Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಅಲಕ್ಷಿತ ಸಮುದಾಯದ ವಚನಕಾರ್ತಿಯರು

ಅಲಕ್ಷಿತ ಸಮುದಾಯದ ವಚನಕಾರ್ತಿಯರು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ13 Sep 2017 6:41 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಲಕ್ಷಿತ ಸಮುದಾಯದ ವಚನಕಾರ್ತಿಯರು

ಪ್ರೊ. ಎಚ್. ಲಿಂಗಪ್ಪನವರು ಬರೆದಿರುವ ‘ಅರಿವು ಮೀರಿದ ಘನ’ ಕೃತಿಯಲ್ಲಿ ಆಲಕ್ಷಿತ ತಳಸಮುದಾಯದ ಕ್ರಾಂತಿಕಾರಿ ವಚನಕಾರ್ತಿಯರನ್ನು ಗುರುತಿಸಿ ವೈಚಾರಿಕವಾಗಿ ವಿಶ್ಲೇಷಿಸಿದ್ದಾರೆ. ಒಟ್ಟು 16 ಜನ ಶರಣೆಯರ ವಚನಗಳನ್ನು ಕೂಡಿಸಿರುವ ಅವರು ವಚನಗಳ ಸರಳತೆ ಮತ್ತು ಅದರ ಒಳಧ್ವನಿಯಲ್ಲಿರುವ ಅಗಾಧತೆಯನ್ನು ಕಟ್ಟಿಕೊಡಲು ಯಶಸ್ವಿಯಾಗಿದ್ದಾರೆ. ಕನ್ನಡದ ಮಟ್ಟಿಗೆ ಇದೊಂದು ಹೊಸ ಪ್ರಯತ್ನ, ಹಾಗೆಯೇ ವಿಶಿಷ್ಟ ಪ್ರಯತ್ನ. ಬೆನ್ನುಡಿಯಲ್ಲಿ ಹೇಳುವಂತೆ, ವಚನಗಳ ಮೂಲಕ ಲೇಖಕರು, ಶರಣ ಶರಣೆಯರ ಬದುಕಿನ ಹಂದರವನ್ನು ಚಿತ್ರಿಸುತ್ತಾ, ಸರ್ವೋದಯ ಸಮಾನತೆ ಭವಿಷ್ಯಕ್ಕಾಗಿ ನಮ್ಮಾಳಗೆ ರೂಢಿಸಿಕೊಳ್ಳಬೇಕಾದ ಜೀವದಯೆಯನ್ನು ಎತ್ತಿ ಹಿಡಿಯುತ್ತಾರೆ. ಹೇಗೆ ವೈದಿಕ ನೆಲೆಗಟ್ಟನ್ನೇ ಈ ವಚನಗಳು ಪ್ರಶ್ನಿಸುತ್ತವೆ ಎನ್ನುವುದನ್ನು ಅವರು ವಿವರಿಸುತ್ತಾರೆ. ಮೂಲೆಗುಂಪಾಗಿದ್ದ ಪ್ರತಿ ಸಂಸ್ಕೃತಿಯನ್ನು ಈ ಮೂಲಕ ಬಯಲಿಗೆಳೆದಿದ್ದಾರೆ. ಅಧ್ಯಯನಕಾರರಾಗಿ ಇನ್ನಷ್ಟು ವಿಶಾಲ ದಾರಿಯೊಂದನ್ನು ತೆರೆದುಕೊಟ್ಟಿದ್ದಾರೆ. ಸಾಧಾರಣವಾಗಿ ಈಗಾಗಲೇ ಜನಪ್ರಿಯವಾಗಿರುವ ಹೆಸರುಗಳನ್ನು ಪಕ್ಕಕ್ಕಿಟ್ಟು, ಪ್ರಜ್ಞಾಪೂರ್ವಕವಾಗಿ ಬದಿಗೆ ಸರಿದಿರುವ ಕೆಲವು ವಚನಕಾರ್ತಿಯರನ್ನು ಮುನ್ನೆಲೆಗೆ ತಂದಿದ್ದಾರೆ. ಇದು ಆಲಕ್ಷಿತ ಸಮಾಜದ ಅನುಭಾವಿ ವಚನಕಾರ್ತಿಯರ ಪರಿಚಯ ಎನ್ನಬಹುದು. ದುಗ್ಗಳೆ, ಗೊಗ್ಗವ್ವೆ, ಬೊಂತಾದೇವಿ, ಆಯ್ದಕ್ಕಿ ಲಕ್ಕಮ್ಮ, ಸತ್ಯಕ್ಕ, ಸೂಳೆ ಸಂಕವ್ವೆ, ಕಾಳವ್ವೆ, ಕೊಟ್ಟಣದ ಸೋಮಮ್ಮ, ಈಡಿಗರ ಅಕ್ಕಮ್ಮ...ಹೀಗೆ ನಮಗೆ ಅಪರಿಚಿತವಾಗಿರುವ ಹಲವು ಹೆಸರುಗಳು ಇಲ್ಲಿವೆ. ಈ ವಚನಕಾರ್ತಿಯರು ಮಾಡುತ್ತಿದ್ದ ಕಾಯಕಗಳು, ಅವರ ಬದುಕಿನ ಹಿನ್ನೆಲೆ, ವಚನ ಚಳವಳಿಯ ನಿಜವಾದ ಹಿರಿಮೆಯನ್ನು ಹೇಳುತ್ತದೆ.

ರಶ್ಮಿ ಪ್ರಕಾಶನ ಚಿತ್ರದುರ್ಗ ಇವರು ಹೊರತಂದಿರುವ ಕೃತಿಯ ಪುಟಗಳು 136. ಮುಖಬೆಲೆ 130 ರೂಪಾಯಿ. ಆಸಕ್ತರು 99459 98099 ದೂರವಾಣಿಯನ್ನು ಸಂಪರ್ಕಿಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X