Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿಂಜಾವೇ ಮುಖಂಡರ ವಿರುದ್ಧ ಮುಂಜಾಗ್ರತಾ...

ಹಿಂಜಾವೇ ಮುಖಂಡರ ವಿರುದ್ಧ ಮುಂಜಾಗ್ರತಾ ಪ್ರಕರಣ ದಾಖಲು

ವಿಹಾರಕ್ಕೆ ತೆರಳಿದ ವಿದ್ಯಾರ್ಥಿಗಳ ಕಾರು ತಡೆದು ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ12 Sept 2017 10:16 PM IST
share
ಹಿಂಜಾವೇ ಮುಖಂಡರ ವಿರುದ್ಧ ಮುಂಜಾಗ್ರತಾ ಪ್ರಕರಣ ದಾಖಲು

ಕುಂದಾಪುರ, ಸೆ.12: ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರ ತಂಡವು ವಿಹಾರಕ್ಕೆ ತೆರಳಿದ ವಿದ್ಯಾರ್ಥಿಗಳ ಕಾರನ್ನು ತಡೆದು ಹಲ್ಲೆ ಮಾಡಿರುವ ಘಟನೆ ಸೋಮವಾರ ಸಂಜೆ ಕೋಟೇಶ್ವರ ಬೈಪಾಸ್ ಬಳಿ ನಡೆದಿದೆ.

ಉಡುಪಿಯ ಕಾಲೇಜೊಂದರ ಐವರು ವಿದ್ಯಾರ್ಥಿಗಳು ವಿಹಾರಕ್ಕೆಂದು ಕಾರಿನಲ್ಲಿ ಸೋಮವಾರ ಬೆಳಗ್ಗೆ ತ್ರಾಸಿ ಹಾಗೂ ಮರವಂತೆ ಬೀಚ್‌ಗೆ ಹೋಗಿದ್ದರು. ಇವರಲ್ಲಿ ಇಬ್ಬರು ಮುಸ್ಲಿಮ್ ಸಹೋದರ ಸಹೋದರಿಯರು, ಒಬ್ಬಳು ಕ್ರಿಶ್ಚಿಯನ್ ಹಾಗೂ ಒಬ್ಬಳು ಹಿಂದೂ ಹುಡುಗಿ ಮತ್ತು ಓರ್ವ ಮುಸ್ಲಿಮ್ ಹುಡುಗ ಇದ್ದರು. ಹುಡುಗರು ಕಾರಿನ ಎದುರಿನ ಸೀಟಿನಲ್ಲಿ ಮತ್ತು ಮೂವರು ಹುಡುಗಿಯರು ಹಿಂಬದಿಯ ಸೀಟಿನಲ್ಲಿ ಕುಳಿತು ಸಂಜೆ 6ಗಂಟೆಗೆ ಉಡುಪಿಗೆ ಹೊರಟಿದ್ದರು.

ಈ ಮಧ್ಯೆ ವಿಷಯ ತಿಳಿದ ಹಿಂದೂ ಜಾಗರಣಾ ವೇದಿಕೆಯ ಸುಮಾರು 100 ಮಂದಿ ಕಾರ್ಯಕರ್ತರು ಕೋಟೇಶ್ವರ ಬೈಪಾಸ್‌ನಲ್ಲಿ ಕಾರನ್ನು ಅಡ್ಡಗಟ್ಟಿ ವಿದ್ಯಾರ್ಥಿಗಳನ್ನು ಬೆದರಿಸಿ ಹಲ್ಲೆ ನಡೆಸಿದ್ದರೆನ್ನಲಾಗಿದೆ. ವಿದ್ಯಾರ್ಥಿಗಳು ನಾವೆಲ್ಲ ಗೆಳೆಯರು ವಿಹಾರಕ್ಕಾಗಿ ಬಂದಿದ್ದೇವೆ ಎಂದು ಹೇಳಿದರೂ ಕೇಳದ ಯುವಕರ ಪಡೆ ಹಲ್ಲೆಗೆ ಮುಂದಾಗಿತ್ತು. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.

ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಂದಾಪುರ ಎಸ್ಸೈ ನಾಸೀರ್ ಹುಸೇನ್ ಹಾಗೂ ತಂಡ ವಿದ್ಯಾರ್ಥಿಗಳನ್ನು ಅಲ್ಲಿಂದ ಠಾಣೆಗೆ ಕರೆದುಕೊಂಡು ಬಂದು ವಿಚಾರಿಸಿತು. ಈ ವೇಳೆ ಠಾಣೆಯಲ್ಲಿ ನೂರಾರು ಸಂಖ್ಯೆಯ ಹಿಂಜಾವೇ ಕಾರ್ಯಕರ್ತರು ಜಮಾಯಿಸಿದ್ದರು. ಪೊಲೀಸರು ಪೋಷಕರನ್ನು ಸಂಪರ್ಕಿಸಿದಾಗ ನಮ್ಮ ಮಕ್ಕಳು ನಮಗೆ ತಿಳಿಸಿಯೇ ತಿರುಗಾಡಲು ಹೋಗಿರುವು ದಾಗಿ ಹೇಳಿದರು.

ಈ ಹಿನ್ನೆಲೆಯಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಹಾಗೂ ಎಸ್ಸೈ ನಾಸೀರ್ ಹುಸೇನ್ ಠಾಣೆಯಲ್ಲಿ ಜಮಾಯಿಸಿದ ಹಿಂಜಾವೇ ಕಾರ್ಯ ಕರ್ತರಿಗೆ ಎಚ್ಚರಿಕೆ ನೀಡಿ, ಇನ್ನು ಮುಂದೆ ಈ ರೀತಿ ನಡೆದುಕೊಂಡರೆ ನಿಮ್ಮ ವಿರುದ್ಧವೇ ಕ್ರಮ ಜರಗಿಸಬೇಕಾಗುತ್ತದೆ. ಪೊಲೀಸರು ಮಾಡುವ ಕೆಲಸ ನೀವು ಮಾಡಬಾರದು. ಯಾವುದೇ ವಿಚಾರ ನಿಮ್ಮ ಗಮನಕ್ಕೆ ಬಂದರೆ ಕೂಡಲೇ ನಮಗೆ ತಿಳಿಸಿ, ನಾವು ಇದ್ದೇವೆ. ಅದು ಬಿಟ್ಟು ನಿಮಗೆ ಕಾನೂನು ಕೈಗೆತ್ತಿಕೊಳ್ಳಲು ಅಧಿಕಾರ ಇಲ್ಲ ಎಂದು ತಿಳಿಸಿದರು.

ಇದರಿಂದಾಗಿ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತ್ತೆನ್ನಲಾಗಿದೆ. ‘ಇನ್ನು ಮುಂದೆ ಯಾವುದೇ ಮಾಹಿತಿ ಪೊಲೀಸರಿಗೆ ತಿಳಿಸದೆ ನಾವೇ ನೋಡಿಕೊಳ್ಳುತ್ತೇವೆ’ ಎಂಬುದಾಗಿ ಹಿಂಜಾವೇ ಮುಖಂಡ, ಕೆಂಜೂರು ಪ್ರವೀಣ್ ಪೂಜಾರಿ ಹತ್ಯೆಯ ಆರೋಪಿ ಅರವಿಂದ ಕೋಟೇಶ್ವರ ಹಾಗೂ ಇತರರು ಪೊಲೀಸರಿಗೆ ಉಡಾಫೆ ಉತ್ತರ ನೀಡಿದರು. ಈ ರೀತಿ ಬೆದರಿಕೆಯೊಡ್ಡಿದ ಹಿಂಜಾವೇ ಮುಖಂಡರಾದ ಅರವಿಂದ ಕೋಟೇಶ್ವರ, ಅಶೋಕ್, ರಾಕೇಶ್, ರಂಜನ್, ಅನಿಲ್, ಸಂಪತ್, ಶಂಕರ್ ಕೋಟ ಅವರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡರು. ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಪೊಲೀಸ್ ಭದ್ರತೆ ಯಲ್ಲಿ ವಿದ್ಯಾರ್ಥಿಗಳನ್ನು ಉಡುಪಿಯಲ್ಲಿರುವ ಅವರ ಮನೆಗೆ ಬಿಟ್ಟು ಬರಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X