Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂರಿಂದ ಉದ್ಘಾಟನೆಯಾದರೂ ಬಹುತೇಕ...

ಸಿಎಂರಿಂದ ಉದ್ಘಾಟನೆಯಾದರೂ ಬಹುತೇಕ ಗ್ರಾಮಗಳಿಗೆ ನೀರಿಲ್ಲ..!

ವಾರ್ತಾಭಾರತಿವಾರ್ತಾಭಾರತಿ13 Sept 2017 10:39 PM IST
share
ಸಿಎಂರಿಂದ ಉದ್ಘಾಟನೆಯಾದರೂ ಬಹುತೇಕ ಗ್ರಾಮಗಳಿಗೆ ನೀರಿಲ್ಲ..!

ಗುಂಡ್ಲುಪೇಟೆ,ಸೆ.13: ತಾಲೂಕಿನ ಎಲ್ಲಾ 134 ಗ್ರಾಮಗಳಿಗೂ ನದಿಮೂಲದಿಂದ ಕುಡಿಯುವ ನೀರು ಸರಬರಾಜು ಮಾಡುವ ಬಹುಗ್ರಾಮಕುಡಿಯುವ ನೀರು ಯೋಜನೆಯನ್ನು ಉದ್ಘಾಟಿಸಿ 15 ದಿನಗಳು ಕಳೆದರೂ ಅಪೂರ್ಣ ಕಾಮಗಾರಿಯಿಂದ ಇನ್ನೂ ಉದ್ದೇಶಿತ ಗುರಿಮುಟ್ಟಿಲ್ಲದ ಪರಿಣಾಮವಾಗಿ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ.

ಇತ್ತೀಚೆಗೆ ಮಳೆ ಬೀಳುತ್ತಿದ್ದರೂ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಿಲ್ಲ. ತಾಲೂಕಿನ ಎಲ್ಲಾ ಗ್ರಾಮಗಳಿಗೂ ನದಿ ಮೂಲದಿಂದ ನೀರು ಸರಬರಾಜು ಮಾಡುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಆ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಉದ್ಘಾಟಿಸಿದ್ದರು. ಆದರೂ ಇನ್ನೂ ತಾಲೂಕಿನ ಎಲ್ಲಾ ಗ್ರಾಮಗಳಿಗೂ ಸರಬರಾಜು ಮಾಡಲಾಗುತ್ತಿಲ್ಲ. ತಾಲೂಕಿನ ಕಗ್ಗಳ, ಶಿಂಡನಪುರ, ಕೊಡಸೋಗೆ, ಬೊಮ್ಮಲಾಪುರ, ಚಿಕ್ಕತುಪ್ಪೂರು, ಬನ್ನೀತಾಳಪುರ, ಇಂಗಲವಾಡಿ ಸೇರಿದಂತೆ ಹಿಂದಿನಿಂದಲೂ ಕುಡಿಯುವ ನೀರಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಬಹುತೇಕ ಗ್ರಾಮಗಳಲ್ಲಿ ಸಮಸ್ಯೆ ತೀವ್ರವಾಗಿದೆ.

ಗ್ರಾಮೀಣ ಪ್ರದೇಶದ ಜನರು ತಮ್ಮ ಗೃಹಬಳಕೆಯ ಹಾಗೂ ಜಾನುವಾರುಗಳಿಗೆ ಅಗತ್ಯವಾದ ನೀರು ಸಂಗ್ರಹಿಸಲು ಹಗಲಿರುಳು ಶ್ರಮಿಸಬೇಕಾಗಿದೆ. ಮಹಿಳೆಯರು ತಲೆಯ ಮೇಲೆ ಬಿಂದಿಗೆಗಳನ್ನು ಹೊತ್ತು ಸುಮಾರು 2 ಕಿಲೋಮೀಟರ್ ಅಂತರದಿಂದ ನೀರು ತರಬೇಕಾಗಿದೆ. ಮಕ್ಕಳು ಬೈಸಿಕಲ್ ಮೇಲೆ ಹಾಗೂ ಯುವಕರು ಬೈಕುಗಳ ಮೇಲೆ ಬಿಂದಿಗೆಗಳನ್ನು ಹೇರಿಕೊಂಡು ಸಾಗಾಣೆ ಮಾಡಬೇಕಾಗಿದೆ.

ಕಳೆದ ಮೂರು ವರ್ಷಗಳ ಹಿಂದೆ ಪ್ರಾರಂಭಿಸಲಾದ ತಾಲೂಕಿನ ಜನತೆಯ ಬಹು ನಿರೀಕ್ಷೆಯ ಯೋಜನೆಯ ಜಾರಿಯಲ್ಲಿ ಉಂಟಾಗಿರುವ ಅಡೆತಡೆಗಳನ್ನು ನಿವಾರಿಸಿ ಎಲ್ಲಾ ಗ್ರಾಮಗಳಿಗೂ ಸಮರ್ಪಕ ನೀರು ಪೂರೈಸುವಂತಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಾರೆ.

ಒಂದೆಡೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಮಾರ್ಗದಲ್ಲಿ ಅಳವಡಿಸಿರುವ ವಾಲ್ವ್‍ಗಳ ಬಳಿ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದೆ. ಇನ್ನೊಂದೆಡೆ ಕುಡಿಯುವ ನೀರು ಸಂಗ್ರಹಿಸಲು ಸಾರ್ವಜನಿಕರು ಕಿಲೋಮೀಟರ್ ದೂರವನ್ನು ಕ್ರಮಿಸಬೇಕಾಗಿದೆ. ಇನ್ನಾದರೂ ಎಲ್ಲಾ ಗ್ರಾಮಗಳ್ಗೂ ಸಮರ್ಪಕ ಕುಡಿಯುವ ನೀರು ದೊರಕುವಂತೆ ಮಾಡಬೇಕು.
ಮಹೇಶ್, ಕಗ್ಗಳ.

ಈಗಾಗಲೇ ಬಹುತೇಕ ಗ್ರಾಮಗಳಿಗೆ ಪೈಪ್ ಲೈನ್ ಮೂಲಕ ಸಂಪರ್ಕ ಕಲ್ಪಿಸಿದ್ದರೂ ಈ ಗ್ರಾಮಗಳಲ್ಲಿ ಹಳೆಯ ಪೈಪ್ ಲೈನ್ ಮಾರ್ಗಗಳಲ್ಲಿನ ತೊಂದರೆಯಿಂದ ಶುದ್ದೀಕರಿಸಿದ ನೀರನ್ನು ಸರಬರಾಜು ಮಾಡಲಾಗುತ್ತಿಲ್ಲ.
ವಿಜಯಕುಮಾರ್ ಜಿಪಂ ಕುಡಿಯುವ ನೀರು ವಿಭಾಗದ ಎಇಇ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X