Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಸೈಗೋಳಿಯಲ್ಲಿ ಶಾಂತಿ ಸೇವಾ ಆಶ್ರಮ...

ಅಸೈಗೋಳಿಯಲ್ಲಿ ಶಾಂತಿ ಸೇವಾ ಆಶ್ರಮ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 Sept 2017 8:13 PM IST
share

ಕೊಣಾಜೆ, ಸೆ. 15: ನಿರ್ಗತಿಕರಿಗೆ, ನೋವಿನ ಬದುಕು ಅನುಭವಿಸುವವರಿಗೆ ಆಶ್ರಯ ಕಲ್ಪಿಸಿಕೊಡುವುದು ಮನುಕುಲದ ಬಲು ಶ್ರೇಷ್ಠ ಕಾರ್ಯ ಎಂದು ಕನ್ಯಾನ ಬಾಳೆಕೋಡಿ ಮಠದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ನುಡಿದರು.

ಅವರು ಶುಕ್ರವಾರ ಅಸೈಗೋಳಿಯಲ್ಲಿ ಉದ್ಘಾಟನೆಗೊಂಡ ಶಾಂತಿ ಸೇವಾ ಆಶ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಮನುಷ್ಯನಾದವನಿಗೆ ಕೆಲವು ವಿಷಯಗಳಲ್ಲಿ ಅಸಮಾನತೆ ಇದ್ದರೂ ಕಾಯಿಲೆ ಹಾಗೂ ಸಾವಿನಲ್ಲಿ ಬೇಧವಿಲ್ಲ. ಅಲ್ಲಿ ಜಾತಿ, ಮತ, ಪಂಗಡ, ಅಚರಣೆ, ಪದ್ಧತಿ, ಕುಟುಂಬ ಯಾವುದೂ ನಗಣ್ಯ. ಬಡವ ಶ್ರೀಮಂತ ಎಂಬ ಬೇಧವಿಲ್ಲ. ನೋವು ಅನುಭವಿಸುವುದರಲ್ಲಿಯೂ ತಾರತಮ್ಯ ಇಲ್ಲ. ಹಾಗಾಗಿ ಕಾಯಿಲೆ ಹಾಗೂ ಸಾವಿನಿಂದ ಪಾರಾಗಲು ಪ್ರಾರ್ಥನೆಯೇ ಮುಖ್ಯವಾಗಿದೆ ಎಂದರು.

ಕಷ್ಟ ಸುಖಗಳನ್ನು ಅನುಭವಿಸುವಾಗ ಯಾವುದೇ ಸ್ವರದಲ್ಲಿ ಯಾವ ಶಬ್ಧದಲ್ಲಿ ಯಾವ ದೇವರನ್ನು ಕರೆದರೂ ನಮ್ಮ ಧ್ವನಿ ಆಲಿಸುವ ದೇವನೊಬ್ಬನೆ. ಮನಸ್ಸು ಎಲ್ಲಕ್ಕಿಂತ ದೊಡ್ಡದು. ಆಶ್ರಮ ತತ್ವದಡಿಯಲ್ಲಿ ಆಶ್ರಯ ಪಡೆದವರಿಗೆ ಹತ್ತು ಜನ ಸೇರಿಕೊಂಡು ಸಹಾಯ ಮಾಡುವುದರಿಂದ ನೊಂದ ಮನಸ್ಸಿನಿಂದ ಆಶ್ರಯ ಪಡೆದವರಲ್ಲಿ ನವಚೈತನ್ಯ ತುಂಬಲು ಸಾಧ್ಯವಾಗುತ್ತದೆ. ಯಾವ ವ್ಯಕ್ತಿ ಇತರರ ನೋವಿನಲ್ಲಿ ಸ್ಪಂದಿಸುತ್ತಾನೋ ಆ ವ್ಯಕ್ತಿ ಬದುಕಿನಲ್ಲಿ ಸೋಲುವುದಿಲ್ಲ. ದೇವರ ಸಂಪ್ರೀತಿ ಗಳಿಸುತ್ತಾನೆ. ಶಾಂತಿ ಸೇವಾ ಆಶ್ರಮದಲ್ಲಿಯೂ ನೊಂದವರ ಕಣ್ಣೀರು ಒರೆಸುವ ಕಾಯರ್ ಸದಾ ನಡೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಸೇವಕ ಜ್ಯೋತಿಷಿ ಪ್ರಸಾದ್ ವಿಟ್ಲ ಮಾತನಾಡಿ ಆಶ್ರಮವೆಂದರೆ ಶಾಂತಿಧಾಮ. ಬದುಕಿನಲ್ಲಿ ಹತಾಶರಾದವರಿಗೆ ಆಶ್ರಯ ಕೊಟ್ಟಾಗ ಅವರ ಹಾರೈಕೆ ನಮ್ಮ ಯಶಸ್ಸಿಗೆ ದಾರಿದೀಪವಾಗುತ್ತದೆ. ಆಶ್ರಮದಲ್ಲಿ ಮತ ಧರ್ಮ ಜಾತಿ ಬೇಧವಿಲ್ಲ. ಇರುವುದು ಮುಷ್ಯ ಧರ್ಮ ಮಾತ್ರ ಎಂದರು.  ಪ್ರಗತಿಪರ ಕೃಷಿಕ ಮರ್ಸಲ್ ಡಿಸೋಜ ನೂತನ ಆಶ್ರಮವನ್ನು ಉದ್ಘಾಟಿಸಿದರು.

ಬಿಜೆಪಿ ರಾಜ್ಯಕಾರ್ಯಕಾರಿಣಿ ಸದಸ್ಯ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಮೆಲ್ಕಾರ್ ಬಿರುವ ಸೆಂಟರ್‌ನ ಮಾಲೀಕ ಸಂಜೀವ ಪೂಜಾರಿ, ಕೊಣಾಜೆಯ ಲಯನ್ಸ್ ಕ್ಲಬ್ ಮಂಗಳಗಂಗೋತ್ರಿಯ ಮಾಜಿ ಅಧ್ಯಕ್ಷ ರಘುರಾಮ ಕಾಜವ,  ಉದ್ಯಮಿ ವಿಜೇಶ್ ಕೊಳಕೆ, ಕರ್ನಾಟಕ ಮಹಿಳಾ ಮತ್ತು ಮಕ್ಕಳ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷೆ ಹಸೀನಾ, ಉಳ್ಳಾಲ ಮದನಿ ಪ್ರೌಢಶಾಲೆಯ ನಿವೃತ್ತ ಅಧ್ಯಾಪಕ ಎಲಿಯಾಸ್ ಡಿಸೋಜ, ಮಾಜಿ ಮಂಡಲ ಪಂಚಾಯಿತಿ ಸದಸ್ಯ ಟಿ.ಎಸ್. ಅಬ್ದುಲ್ಲ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ‘ಡಿ’ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಪ್ರಾಂಕಿ "ಡಿ" ಕುಟ್ಟಿನ್ಹ ಉಪಸ್ಥಿತರಿದ್ದರು.

ಶಾಂತಿ ಸೇವಾ ಆಶ್ರಮ ಸ್ಥಾಪಕ  ಅರುಣ್ ಡಿಸೋಜ ಅಸೈಗೋಳಿ ವಂದಿಸಿದರು. ಉಳ್ಳಾಲ ಅಳೇಕಲ ಮದನಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಆನಂದ್ ಅಸೈಗೋಳಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X