Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಣಕಲ್ ನಾಡಾ ಕಚೇರಿಗೆ ಜಿಲ್ಲಾಧಿಕಾರಿ...

ಬಣಕಲ್ ನಾಡಾ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ15 Sept 2017 7:20 PM IST
share
ಬಣಕಲ್ ನಾಡಾ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಬಣಕಲ್, ಸೆ.15: ಬಣಕಲ್ ಗ್ರಾಪಂ ವ್ಯಾಪ್ತಿಯಲ್ಲಿ ಮಂಜೂರಾಗಿರುವ ಆಶ್ರಯ ಮನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ವಿತರಣೆಯಾಗಿರುವ ಬಗ್ಗೆ ಖಚಿತಪಡಿಸಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಜಿ.ಸತ್ಯವತಿ ಬಣಕಲ್ ನಾಡಾ ಕಚೇರಿಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು.

ತದನಂತರ ಅಧಿಕಾರಿಗಳೊಂದಿಗೆ ಇಂದಿರಾನಗರಕ್ಕೆ ತೆರಳಿ ಆಶ್ರಯ ಮನೆಗಳಿಗೆ ಮಂಜೂರಾಗಿರುವ ನಿವೇಶನದ ಸ್ಥಳ ಪರಿಶೀಲಿಸಿದರು. ನಂತರ ಆಶ್ರಯ ಮನೆಗಳು ಸಮರ್ಪಕವಾಗಿ ಇವೆಯೇ ಇಲ್ಲವೇ ಫಲಾನುಭವಿಗಳಿಗೆ ದೊರೆತಿವೆಯೇ  ಎಂಬುದರ ಬಗ್ಗೆ ಅಲ್ಲಿದ್ದ ಕೆಲವು ಮನೆಗಳ ಒಳಗೆ ಹೋಗಿ ಪರಿಶೀಲಿಸಿ ಜನರ ಯೋಗಕ್ಷೇಮ ವಿಚಾರಿಸಿದರು.

ಬಣಕಲ್ ಗ್ರಾಪಂ ಅಧ್ಯಕ್ಷ ಬಿ.ವಿ.ಸುರೇಶ್ ಜಿಲ್ಲಾಧಿಕಾರಿಯವರೊಂದಿಗೆ ಮಾತನಾಡಿ, ಬಣಕಲ್‍ನ ಗುಡ್ಡಹಟ್ಟಿ ರಸ್ತೆ ಸಂಪೂರ್ಣ ಹಾಳಾಗಿದ್ದು ರಿಪೇರಿ ಬಗ್ಗೆ ಪ್ರಸ್ತಾಪಿಸಿದರು. ಅದನ್ನು ಪರಿಶೀಲಿಸುವುದಾಗಿ ಹೇಳಿದ ಜಿಲ್ಲಾಧಿಕಾರಿ ನಂತರ ಇಂದಿರಾನಗರದಲ್ಲಿ ಆಶ್ರಯ ಮನೆಗಳ ಅಪೂರ್ಣ ಕಾಮಾಗಾರಿ ಶೀಘ್ರವೇ ಮಾಡಿ ಎಂದು ಅದಿಕಾರಿಗಳಿಗೆ ತಾಕೀತು ನೀಡಿದರು.

ಮರಳಿನ ಕೊರತೆ ಬಗ್ಗೆ ಅಧಿಕಾರಿಗಳು ಗಮನ ಸೆಳೆದಾಗ  ಜಿಲ್ಲಾಧಿಕಾರಿ ಜಿ.ಸತ್ಯವತಿಯವರು ಗುತ್ತಿಗೆದಾರರು ಎಂಸ್ಯಾಂಡ್ ಬಳಸಿ ಕಾಮಗಾರಿ ಪೂರ್ಣಗೊಳಿಸಲು ಸ್ಥಳೀಯ ಅದಿಕಾರಿಗಳಿಗೆ ಸೂಚಿಸಿದರು.

ಆಶ್ರಯ ಮನೆಗಳಿಗೆ ನೀಡಿರುವ ನಿವೇಶನದ ಸ್ಥಳದಲ್ಲಿ  ಅರಣ್ಯ ಇಲಾಖೆಯ  ನೆಡುತೋಪು ಇರುವುದರಿಂದ ಅದನ್ನು ತೆಗೆಯಲು ಅರಣ್ಯ ಅದಿಕಾರಿಗಳ ಗಮನಕ್ಕೆ ತಂದು ನಿವೇಶನವನ್ನು ಬೇಗ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿಯವರಲ್ಲಿ ಗ್ರಾಪಂ ಅಧ್ಯಕ್ಷರು ಮನವಿ ಮಾಡಿದರು. ನಂತರ ಮತ್ತಿಕಟ್ಟೆಯಲ್ಲಿ ಪ.ಜಾತಿ ಮತ್ತು ಪಂಗಡದ ಸಮುದಾಯದವರು ಹೆಚ್ಚಾಗಿರುವುದರಿಂದ ಅವರು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಣಕಲ್ ಗ್ರಾಪಂ ವತಿಯಿಂದ ಈ ಭಾಗಕ್ಕೆ ನೀರನ್ನು ಟ್ಯಾಂಕರ್ ಮುಖಾಂತರ ಈಗ ನೀರು ಸರಬರಾಜು ಮಾಡಲಾಗುತ್ತಿದೆ. ಅವರಿಗೆ ನೀರಿನ ಟ್ಯಾಂಕ್ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜಿ.ಸತ್ಯವತಿಯವರಿಗೆ ಸ್ಥಳೀಯ ಗ್ರಾಪಂ ಅಧಿಕಾರಿಗಳು ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದರು.

ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿಯವರು ತುಸು ಸಮಯ ನಾಡಾ ಕಛೇರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರಭಾರಿ ಜಿಲ್ಲಾಧಿಕಾರಿ ವೈಶಾಲಿ, ಬಣಕಲ್ ಗ್ರಾಮ ಲೆಕ್ಕಾಧಿಕಾರಿ ಬಸವೇಗೌಡ, ಕಂದಾಯ ಅಧಿಕಾರಿ ಸುರೆಂದ್ರಬಾಬು, ಬಣಕಲ್ ಗ್ರಾಪಂ ಅಧ್ಯಕ್ಷ ಬಿ.ವಿ.ಸುರೇಶ್, ಸದಸ್ಯ ಸತೀಶ್‍ಮತ್ತಿಕಟ್ಟೆ, ಬಣಕಲ್ ಗ್ರಾಪಂ ಲೆಕ್ಕ ಸಹಾಯಕ ನಾಣಿಯಪ್ಪ, ಕಾರ್ಯಧರ್ಶಿ ಸುದೀರ್, ಅಣ್ಣಪ್ಪ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X