆಧಾರ್ ಬಯೋಮೆಟ್ರಿಕ್ ಪ್ರಕ್ರಿಯೆಯಿಂದ ಮಾತ್ರವಲ್ಲದೆ, ರೆಟಿನಾ ಸ್ಕ್ಯಾನಿಂಗ್‌ನಿಂದಲೂ ತಪ್ಪಿಸಿಕೊಳ್ಳಲು ಅಡ್ಡ ದಾರಿ ಕಂಡುಕೊಳ್ಳುತ್ತಿದ್ದಾರೆ ಎಂದು ಉತ್ತರಪ್ರದೇಶ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಯುಐಡಿಎಐಯ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಯಿಸುವ ಹಾಗೂ ಬೆರಳಚ್ಚಿನ ತದ್ರೂಪ ಬಳಸಿ ನಕಲಿ ಆಧಾರ್ ಕಾರ್ಡ್ ಅನ್ನು ತಯಾರಿಸುವ ಹ್ಯಾಕರ್‌ಗಳ ರಾಜ್ಯ ವ್ಯಾಪಿ ಜಾಲವನ್ನು ಪೊಲೀಸರ ವಿಶೇಷ ತಂಡ ಭೇದಿಸಿದ ಬಳಿಕ ಈ ವಿಷಯ ಬೆಳಕಿಗೆ ಬಂದಿದೆ.

 ಕಾನ್ಪುರದಲ್ಲಿ ಪೊಲೀಸರ ವಿಶೇಷ ಕಾರ್ಯಪಡೆ ಕಾರ್ಯಾಚರಣೆ ನಡೆಸಿದ್ದು, ನಕಲಿ ಹಾಗೂ ತದ್ರೂಪಿ ಸೃಷ್ಟಿಯ ಆರೋಪದಲ್ಲಿ 10 ಮಂದಿಯನ್ನು ಬಂಧಿಸಿದೆ.

 ನಕಲಿ ಅರ್ಜಿದಾರರನ್ನು ಸೃಷ್ಟಿಸಲು ಯುಐಡಿಎಐ ಅರ್ಜಿದಾರರ (ಆಧಾರ್ ನೋಂದಣಿ ಮಾಡುವ ಏಜೆನ್ಸಿ ಬಳಸುವ ಸಾಫ್ಟ್‌ವೇರ್) ಮೂಲ ಸಂಕೇತ (ಸೋರ್ಸ್ ಕೋಡ್)ದೊಂದಿಗೆ ತಿದ್ದುಪಡಿ ಹಾಗೂ ಬೆರಳಚ್ಚು ಪ್ರತಿಗಳೊಂದಿಗೆ ಯುಐಡಿಎಐಯ ಬಯೋಮೆಟ್ರಿಕ್ ನಿಯಮಗಳನ್ನು ಆರೋಪಿಗಳು ಬದಲಾಯಿಸುತ್ತಿದ್ದರು. ದೃಢೀಕರಣ ಪ್ರಕ್ರಿಯೆಯ ಆಪರೇಟರ್ ಅನ್ನು ಬದಲಾಯಿಸಿ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸುತ್ತಿದ್ದರು. ಹ್ಯಾಕರ್‌ಗಳು ಅರ್ಜಿದಾರರ ಅರ್ಜಿಗಳನ್ನು ಅನಧಿಕೃತ ಆಪರೇಟರ್‌ಗಳಿಗೆ ಕಳುಹಿಸಿಕೊಡುತ್ತಿದ್ದು, 5 ಸಾವಿರ ರೂ. ಶುಲ್ಕ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ನೊದ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿಚಾರಣೆ ಹಾಗೂ ತನಿಖೆಯ ಬಳಿಕ ಪೊಲೀಸರು ವಂಚನೆ ಹಾಗೂ ವ್ಯಕ್ತಿಯನ್ನು ಬದಲಾಯಿಸುವ ವಿಧಾನವನ್ನು ವಿವರಿಸಿದ್ದಾರೆ. ಇತ್ತೀಚೆಗೆ ದಿಯೋರಿಯಾ ಹಾಗೂ ಲಕ್ನೊದಲ್ಲಿ ನಕಲಿ ಆಧಾರ್ ಕಾರ್ಡ್ ಪತ್ತೆಯಾದ ಬಳಿಕ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದರು.

ಆಧಾರ್ ನಕಲಿ ಹೇಗೆ ಮಾಡುತ್ತಿದ್ದರು: ಆರೋಪಿಗಳು ಆಧಿಕೃತ ಆಧಾರ್ ನೋಂದಣಿ ಮಾಡುವ ಸಂಸ್ಥೆಯ ಯುಐಡಿಎಐ ವ್ಯವಸ್ಥೆಯಿಂದ ಬೆರಳಚ್ಚು ಮುದ್ರಣ ತೆಗೆದುಕೊಳ್ಳುತ್ತಿದ್ದರು. ಅನಂತರ ಈ ಬೆರಳಚ್ಚನ್ನು ಬಟರ್‌ಶೀಟ್ ಮೇಲೆ ಮುದ್ರಿಸುತ್ತಿದ್ದರು. ಬಳಿಕ ಪೋಲಿಮರ್ ರೆಸಿನ್ ಬಳಸಿ ಕೃತಕ ಬೆರಳಚ್ಚು ರೂಪಿಸುತ್ತಿದ್ದರು. ಈ ಬೆರಳಚ್ಚು ಬಳಸಿ ಆಧಾರ್ ವೆಬ್‌ಸೈಟ್ ಲಾಗ್ ಆನ್ ಆಗುತ್ತಿದ್ದರು.

ಏನೆಲ್ಲ ವಶಪಡಿಸಲಾಗಿದೆ: ನಕಲುಗೊಳಿಸಲು ಬಳಸುತ್ತಿದ್ದ ಸಾಧನ, 38 ಬೆರಳಚ್ಚು ಪೇಪರ್, 46 ಬೆರಳಚ್ಚು ಉತ್ಪಾದಿಸುವ ರಾಸಾಯನಿಕ, 2 ಆಧಾರ್ ಬೆರಳಚ್ಚು ಸ್ಕ್ಯಾನರ್, 2 ಐರಿಸ್ ರೆಟಿನಾ ಸ್ಕ್ಯಾನರ್, 8 ರಬ್ಬರ್ ಸ್ಟ್ಯಾಂಪ್, 18 ಆಧಾರ್ ಕಾರ್ಡ್, ವೆಬ್ ಕ್ಯಾಮ್, ಜಿಪಿಎಸ್ ಸಾಧನ, ಪಾಲಿಮರ್ ಒಣಗಿಸುವ ಸಲಕರಣೆ, 12 ಲ್ಯಾಪ್‌ಟಾಪ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X