Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಿಂಗಾಯತ ಸ್ವತಂತ್ರ ಧರ್ಮದ ವಿಚಾರ: ತಜ್ಞರ...

ಲಿಂಗಾಯತ ಸ್ವತಂತ್ರ ಧರ್ಮದ ವಿಚಾರ: ತಜ್ಞರ ಸಮಿತಿ ರಚನೆಗೆ ಬಸವರಾಜರಾಯರೆಡ್ಡಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ14 Sept 2017 8:01 PM IST
share
ಲಿಂಗಾಯತ ಸ್ವತಂತ್ರ ಧರ್ಮದ ವಿಚಾರ: ತಜ್ಞರ ಸಮಿತಿ ರಚನೆಗೆ ಬಸವರಾಜರಾಯರೆಡ್ಡಿ ಸಲಹೆ

ಬೆಂಗಳೂರು, ಸೆ.14: ಲಿಂಗಾಯತ ಸ್ವತಂತ್ರ ಧರ್ಮ ಯಾವ ರೀತಿ ಇರಬೇಕು ಎಂಬುದನ್ನು ನಾವು ಮೊದಲು ನಿರ್ಧರಿಸಿಕೊಳ್ಳಬೇಕು. ಇದಕ್ಕಾಗಿ ಸ್ವಾಮೀಜಿಗಳು, ಕಾನೂನು ತಜ್ಞರನ್ನು ಒಳಗೊಂಡ 15 ಜನರ ಸಮಿತಿಯನ್ನು ರಚಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಸಲಹೆ ನೀಡಿದ್ದಾರೆ.

ಗುರುವಾರ ವಿಧಾನಸೌದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಸ್ಥಾಪನೆಯ ವಿಷಯದಲ್ಲಿ ಸರಕಾರದ ಪಾತ್ರವೇನೂ ಇಲ್ಲ.ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂದರ್ದಲ್ಲಿ ಮಾತ್ರ ಸರಕಾರ ಮಧ್ಯ ಪ್ರವೇಶ ಅಗತ್ಯವಿದೆ ಎಂದರು. 

ವೀರಶೈವರು ಹಿಂದೂಗಳು. ಅವರು ಲಿಂಗಾಯತರೊಂದಿಗೆ ಸೇರಿಕೊಂಡರೆ ಪ್ರತ್ಯೇಕ ಧರ್ಮದ ಮಾನ್ಯತೆ ಪಡೆಯಲು ಕಾನೂನು ತೊಡಕು ಎದುರಾಗುತ್ತದೆ. ಹೀಗಾಗಿ ವೀರಶೈವ ಬದಲಾಗಿ ‘ವೀರ ಲಿಂಗಾಯತ’ ಎಂದು ಹೆಸರು ಬದಲಾವಣೆ ಮಾಡಿಕೊಂಡರೆ ಸ್ವಾಗತ ಎಂದು ಅವರು ಹೇಳಿದರು.

ಶೈವ ಎಂಬ ಪದ ಹಿಂದೂ ಧರ್ಮದಲ್ಲಿದೆ. ಋಗ್ವೇದ ಉಪನಿಷತ್‌ಗಳಲ್ಲಿಯೂ ಈ ಪದದ ಉಲ್ಲೇಖವಿದೆ. ಶೈವರು ಎಂದರೆ ವೈಷ್ಣವರು ಎಂದು ಪರಿಗಣಿಸಲಾಗುತ್ತದೆ. ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ಸಿಗುವ ಸಂದರ್ಭದಲ್ಲಿ ವೀರಶೈವರನ್ನೊಳಗೊಂಡಿದ್ದರೆ ನ್ಯಾಯಾಲಯದಲ್ಲಿ ಇದು ಪ್ರಶ್ನಾರ್ಹವಾಗುವ ಸಾಧ್ಯತೆಗಳಿವೆ. ಹಾಗಾಗಿ ವೀರಶೈವರ ಬದಲಾಗಿ ವೀರಲಿಂಗಾಯತ ಎಂದು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಹಿಂದೂ ಧರ್ಮದಲ್ಲಿ ವರ್ಣಭೇದ ನೀತಿಗಳಿವೆ, ಸಮಾನತೆ ಇಲ್ಲ. ಸ್ತ್ರೀಯರಿಗೆ ಮಾನ್ಯತೆ ಇಲ್ಲ. ಶರಣ ಸಂಪುಟದಲ್ಲಿ ಇದೆಲ್ಲವೂ ಸಾಧ್ಯವಿದೆ. ಲಿಂಗಾಯತ ಧರ್ಮದಲ್ಲಿ ಪೂಜೆ ಮಾಡುವಂತಿಲ್ಲ. ಅಂಧ ಶ್ರದ್ಧೆ, ಮೂಢನಂಬಿಕೆಗೆ ಅವಕಾಶವಿಲ್ಲ. ವೈಚಾರಿಕ ನೆಲೆಗಟ್ಟಿನಲ್ಲಿ ಲಿಂಗಾಯತ ಧರ್ಮ ಸ್ಥಾಪನೆಯಾಗಬೇಕು. ಅದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಿ ಆ ಸಮಿತಿಯ ಶಿಫಾರಸ್ಸುಗಳನ್ನು ಆಧರಿಸಿ ಧರ್ಮವನ್ನು ಪುನರುಜ್ಜೀವನಗೊಳಿಸಬೇಕು ಎಂದು ಸಲಹೆ ನೀಡಿದರು.

ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಸಿದ್ಧಗಂಗಾ ಶ್ರೀಗಳ ವಿಷಯದಲ್ಲಿ ಸುಳ್ಳು ಹೇಳಿದ್ದಾರೆ ಎಂದು ನನಗೆ ಅನಿಸುತ್ತಿಲ್ಲ. ಸಿದ್ದಗಂಗಾ ಶ್ರೀಗಳ ಹೇಳಿಕೆಯು ಸುಳ್ಳು ಎಂದು ನಾನು ಪ್ರತಿಪಾದಿಸುವುದಿಲ್ಲ. ಈ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮಾತ್ರ ಒಳ್ಳೆಯದಲ್ಲ ಎಂದು ಬಸವರಾಜರಾಯರೆಡ್ಡಿ ಹೇಳಿದರು.

ಎಂ.ಬಿ.ಪಾಟೀಲ್ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಗೊಂದಲಗಳನ್ನು ಬಗೆಹರಿಸಿಕೊಳ್ಳುವುದು ಸೂಕ್ತ. ಶೀಘ್ರದಲ್ಲೇ ನಾನು ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಬಸವರಾಜರಾಯರೆಡ್ಡಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X