Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ ವಿವಾಹ ಕಾಯ್ದೆ: ವಿಚ್ಛೇದನಕ್ಕೆ...

ಹಿಂದೂ ವಿವಾಹ ಕಾಯ್ದೆ: ವಿಚ್ಛೇದನಕ್ಕೆ ಕಾಯುವಿಕೆ ಅವಧಿಯನ್ನು 6 ತಿಂಗಳು ತಗ್ಗಿಸಿದ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ12 Sept 2017 9:15 PM IST
share
ಹಿಂದೂ ವಿವಾಹ ಕಾಯ್ದೆ: ವಿಚ್ಛೇದನಕ್ಕೆ ಕಾಯುವಿಕೆ ಅವಧಿಯನ್ನು 6 ತಿಂಗಳು ತಗ್ಗಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಸೆ.12: ಹಿಂದೂ ವಿವಾಹ ಕಾಯ್ದೆಯಡಿ ವಿಚ್ಛೇದನಕ್ಕೆ ಕಾಯುವಿಕೆಯ ಅವಧಿಯನ್ನು ಆರು ತಿಂಗಳು ಕಡಿತಗೊಳಿಸಿರುವ ಸರ್ವೋಚ್ಚ ನ್ಯಾಯಾಲಯವು, ದಂಪತಿಗಳು ಕಡ್ಡಾಯವಾಗಿ 18 ತಿಂಗಳುಗಳ ಕಾಲ ಪ್ರತ್ಯೇಕವಾಗಿ ವಾಸವಿರಬೇಕೆಂಬ ನಿಯಮವನ್ನು ಕೈಬಿಟ್ಟು ವಿಚ್ಛೇದನವನ್ನು ಮಂಜೂರು ಮಾಡಬಹುದು ಎಂದು ಮಂಗಳವಾರ ತೀರ್ಪು ನೀಡಿದೆ.

ಹಿಂದೂ ವಿವಾಹ ಕಾಯ್ದೆಯ ನಿಯಮಗಳನ್ನು ವ್ಯಾಖ್ಯಾನಿಸಿದ ನ್ಯಾಯಮೂರ್ತಿಗಳಾದ ಎ.ಕೆ.ಗೋಯೆಲ್ ಮತ್ತು ಯು.ಯು.ಲಲಿತ್ ಅವರ ಪೀಠವು, ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪ್ರಕರಣಗಳಲ್ಲಿ ಆರು ತಿಂಗಳ ‘ಉಪಶಮನ ಅವಧಿ’ಯನ್ನು ನ್ಯಾಯಾಲಯಗಳು ಮನ್ನಾ ಮಾಡಬಹುದಾಗಿದೆ ಎಂದು ಹೇಳಿತು.

ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನಕ್ಕಾಗಿ ಹಿಂದೂ ವಿವಾಹ ಕಾಯ್ದೆಯಲ್ಲಿ ಸೇರಿಸಲಾಗಿರುವ ಕಲಂ 13ಬಿ ಮೇರೆಗೆ ವಿಚ್ಛೇದನದ ಆದೇಶವನ್ನು ಪಡೆಯಲು ಒಟ್ಟು 18 ತಿಂಗಳು ಕಾಯಬೇಕಾಗುತ್ತದೆ.

ಕಲಂ 13ಬಿ(1)ರಡಿ ಒಂದು ವರ್ಷದ ಕಾನೂನಾತ್ಮಕ ಪ್ರತ್ಯೇಕತೆಯ ಬಳಿಕ ದಂಪತಿಗಳು ವಿಚ್ಛೇದನವನ್ನು ಕೋರಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಅರ್ಜಿ ಸಲ್ಲಿಕೆಯಾದ ಬಳಿಕ ವಿಚ್ಛೇದನದ ಆದೇಶವನ್ನು ಪಡೆಯಲು ಕಲಂ 13ಬಿ(2)ರಡಿ ಇನ್ನೂ ಆರು ತಿಂಗಳು ಕಾಯಬೇಕಾಗಿದೆ.

ಕಲಂ 13ಬಿ(2) ಕಡ್ಡಾಯವಲ್ಲ ಎಂದು ಎತ್ತಿ ಹಿಡಿದ ಸರ್ವೋಚ್ಚ ನ್ಯಾಯಾಲಯವು, ವೈವಾಹಿಕ ಸಂಬಂಧವು ಸರಿಪಡಿಸಲಾಗದಷ್ಟು ಕೆಟ್ಟಿದ್ದರೆ ಪರಸ್ಪರ ಒಪ್ಪಿಗೆಯ ಮೇರೆಗೆ ವಿವಾಹವನ್ನು ರದ್ದುಗೊಳಿಸಿಕೊಳ್ಳಲು ದಂಪತಿಗೆ ಸಾಧ್ಯವಾಗಲು ಅದನ್ನು ರೂಪಿಸಲಾಗಿತ್ತು. ಆದ್ದರಿಂದ ಪರಸ್ಪರ ಇಷ್ಟಪಡದ ದಂಪತಿಗಳ ನಡುವಿನ ವಿವಾಹ ಸ್ಥಾನಮಾನವನ್ನು ಬಲವಂತದಿಂದ ಮುಂದುವರಿಸುವುದು ಅರ್ಥಹೀನವಾಗಿದೆ ಎಂದು ಒತ್ತಿ ಹೇಳಿತು.

ಅವಸರದಲ್ಲಿ ವಿಚ್ಛೇದನದ ನಿರ್ಧಾರವನ್ನು ಕೈಗೊಂಡಿದ್ದಿದ್ದರೆ ಮತ್ತು ಮರು ಹೊಂದಾಣಿಕೆಯಾಗುವ ಸಾಧ್ಯತೆಗಳಿದ್ದರೆ ಅಂತಹ ನಿರ್ಧಾರದ ಪುನರ್‌ಪರಿಶೀಲನೆಗೆ ಕಾಲಾವಕಾಶ ನೀಡುವುದು ಉಪಶಮನ ಅವಧಿಯ ಉದ್ದೇಶವಾಗಿದೆಯೇ ಹೊರತು ದಂಪತಿಯ ನಡುವೆ ಮರುಹೊಂದಾಣಿಕೆಯ ಸಾಧ್ಯತೆಯೇ ಇಲ್ಲದಿದ್ದಾಗ ಬಲವಂತದಿಂದ ಅವರ ನೋವುಗಳನ್ನು ಇನ್ನಷ್ಟು ಕಾಲ ಮುಂದುವರಿಸುವುದಲ್ಲ ಎಂದು ಪೀಠವು ಹೇಳಿತು.

ಕಾಯುವಿಕೆಯ ಅವಧಿಯು ದಂಪತಿಗಳ ಬೇಗುದಿಯನ್ನು ಇನ್ನಷ್ಟು ಕಾಲ ಮುಂದುವರಿ ಸುತ್ತದೆ ಮತ್ತು ಅವರ ನಡುವೆ ಮರು ಹೊಂದಾಣಿಕೆಯ ಎಲ್ಲ ಪ್ರಯತ್ನಗಳು ವಿಫಲವಾಗಿವೆ ಎನ್ನುವುದನ್ನು ಖಚಿತಪಡಿಸಿಕೊಂಡು ನ್ಯಾಯಾಲಯಗಳು ಆರು ತಿಂಗಳ ಅವಧಿಯನ್ನು ಮನ್ನಾಮಾಡಬಹುದು ಎಂದು ಅದು ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X