ಜಮೀಯ್ಯತುಲ್ ಫಲಾಹ್: 29ನೆ ವಾರ್ಷಿಕ ಮಹಾಸಭೆ
ಮಂಗಳೂರು, ಸೆ. 12: ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಘಟಕದ 29ನೆ ವಾರ್ಷಿಕ ಮಹಾಸಭೆಯು ಘಟಕದ ಅಧ್ಯಕ್ಷ ಅಬ್ದುಲ್ ಅಝೀಝ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ವಹಾಬ್ ಮತ್ತು ಕಾರ್ಯದರ್ಶಿ ಕೆ.ಎಂ.ಕೆ.ಮಂಜನಾಡಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಅಡ್ವಕೇಟ್ ಸಾದುದ್ದೀನ್ ಸಾಲಿಹ್, ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಸಾಹೇಬ್ ಮತ್ತು ಅಬೂಬಕರ್ ಸಿದ್ದೀಕ್, ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಅಹ್ಮದ್, ಕೋಶಾಧಿಕಾರಿಯಾಗಿ ಖತೀಬ್ ಇಮ್ತಿಯಾಝ್ ಅಹ್ಮದ್, ಜೊತೆ ಕಾರ್ಯದರ್ಶಿಯಾಗಿ ಜಮಾಲ್ ಕುದ್ರೋಳಿ, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಎಂ.ಹಸನ್, ಪತ್ರಿಕಾ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್ ಅವರನ್ನು ನೇಮಿಸಲಾಯಿತು.
ಪಿ.ಬಿ.ಎ.ರಝಾಕ್, ಬಿ.ಎಸ್.ಮುಹಮ್ಮದ್ ಬಶೀರ್, ಅಬ್ದುಲ್ ಅಝೀಝ್ ಅವರನ್ನು ಕೇಂದ್ರ ಸಮಿತಿಗೆ ಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಲಾಯಿತು ಎಂದು ಪ್ರಕಟನೆ ತಿಳಿಸಿದೆ.
Next Story