Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮ್ಯಾನ್ಮಾರ್ ಅಶಾಂತಿ ಶಮನಕ್ಕೆ ಭಾರತ ಮಧ್ಯ...

ಮ್ಯಾನ್ಮಾರ್ ಅಶಾಂತಿ ಶಮನಕ್ಕೆ ಭಾರತ ಮಧ್ಯ ಪ್ರವೇಶಿಸಲಿ: ಎಸ್‍ವೈಎಸ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ14 Sept 2017 6:06 PM IST
share
ಮ್ಯಾನ್ಮಾರ್ ಅಶಾಂತಿ ಶಮನಕ್ಕೆ ಭಾರತ ಮಧ್ಯ ಪ್ರವೇಶಿಸಲಿ: ಎಸ್‍ವೈಎಸ್ ಒತ್ತಾಯ

ಮಡಿಕೇರಿ, ಸೆ.14: ಮ್ಯಾನ್ಮಾರ್‍ನಲ್ಲಿ ಸೃಷ್ಟಿಯಾಗಿರುವ ಅಶಾಂತಿಯ ವಾತಾವರಣವನ್ನು ಶಮನ ಮಾಡಲು ಭಾರತ ದೇಶ ಮಧ್ಯ ಪ್ರವೇಶ ಮಾಡಬೇಕು ಮತ್ತು ಶಾಂತಿ ನೆಲೆಸುವವರೆಗೆ ರೋಹಿಂಗ್ಯ ನಿರಾಶ್ರಿತರನ್ನು ಭಾರತದಿಂದ ಗಡಿಪಾರು ಮಾಡಬಾರದೆಂದು ಎಸ್‍ವೈಎಸ್ ಸಂಘಟನೆ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮಾಧ್ಯಮ ಸಂಚಾಲಕ ಸಿ.ಎಂ.ಹಮೀದ್ ಮೌಲವಿ, ಮಾನವೀಯ ನೆಲೆಯಲ್ಲಿ ಭಾರತ ರೊಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡಬೇಕು. ನೆರೆ ರಾಷ್ಟ್ರ ಮ್ಯಾನ್ಮಾರ್‍ನಲ್ಲಿ ಭಯಾನಕ ಹತ್ಯಾಕಾಂಡಗಳು ನಡೆಯುತ್ತಿದ್ದು, 10 ಲಕ್ಷಕ್ಕೂ ಅಧಿಕ ಮಂದಿ ಅಕ್ಕಪಕ್ಕದ ರಾಷ್ಟ್ರಗಳಿಗೆ ವಲಸೆ ಹೋಗಿದ್ದಾರೆ. ಭಾರತ ದೇಶಕ್ಕೂ ಸುಮಾರು 40 ಸಾವಿರ ಮಂದಿ ಆಗಮಿಸಿದ್ದು, ಅಸಹಾಯಕ ಸ್ಥಿತಿಯಲ್ಲಿರುವ ಇವರನ್ನು ಯಾವುದೇ ಕಾರಣಕ್ಕು ಗಡಿಪಾರು ಮಾಡಬಾರದೆಂದು ಒತ್ತಾಯಿಸಿದರು.

ಈ ದೌರ್ಜನ್ಯದ ವಿರುದ್ಧ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೆರೆ ರಾಷ್ಟ್ರವಾಗಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮ್ಯಾನ್ಮಾರ್‍ನ ನಾಯಕಿ ಆಂಗ್ ಸಾನ್ ಸೂಕಿ ಅವರೊಂದಿಗೆ ಚರ್ಚಿಸಿ ಬಿಕ್ಕಟ್ಟು ಶಮನಕ್ಕೆ ಮುಂದಾಗಬೇಕೆಂದು ತಿಳಿಸಿದರು.

ಶ್ರೀಲಂಕ, ಟಿಬೆಟ್ ಸೇರಿದಂತೆ ನೆರೆಯ ರಾಷ್ಟ್ರಗಳಿಂದ ಬಂದಿರುವ ನಿರಾಶ್ರಿತರಿಗೆ ಆಶ್ರಯ ನೀಡಿರುವ ಭಾರತ ಅದಕ್ಕಿಂತಲೂ ಹೆಚ್ಚಿನ ಸಂಕಷ್ಟ ಮತ್ತು ನೋವನ್ನು ಅನುಭವಿಸುತ್ತಿರುವ ರೊಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ಮತ್ತು ಅಭಯ ಹಸ್ತವನ್ನು ನೀಡಬೇಕೆಂದು ಮನವಿ ಮಾಡಿದರು.

ಖಂಡನೆ: ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಎಸ್‍ವೈಎಸ್ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ತಲೆ ತಗ್ಗಿಸುವಂತಹ ಕೃತ್ಯ ಇದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಾನತೆಗಾಗಿ ಮತ್ತು ವಾಕ್ ಸ್ವಾತಂತ್ರ್ಯಕ್ಕಾಗಿ ಹೋರಾಟಗಳನ್ನು ರೂಪಿಸಿದ್ದ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೆಟ್ಟ ಹೆಸರನ್ನು ತರುವ ಪ್ರಯತ್ನ ಮಾಡಲಾಗಿದೆ ಎಂದು ಆರೋಪಿಸಿದರು.

ವಿಚಾರಗಳ ಭಿನ್ನತೆಯನ್ನು ವೈಚಾರಿಕವಾಗಿ ಎದುರಿಸಬೇಕೆ ಹೊರತು ಬಂದೂಕಿನಿಂದ ಅಲ್ಲ. ದುಷ್ಕೃತ್ಯವೆಸಗಿದವರು ಯಾರೇ ಆಗಿರಲಿ ಅವರನ್ನು ಶೀಘ್ರ ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ಸಿ.ಎಂ.ಹಮೀದ್ ಮೌಲವಿ ಆಗ್ರಹಿಸಿದರು.

ಹೊಸತೋಟ ಮಸೀದಿ ಹಾಗೂ ಕಕ್ಕಬ್ಬೆ ಶ್ರೀ ಭಗವತಿ ದೇವಾಲಯವನ್ನು ಅಪವಿತ್ರಗೊಳಿಸಿರುವ ಕೃತ್ಯಗಳನ್ನು ಸಂಘಟನೆ ಕಟುವಾಗಿ ಖಂಡಿಸುತ್ತದೆ. ಆದರೆ, ಈ ರೀತಿಯ ಘಟನೆಗಳು ನಡೆದಾಗ ಒಂದು ಸಮುದಾಯವನ್ನು ಗುರಿ ಮಾಡುವುದು ಸರಿಯಾದ ಕ್ರಮವಲ್ಲವೆಂದರು. ಎಸ್‍ವೈಎಸ್ ಸಂಘಟನೆಯಲ್ಲಿ ಸುಮಾರು 2 ಸಾವಿರ ಮಂದಿ ಸದಸ್ಯರುಗಳಿದ್ದು, ಯಾರ ವಿರುದ್ಧವೂ ಯಾವುದೇ ದೂರುಗಳಿಲ್ಲ. ಸಂಘಟನೆ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನಷ್ಟೆ ಬಯಸುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಉಮ್ಮರ್ ಫೈಝಿ, ಪ್ರಮುಖರಾದ ಎ.ಸಿ. ಉಸ್ಮಾನ್ ಫೈಝಿ, ಕಾರ್ಯನಿರ್ವಾಹಕ ಕಾರ್ಯದರ್ಶಿ ಎನ್.ಎನ್. ಇಕ್ಬಾಲ್, ಮೊಹಮ್ಮದಾಲಿ ಹಾಗೂ ಫೈಝಲ್ ಫೈಝಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X