Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವಕರು ಸಂಘಟನೆಗಳಲ್ಲಿ...

ಯುವಕರು ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಬೇಕು:ಜಯರಾಮ ಭಟ್

ಕೂಟ ಮಹಾಜಗತ್ತು ಕೇಂದ್ರೀಯ ಮಹಾಧಿವೇಶನ

ವಾರ್ತಾಭಾರತಿವಾರ್ತಾಭಾರತಿ12 Sept 2017 9:11 PM IST
share
ಯುವಕರು ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಬೇಕು:ಜಯರಾಮ ಭಟ್

ಉಡುಪಿ, ಸೆ.12: ಇತ್ತೀಚಿನ ದಿನಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಹಿರಿಯರು ಮಾತ್ರ ಸಕ್ರಿಯರಾಗಿರುವುದು ಕಂಡುಬರುತ್ತಿದೆ. ನಮ್ಮ ಮಕ್ಕಳು ಮತ್ತು ಯುವ ಜನಾಂಗ ಹೆಚ್ಚಿನ ಸಂದರ್ಭಗಳಲ್ಲಿ ಇಂತಹ ಚಟುವಟಿಕೆಗಳಿಂದ ದೂರವೇ ಉಳಿಯುತ್ತಿವೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಕ್ರಿಯಾಶೀಲ ರಾಗಬೇಕು. ಹಾಗಾದಾಗ ಮಾತ್ರ ಸಂಘಟನೆ ಹೆಚ್ಚು ಬಲಯುತಗೊಳ್ಳುವುದು ಹಾಗೂ ಯುವಕರ ವ್ಯಕ್ತಿತ್ವ ವಿಕಸನವೂ, ಸರ್ವಾಂಗೀಣ ಅಭಿವೃದ್ಧಿಯೂ ಸಾಧ್ಯ ಎಂದು ಕರ್ಣಾಟಕ ಬ್ಯಾಂಕಿನ ಅಧ್ಯಕ್ಷ ಪಿ. ಜಯರಾಮ ಭಟ್ ಹೇಳಿದ್ದಾರೆ.

ಉಡುಪಿಯ ಶಾರದಾ ಕಲ್ಯಾಣ ಮಂಟಪದಲ್ಲಿ ರವಿವಾರ ನಡೆದ ಕೂಟ ಮಹಾಜಗತ್ತಿನ ಕೇಂದ್ರೀಯ ಮಹಾಧಿವೇಶನವನ್ನು ಉ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಉಡುಪಿಯ ಶಾರದಾ ಕಲ್ಯಾಣ ಮಂಟಪದಲ್ಲಿ ರವಿವಾರ ನಡೆದ ಕೂಟ ಮಹಾಜಗತ್ತಿನ ಕೇಂದ್ರೀಯ ಮಹಾಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದೆಲ್ಲೆಡೆ ಹಾಗೂ ವಿಶ್ವದೆಲ್ಲೆಡೆ ಲಕ್ಷಾಂತರ ಸಂಖ್ಯೆಯಲ್ಲಿ ಕೂಟಬಂಧು ಗಳಿದ್ದಾರೆ. ಎಷ್ಟೋ ಸಂದರ್ಗಳಲ್ಲಿ ನಮ್ಮ ಸಂಪರ್ಕಕ್ಕೂ ಬರುತ್ತಾರೆ. ಆದರೆ ಅವರಲ್ಲಿ ನಮ್ಮ ಕೂಟ ಸಂಘಟನೆಗಳಲ್ಲಿ ದಾಖಲುಗೊಂಡಿರುವುದು ಅಲ್ಪ ಸಂಖ್ಯೆಯ ಸದಸ್ಯರು ಮಾತ್ರ. ಆದುದರಿಂದ ಎಲ್ಲ ಕೂಟಬಂಧುಗಳನ್ನು ಒಗ್ಗೂಡಿಸುವ ಕೆಲಸ ಆಗಬೇಕಾಗಿದೆ. ಇದರಿಂದ ಸಮಾಜ ಹೆಚ್ಚು ಹೆಚ್ಚು ಬಲಯುತಗೊಳ್ಳುತ್ತದೆ. ಸದೃಢವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷ ಪಿ.ವೆಂಕಟ್ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಎಂ. ಎಸ್. ಮಹಾಬಲೇಶ್ವರ ದಂಪತಿಗಳನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನ ಇದರ ಆಡಳಿತ ಮಂಡಳಿ ಅಧ್ಯಕ್ಷ ಕೆ. ಪದ್ಮನಾ ಐತಾಳ್ ದೇವಸ್ಥಾನದ ಪರವಾಗಿ ಗುರುಸಂದೇಶವನ್ನು ನೀಡಿದರು.

ಕೂಟಬಂಧು ವಿಶೇಷ ಸಂಚಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಬಿಡುಗಡೆ ಮಾಡಿದರು. ಶ್ರೀಸ್ಥಾನಿಕ ದ್ರಾವಿಡ ಬ್ರಾಹ್ಮಣ ಸಂಘದ ಅಧ್ಯಕ್ಷ ವೈ. ಭುವನೇಂದ್ರ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪಾಂಡೇಶ್ವರ ಶಾಂತಿಮತಿ ಪ್ರತಿಷ್ಠಾನದ ಅಧ್ಯಕ್ಷ ವಿದ್ವಾನ್ ಡಾ.ವಿಜಯ ಮಂಜರಿಂದ ಧಾರ್ಮಿಕ ಪ್ರವಚನ ನಡೆಯಿತು.

ಅಪರಾಹ್ನ ಕೇಂದ್ರ ಸಂಸ್ಥೆಯ ವಾರ್ಷಿಕ ಮಹಾಸಭೆ ನಡೆಯಿತು. ಕೊನೆಯಲ್ಲಿ ಉಡುಪಿ ಅಂಗಸಂಸ್ಥೆಯ ಮಹಿಳಾ ವೇದಿಕೆ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉಡುಪಿ ಅಂಗಸಂಸ್ಥೆ ಅಧ್ಯಕ್ಷ ಕೆ.ಎಸ್. ಕಾರಂತ ಸ್ವಾಗತಿಸಿದರು.ಕೇಂದ್ರ ಸಂಸ್ಥೆ ಕಾರ್ಯದರ್ಶಿ ರಾಮಕೃಷ್ಣ ಐತಾಳ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X