Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೃದ್ದರೊಬ್ಬರಿಗೆ ನಂಬಿಸಿ ವಂಚನೆ: ದೂರು

ವೃದ್ದರೊಬ್ಬರಿಗೆ ನಂಬಿಸಿ ವಂಚನೆ: ದೂರು

ವಾರ್ತಾಭಾರತಿವಾರ್ತಾಭಾರತಿ14 Sept 2017 10:39 PM IST
share

ಪುತ್ತೂರು, ಸೆ. 14: ಔಷಧಿಗಾಗಿ ಪೇಟೆಗೆ ಬಂದಿದ್ದ ವೃದ್ಧರೊಬ್ಬರ ಬಳಿಗೆ ಬಂದು ಆಧಾರ್ ಲಿಂಕ್ ವಿಚಾರ ಪ್ರಸ್ತಾಪಿಸಿ ವಿಶ್ವಾಸಗಿಟ್ಟಿಸಿಕೊಂಡ ಅಪರಿಚಿತನೊಬ್ಬ ಅವರ ಬಳಿಯಿದ್ದ ಚಿನ್ನದ ಆಭರಣ, ನಗದು ಲಪಟಾಯಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕುರಿಯ ಗ್ರಾಮದ ಕುರಿಯ ನಿವಾಸಿ ಹುಕ್ರಪ್ಪ ನಾಯ್ಕ(73) ವಂಚನೆಗೊಳಗಾದವರು. ಪುತ್ತೂರಿನ ಬಸ್ ನಿಲ್ದಾಣದ ಸಮೀಪವಿರುವ ಔಷಧಾಲಯಕ್ಕೆ ಬಂದಿದ್ದ ಹುಕ್ರಪ್ಪ ನಾಯ್ಕ ಅವರು ಔಷಧಿ ಪಡೆದುಕೊಂಡು ಹಿಂತಿರುಗುವ ಸಿದ್ಧತೆಯಲ್ಲಿದ್ದ ವೇಳೆ ಅಲ್ಲಿಗೆ ಬಂದ ಅಪರಿಚಿತನೊಬ್ಬ ’ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ, ವೋಟರ್ ಐಡಿ ಎಲ್ಲ ಸರಿಯಿದೆಯೇ ಎಂದು ಕೇಳಿ ತಾನು ಆ ವ್ಯವಸ್ಥೆಯನ್ನು ಸರಿಪಡಿಸಿಕೊಡುವುದಾಗಿ ನಂಬಿಸಿದ್ದ. ಆತನ ಮಾತಿಗೆ ಮೋಡಿಗೆ ಮರುಳಾದ ಹುಕ್ರಪ್ಪ ನಾಯ್ಕ ಅವರು ತನ್ನ ಮನೆಗೆ ಹೋಗಿ ಆಧಾರ್ ಕಾರ್ಡ್, ವೋಟರ್ ಐಡಿಯನ್ನು ತಂದು ಅಲ್ಲೇ ಕಾದು ಕುಳಿತಿದ್ದ ಆತನ ಕೈಗೆ ನೀಡಿದ್ದರು.

ಈ ಸಂರ್ಭದಲ್ಲಿ ನನ್ನ ಅಜ್ಜನಿಗೂ ನಿಮ್ಮ ಕಿವಿಯಲ್ಲಿರುವಂತದ್ದೇ ಚಿನ್ನದ ಟಿಕ್ಕಿ ಮಾಡಲಿಕ್ಕಿದೆ. ಆದ್ದರಿಂದ ನಿಮ್ಮ ಕಿವಿಯಲ್ಲಿರುವ ಚಿನ್ನದ ಆಭರಣವನ್ನೊಮ್ಮೆ ನನಗೆ ಕೊಡಿ. ನಾನು ಜ್ಯುವೆಲ್ಲರಿಗೆ ಹೋಗಿ ತೋರಿಸಿ ಬರುತ್ತೇನೆ. ನಾನು ಹಿಂತಿರುಗಿ ಬರುವ ತನಕ ನನ್ನಲ್ಲಿರುವ ಚಿನ್ನದ ಬೆಂಡೋಲೆ ನಿಮ್ಮಲ್ಲಿರಲಿ ಎಂದು ನಂಬಿಸಿ ನಕಲಿ ಬೆಂಡೋಲೆಯೊಂದನ್ನು ಅವರ ಕೈಗೆ ನೀಡಿದ್ದ. ಅಲ್ಲದೆ ಆಧಾರ್ ಕಾರ್ಡ್ ಲಿಂಕ್ ಮತ್ತು ವೋಟರ್ ಐಡಿ ಸರಿಪಡಿಸುವ ಸಲುವಾಗಿ ರೂ.400 ನ್ನು ಮುಂಗಡವಾಗಿ ಪಡೆದುಕೊಂಡು ಅಲ್ಲಿಂದ ಜ್ಯುವೆಲ್ಲರಿ ಅಂಗಡಿಗೆಂದು ಹೊರಟು ಹೋಗಿದ್ದ.

ಆತನ ನಯವಾದ ಮಾತನ್ನು ನಿಜವೆಂದೇ ನಂಬಿದ್ದ ಹುಕ್ರಪ್ಪ ಅವರು ಆತ ನೀಡಿದ ನಕಲಿ ಬೆಂಡೋಲೆಯನ್ನು ಹಿಡಿದುಕೊಂಡು ಗಂಟೆಗಟ್ಟಲೆ ಕಾದು ಕುಳಿತರೂ ಆತ ಬರಲೇ ಇಲ್ಲ. ಕೊನೆಗೆ ಅವರಿಗೆ ತಾನು ಮೋಸ ಹೋಗಿರುವುದು ಅರಿವಿಗೆ ಬಂತು. ಬಳಿಕ ಅವರು ಈ ವಿಚಾರವನ್ನು ಮನೆಯವರಿಗೆ ತಿಳಿಸಿದ್ದು, ಬಳಿಕ ಘಟನೆಯ ಕುರಿತು ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು. ಪುತ್ತೂರು ನಗರ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X