ಒತ್ತಡ ಕಡಿಮೆ ಮಾಡಲು ಕ್ರೀಡೆ ಸಹಾಯಕ: ಡಾ.ಉಮೇಶ್ ಪ್ರಭು
ಉಡುಪಿ, ಸೆ.12: ದೈನಂದಿನ ಜೀವನದಲ್ಲಿ ಮಕ್ಕಳು, ವಯಸ್ಕರು ಹಾಗೂ ಹಿರಿಯ ನಾಗರಿಕರಿಗೆ ಒತ್ತಡವನ್ನು ಕಡಿಮೆ ಮಾಡುವಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹಾಯಕವಾಗುತ್ತವೆ ಎಂದು ಉಡುಪಿ ರೆಡ್ ಕ್ರಾಸ್ ಅಧ್ಯಕ್ಷ ಡಾ.ಉಮೇಶ್ ಪ್ರಭು ತಿಳಿಸಿದ್ದಾರೆ.
ಅವರು ಮಂಗಳವಾರ ಉಡುಪಿಯ ರೆಡ್ ಕ್ರಾಸ್ ಭವನದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ, ಜಿಲ್ಲೆಯ ಹಿರಿಯ ನಾಗರಿಕರಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯ ತೀರ್ಪುಗಾರರಿಗೆ ಕ್ರೀಡಾ ಸಲಕರಣೆ ವಿತರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್, ಕ್ರೀಡಾಕೂಟದ ತೀರ್ಪುಗಾರರಾದ ಸೋಮಪ್ಪ ತಿಂಗಳಾಯ, ರವಿಪ್ರಸಾದ್ ಹಾಗೂ ಹಿರಿಯ ನಾಗರಿಕರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಜಿಲ್ಲಾ ವಿಕಲಚೇತನ ಇಲಾಖೆಯ ಅಧಿಕಾರಿ ನಿರಂಜನ ಭಟ್ ಸ್ವಾಗತಿಸಿ, ವಂದಿಸಿದರು.
Next Story