Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಗೋಡೆಗಳನ್ನು ಮೀರಿದ ಮಹಿಳೆಯರು

ಗೋಡೆಗಳನ್ನು ಮೀರಿದ ಮಹಿಳೆಯರು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ16 Sept 2017 12:11 AM IST
share
ಗೋಡೆಗಳನ್ನು ಮೀರಿದ ಮಹಿಳೆಯರು

‘ನಮಗೆ ಗೋಡೆಗಳಿಲ್ಲ’ ಕೃತಿ, ತೆಲುಗಿನ ಫೆಮಿನಿಸ್ಟ್ ಸರ್ಕಲ್ ಮಾಡಿರುವ ಸ್ತ್ರೀವಾದ ಪರಿಚಯ. ಬಿ. ಸುಜ್ಞಾನ ಮೂರ್ತಿಯವರು ಇದನ್ನು ಕನ್ನಡಕ್ಕಿಳಿಸಿದ್ದಾರೆ. ಈ ಪುಸ್ತಕದಲ್ಲಿನ ನಾಲ್ಕು ಪ್ರಬಂಧಗಳಲ್ಲಿ ಮೊದಲನೆಯದು ವಸಂತ ಕಣ್ಣ್ಣಭಿರಾನ್ ಅವರ ‘ಸ್ತ್ರೀವಾದ ಅಂದರೆ ಏನು?’ 1988 ಆಗಸ್ಟ್‌ನಲ್ಲಿ ಕೊಟ್ಟ ಮೊದಲ ಉಪನ್ಯಾಸದ ಪೂರ್ಣಪಾಠ. ಇದರಲ್ಲಿ ಸ್ತ್ರೀ ವಾದದ ವ್ಯಾಖ್ಯಾನ, ಲಿಂಗಭೇದ, ಲೈಂಗಿಕತೆ, ಮಾತೃತ್ವದಂತಹ ಬಹುಮುಖ್ಯವಾದ ವಿಷಯಗಳನ್ನು ಚರ್ಚಿಸಲಾಗಿದೆ. ಎರಡನೆಯ ಪ್ರಬಂಧ ಅಂತಾರಾಷ್ಟ್ರೀಯ ಸ್ತ್ರೀ ವಿಮೋಚನಾ ಚಳವಳಿಯ ಇತಿಹಾಸ’ ಕೆ. ಲಲಿತಾ ಅವರು ಸೆಪ್ಟಂಬರ್‌ನಲ್ಲಿ ನೀಡಿದ ಉಪನ್ಯಾಸ. ಇದರಲ್ಲಿ ಪಾಶ್ಚಾತ್ಯ ದೇಶಗಳಲ್ಲಿ, ಮುಖ್ಯವಾಗಿ ರಷ್ಯಾ, ಚೀನಾ ದೇಶಗಳಲ್ಲಿ ಕ್ರಾಂತಿಯ ಸಂದರ್ಭದಲ್ಲಿ ಎತ್ತಿದ ಸಿದ್ಧಾಂತ ವಿಷಯಗಳು, ಅಮೆರಿಕದಲ್ಲಿ 70ನೆಯ ದಶಕದಲ್ಲಿ ಮಹಿಳೆಯರ ದೃಷ್ಟಿಕೋನದಲ್ಲಿ ಉಂಟಾದ ಕ್ರಾಂತಿಕಾರಕ ಬದಲಾವಣೆಗಳನ್ನುಚರ್ಚಿಸಲಾಗಿದೆ. ಮೂರನೆಯ ಪ್ರಬಂಧ ‘ಸ್ತ್ರೀವಾದಿ ಅರಿವು’ ಓಲ್ಗಾ ಅವರು ನೀಡಿದ ಉಪನ್ಯಾಸ. ಈ ಉಪನ್ಯಾಸದಲ್ಲಿ ಸ್ತ್ರೀವಾದಿ ದೃಷ್ಟಿಕೋನವನ್ನು ಭಾರತದ ದೇಶದ ಮಹಿಳೆಯರ ಅನುಭವದಿಂದ ಪರಿಶೀಲಿಸಲಾಗಿದೆ. ನಾಲ್ಕನೆಯ ಪ್ರಬಂಧ ‘ಮೂರನೆ ಜಗತ್ತಿನ ರಾಷ್ಟ್ರಗಳಲ್ಲಿ ಮಹಿಳೆಯರ ಹೋರಾಟಗಳು’ ರಮಾ ಮೇಲ್ಕೋಟೆಯವರದು. ಇದರಲ್ಲಿ ಏಷ್ಯಾ, ಆಫ್ರಿಕಾ, ಲ್ಯಾಟಿನ್ ಅಮೆರಿಕ ದೇಶಗಳಲ್ಲಿ ನಡೆದ ಸ್ವಾತಂತ್ರ ಹೋರಾಟಗಳಲ್ಲಿ ಮಹಿಳೆಯರ ಪಾತ್ರವನ್ನು ಪರಿಶೀಲಿಸಲಾಗಿದೆ. ಆಯಾ ಹೋರಾಟಗಳಲ್ಲಿ ಮಹಿಳೆಯರ ಹಕ್ಕುಗಳನ್ನು, ಅವರು ಎತ್ತಿದ ಪ್ರಶ್ನೆಗಳನ್ನು ಚರ್ಚಿಸಲಾಗಿದೆ.

ಲಡಾಯಿ ಪ್ರಕಾಶನ, ಗದಗ ಹೊರತಂದಿರುವ ಈ ಕೃತಿಯ ಮುಖಬೆಲೆ 80 ರೂಪಾಯಿ.. 

share
-ಕಾರುಣ್ಯಾ
-ಕಾರುಣ್ಯಾ
Next Story
X