Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಧ್ಯಮಗಳ ವರದಿಯಿಂದ ಮನಸ್ಸಿಗೆ...

ಮಾಧ್ಯಮಗಳ ವರದಿಯಿಂದ ಮನಸ್ಸಿಗೆ ನೋವಾಗಿದೆ: ಇಂದ್ರಜಿತ್ ಲಂಕೇಶ್

ವಾರ್ತಾಭಾರತಿವಾರ್ತಾಭಾರತಿ14 Sept 2017 7:30 PM IST
share
ಮಾಧ್ಯಮಗಳ ವರದಿಯಿಂದ ಮನಸ್ಸಿಗೆ ನೋವಾಗಿದೆ: ಇಂದ್ರಜಿತ್ ಲಂಕೇಶ್

ಬೆಂಗಳೂರು, ಸೆ.14: "ನನ್ನ ಹಿರಿಯ ಸಹೋದರಿ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸುತ್ತಿರುವ ವಿಚಾರಣೆಗೆ ನಾನು ಸಹಕಾರ ನೀಡುತ್ತಿಲ್ಲ, ಯಾವುದೇ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡುತ್ತಿಲ್ಲವೆಂದು ಕೆಲವು ಮಾಧ್ಯಮಗಳು ಬಿಂಬಿಸುತ್ತಿರುವುದರಿಂದ ಮನಸ್ಸಿಗೆ ನೋವಾಗಿದೆ" ಎಂದು ಚಲನಚಿತ್ರ ನಿರ್ದೇಶಕ ಇಂದ್ರಜಿತ್‌ ಲಂಕೇಶ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಒಬ್ಬ ಪತ್ರಕರ್ತ, ಒಂದು ಪತ್ರಿಕೆಯನ್ನು ನಡೆಸುತ್ತಿದ್ದೇನೆ. ಪತ್ರಕರ್ತರು ವೃತ್ತಿ ಬದುಕಿನಲ್ಲಿ ಎದುರಿಸುವ ಕಷ್ಟ ನನಗೆ ಅರ್ಥವಾಗುತ್ತದೆ. ಆದರೆ, ಆಧಾರ ರಹಿತವಾದ ವರದಿಗಳು ಪ್ರಕಟಿಸುವುದು ಎಷ್ಟರಮಟ್ಟಿಗೆ ಸರಿ" ಎಂದು ಪ್ರಶ್ನಿಸಿದರು.

"ಎಸ್‌ಐಟಿಯವರು ನಡೆಸುತ್ತಿರುವ ತನಿಖೆ ವೇಳೆ ನಾನು ಗಳಗಳನೆ ಅತ್ತಿದ್ದೇನೆ, ಅವರ ಪ್ರಶ್ನೆಗಳಿಗೆ ಉತ್ತರಿಸದೆ ಕುಸಿದು ಬಿದ್ದಿದ್ದೇನೆ ಎಂದು ಪ್ರಕಟಿಸುತ್ತಿರುವ ವರದಿಗಳನ್ನು ನೋಡಿ ಮನಸ್ಸಿಗೆ ತುಂಬಾ ಬೇಜಾರಾಗಿದೆ. ನಮ್ಮ ಅಕ್ಕನನ್ನು ಕಳೆದುಕೊಂಡ ನೋವಿನಲ್ಲಿ ನಾವಿದ್ದೇವೆ. ಆದರೆ, ಈ ರೀತಿಯ ವರದಿಗಳ ಬಗ್ಗೆ ಸ್ಪಷ್ಟೀಕರಣ ನೀಡಲೇಬೇಕಿದೆ" ಎಂದು ಹೇಳಿದರು.

"ನನ್ನ ಅಕ್ಕನ ಕೊಲೆಯಾಗಿದೆ, ಅದನ್ನು ನಾನು, ನನ್ನ ತಾಯಿ, ಅಕ್ಕ ಸೇರಿದಂತೆ ಎಲ್ಲರೂ ತೀವ್ರವಾಗಿ ಖಂಡಿಸಿದ್ದೇವೆ. ಗೌರಿ ಅಕ್ಕನ ಹತ್ಯೆಗೆ ಕಾರಣಕರ್ತರು ಯಾರು, ಯಾವ ಕಾರಣಕ್ಕಾಗಿ ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಕೊಳ್ಳಲು ನಿಮಗೆ ಇರುವಷ್ಟೇ ಆತಂಕ, ಕುತೂಹಲ ನಮಗೂ ಇದೆ" ಎಂದ ಅವರು, "ನಾವು ಎಸ್‌ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಒಂದು ಸಿದ್ಧಾಂತದ ವಿಚಾರವಾಗಿ ನಾನು ಹಾಗೂ ಗೌರಿ ಅಕ್ಕ ಬೇರೆಯಾಗಿದ್ದೆವು. ಈ ಸಂಬಂಧ ನಾವಿಬ್ಬರೂ ಪರಸ್ಪರ ಒಬ್ಬರ ವಿರುದ್ಧ ಒಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆವು. ಆನಂತರ, ಇಬ್ಬರೂ ಕೂತು ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಂಡಿದ್ದೇವೆ" ಎಂದರು.

"ಆ ಪ್ರಕರಣವಾಗಿ ಸುಮಾರು 14-15 ವರ್ಷವಾಗಿದೆ. ಈ ಅವಧಿಯಲ್ಲಿ ನನ್ನ ವಿರುದ್ಧ ಅವರಾಗಲಿ, ಅವರ ವಿರುದ್ಧ ನಾನಾಗಲಿ ಎಂದಿಗೂ ಮಾತನಾಡಿಲ್ಲ. ಒಂದು ಕುಟುಂಬವಾಗಿ ಹೇಗೆ ಅನ್ಯೋನ್ಯವಾಗಿರಬೇಕು, ನಾವು ಹಾಗೆ ಇದ್ದೆವು. ಹಬ್ಬ ಹರಿದಿನಗಳನ್ನು ಎಲ್ಲರೂ ಒಟ್ಟಾಗಿ ಸೇರಿ ಆಚರಿಸಿದ್ದೇವೆ" ಎಂದು ಇಂದ್ರಜಿತ್ ಲಂಕೇಶ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X