Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನದಿ ಜೋಡಣೆ ರಸ್ತೆ ಜೋಡಣೆಯಂತಲ್ಲ:...

ನದಿ ಜೋಡಣೆ ರಸ್ತೆ ಜೋಡಣೆಯಂತಲ್ಲ: ಜಲಜಾಗೃತಿ ಕಾರ್ಯಕರ್ತ ರಾಜೇಂದ್ರ ಸಿಂಗ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ16 Sept 2017 6:51 PM IST
share
ನದಿ ಜೋಡಣೆ ರಸ್ತೆ ಜೋಡಣೆಯಂತಲ್ಲ: ಜಲಜಾಗೃತಿ ಕಾರ್ಯಕರ್ತ ರಾಜೇಂದ್ರ ಸಿಂಗ್ ಎಚ್ಚರಿಕೆ

 ಪುಣೆ, ಸೆ.16: ನದಿ ಜೋಡಣೆ ಯೋಜನೆ ಹಣಮಾಡುವ ದಂಧೆಯಾಗಿದೆ ಎಂದು ಟೀಕಿಸಿರುವ ಜಲ ಜಾಗೃತಿ ಕಾರ್ಯಕರ್ತ ರಾಜೇಂದ್ರ ಸಿಂಗ್ , ನದಿ ಜೋಡಣೆ ಎಂಬುದು ರಸ್ತೆ ಜೋಡಣೆಯಂತಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನದಿ ಜೋಡಣೆ ಕಾರ್ಯದಿಂದ ನದಿ-ಪರಿಸರ ವ್ಯವಸ್ಥೆಗೆ ಸರಿಪಡಿಸಲಾಗದ ಹಾನಿ ಉಂಟಾಗುವ ಸಾಧ್ಯತೆಯಿದೆ. ರಸ್ತೆಗಳನ್ನು ಜೋಡಿಸುವುದು ಅಷ್ಟೊಂದು ತ್ರಾಸದಾಯಕವಲ್ಲ. ಆದರೆ ಎರಡು ನದಿಗಳ ಜೋಡಣೆ ಎಂಬುದು ಅಷ್ಟೊಂದು ಸುಲಭವಲ್ಲ. ನದಿಗಳು ತಮ್ಮದೇ ಆದ ಪರಿಸರ ವಿಜ್ಞಾನ ವ್ಯವಸ್ಥೆ ಕಾಯ್ದುಕೊಂಡಿರುತ್ತವೆ. ಆದ್ದರಿಂದ ನದಿ ಜೋಡಣೆಗೆ ಮುಂದಾದರೆ ಪ್ರಾಕೃತಿಕ ಪರಿಸರ ವ್ಯವಸ್ಥೆ ಸಂಪೂರ್ಣ ನಾಶವಾಗುತ್ತದೆ ಎಂದವರು ಹೇಳಿದರು. ಪುಣೆಯ ಸಿಂಬಿಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಜಿಯೊಇನ್‌ಫಾರ್ಮೆಟಿಕ್ಸ್‌ನಲ್ಲಿ ಆಯೋಜಿಸಲಾಗಿದ್ದ ವಿಚಾರಸಂಕಿರಣದಲ್ಲಿ ‘ಜಲಾನಯನ ಭೂಮಿ ಮತ್ತು ಅದರ ಅಭಿವೃದ್ಧಿ’ ಎಂಬ ವಿಚಾರಗೋಷ್ಠಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

  ಸಟ್ಲೇಜ್ ಮತ್ತು ಯಮುನಾ ನದಿಗಳನ್ನು ಜೋಡಿಸಲು ನಡೆಸಿದ ಈ ಹಿಂದಿನ ಯತ್ನವೂ ಸೇರಿದಂತೆ ಹಲವು ವಿಫಲ ಯತ್ನಗಳ ಬಗ್ಗೆ ತಿಳಿದಿದ್ದರೂ ನದಿ ಜೋಡಣೆಗೆ ಭಾರೀ ಮೊತ್ತದ ನಿಧಿಯನ್ನು ಕಾಯ್ದಿರಿಸಿರುವ ಬಗ್ಗೆ ಸರಕಾರವನ್ನು ಅವರು ಪ್ರಶ್ನಿಸಿದರು.

ನದಿ ಜೋಡಣೆಯ ಬದಲು ಅಂತರ್ಜಲ ಬರಿದಾಗಿಸುವ ಕಾರ್ಯಗಳನ್ನು ತಡೆಗಟ್ಟುವ ಕುರಿತು ಸರಕಾರ ನಿರ್ದೇಶನ ನೀಡಬೇಕು. ದೇಶದ ಶೇ.72ಕ್ಕೂ ಹೆಚ್ಚು ಅಂತರ್ಜಲ ಸಂಗ್ರಹಗಳಿಗೆ ಹರಿದು ಬರುವ ನೀರಿನ ಒರತೆಗಿಂತ ಅತ್ಯಧಿಕ ಪ್ರಮಾಣದಲ್ಲಿ ನೀರು ಬರಿದಾಗಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ಸರಕಾರ ಹಾಗೂ ಕಾರ್ಯನೀತಿ ರೂಪಿಸುವ ಅಧಿಕಾರಿಗಳು ಗಮನಿಸಬೇಕು. ನೀರಿನ ಒರತೆಯನ್ನು ಅಂತರ್ಜಲ ಸಂಗ್ರಹಾಗಾರಗಳಿಗೆ ಜೋಡಿಸುವ ಕಾರ್ಯ ಮೊದಲು ನಡೆಯಬೇಕಿದೆ ಎಂದು ಸಿಂಗ್ ಹೇಳಿದರು.

ತಾನು ಇತ್ತೀಚೆಗೆ ಒಡಿಶಾ, ಜಾರ್ಖಂಡ್ ಹಾಗೂ ಛತ್ತೀಸ್‌ಗಡ ರಾಜ್ಯಗಳಿಗೆ ಭೇಟಿ ನೀಡಿದ್ದು ಇಲ್ಲಿ ನೀರಿನ ಕೊರತೆಗೆ ನೀರಿನ ಅಸಮರ್ಪಕ ನಿರ್ವಹಣೆಯೇ ಮುಖ್ಯ ಕಾರ ಣವಾಗಿದೆ. ಈ ರಾಜ್ಯಗಳಲ್ಲಿ ಗಿಡಮರಗಳು ಕಡಿಮೆಯಾಗುತ್ತಿದ್ದು ಮಾಲಿನ್ಯದ ಮಟ್ಟ ಏರಿಕೆಯಾಗುತ್ತಿದೆ. ಇದರ ಬಗ್ಗೆ ಯಾರೂ ಗಮನ ಹರಿಸಿಲ್ಲ. ಈ ರಾಜ್ಯಗಳು ಐತಿಹಾಸಿಕವಾಗಿ ಬರಪೀಡಿತ ರಾಜ್ಯಗಳೇನಲ್ಲ. ವೃಕ್ಷ ಸಮೂಹದ ನಾಶದಿಂದಾಗಿ ಮಳೆಪ್ರಮಾಣ ಕಡಿಮೆಯಾಗಿದೆ. ಇದರ ಕಾರಣ ಇಲ್ಲಿ ಕೃಷಿ ಚಟುವಟಿಕೆಗೆ ತೊಂದರೆಯಾಗಿದೆ ಎಂದು ಅವರು ಹೇಳಿದರು.

ಎರಡು ನದಿಗಳನ್ನು ಜೋಡಿಸುವ ಮೂಲಕ ನೀರಿನ ಕೊರತೆಯಿರುವ ನದಿಗಳಿಗೆ ಸಾಕಷ್ಟು ನೀರಿನ ಸಂಗ್ರಹವಿರುವ ನದಿಗಳಿಂದ ನೀರು ಹರಿಸುವುದು ನದಿ ಜೋಡಣೆಯ ಮುಖ್ಯ ಉದ್ದೇಶವಾಗಿದೆ. ಈ ಮೂಲಕ ದೇಶದ ಎಲ್ಲಾ ಪ್ರದೇಶಗಳಲ್ಲೂ ಸಾಕಷ್ಟು ನೀರು ಲಭ್ಯವಿರುವಂತೆ ನೋಡಿಕೊಳ್ಳುವುದು ಹಾಗೂ ನೆರೆ ಮತ್ತು ಬರಹಾವಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶವಿದೆ. ಆದರೆ ಇಂತಹ ಕ್ರಮಗಳಿಂದ ಆಗಬಹುದಾದ ದೂರಗಾಮಿ ಪರಿಣಾಮಗಳ ಬಗ್ಗೆ ಜಲ ತಜ್ಞರು ಸರಕಾರವನ್ನು ಎಚ್ಚರಿಸಿದ್ದಾರೆ.

ಸರಕಾರ ಸುಮಾರು 30 ನದಿ ಜೋಡಣೆ ಯೋಜನೆಯನ್ನು ಗುರುತಿಸಿದ್ದು, ಇದರಂತೆ ಮಧ್ಯಪ್ರದೇಶದ ಕೆನ್ ಮತ್ತು ಬೆತ್ವಾ ನದಿ ಜೋಡಣೆ ಯೋಜನೆಯನ್ನು ಪ್ರಥಮವಾಗಿ ಕೈಗೆತ್ತಿಕೊಳ್ಳುವ ಉದ್ದೇಶವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X