Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ದಸರಾ ವಿಶೇಷ
  3. ಪ್ರವಾಸಿ ತಾಣ ಪರಿಚಯಿಸಲು ದೇಶದಲ್ಲೇ...

ಪ್ರವಾಸಿ ತಾಣ ಪರಿಚಯಿಸಲು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಓಪನ್ ಜೀಪ್ ಟೂರ್ಸ್: ಬಿ.ಎಸ್.ಪ್ರಶಾಂತ್

ವಾರ್ತಾಭಾರತಿವಾರ್ತಾಭಾರತಿ16 Sep 2017 3:39 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪ್ರವಾಸಿ ತಾಣ ಪರಿಚಯಿಸಲು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಓಪನ್ ಜೀಪ್ ಟೂರ್ಸ್: ಬಿ.ಎಸ್.ಪ್ರಶಾಂತ್

ಮೈಸೂರು, ಸೆ.16: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸಿ ತಾಣಗಳನ್ನು ಪ್ರವಾಸಿಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ಸೇಫ್‍ ವೀಲ್ಸ್ ವತಿಯಿಂದ ದೇಶದಲ್ಲೇ ಮೊದಲ ಬಾರಿಗೆ ಓಪನ್ ಜೀಪ್ ಟೂರ್ಸ್ ಆಯೋಜಿಸಲಾಗಿದೆ ಎಂದು ಸೇಫ್‍ವೀಲ್ ಮ್ಯಾನೇಜಿಂಗ್ ಡೈರೆಕ್ಟರ್ ಬಿ.ಎಸ್.ಪ್ರಶಾಂತ್ ತಿಳಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಶನಿವಾರ  ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೈಸೂರು ಎಂದಾಕ್ಷಣ ಅರಮನೆಗಳು, ಪಾರಂಪರಿಕ ಕಟ್ಟಡಗಳು, ಐತಿಹಾಸಿಕ ಸ್ಥಳಗಳು ಕಣ್ಣ ಮುಂದೆ ಬರುತ್ತವೆ. ನಗರದ ಸೌಂದರ್ಯ ಸವಿಯಲೆಂದೇ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ನಗರಕ್ಕೆ ಬರುತ್ತಾರೆ. ಆದರೆ ಅವರಿಗೆ ಪ್ರವಾಸಿ ತಾಣಗಳ ಮಾಹಿತಿ ಇರುವುದಿಲ್ಲ. ಹಾಗಾಗಿ ನಗರದ ಪ್ರತಿಯೊಂದು ಸ್ಥಳದ ಐತಿಹಾಸಿಕ ಮಾಹಿತಿಯೊಂದಿಗೆ ಅಂದವನ್ನು ಕಣ್ತುಂಬಿಕೊಳ್ಳಲು ಓಪನ್ ಜೀಪ್ ಟೂರ್ಸ್ ಆಯೋಜಿಸಲಾಗಿದ್ದು, ಸೆ.18ರಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಳಗ್ಗೆ 11 ಗಂಟೆಗೆ ಅರಮನೆಯ ಉತ್ತರ ದ್ವಾರದಲ್ಲಿ ಚಾಲನೆ ನೀಡಲಿದ್ದು, ಶಾಸಕ ವಾಸು, ಮಾಜಿ ಸಚಿವ ಎಸ್.ಎ.ರಾಮದಾಸ್, ಜಿಲ್ಲಾಧಿಕಾರಿ ಡಿ.ರಂದೀಪ್, ಅರ್ಜುನ ಟೂರ್ಸ್ ಆ್ಯಂಡ್ ಟ್ರಾವೆಲ್ಸ್‍ನ ಎಂ.ರವಿ, ಹೊಟೇಲ್ ಮಾಲಕರ ಸಂಘದ ನಾರಾಯಣ ಗೌಡ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಓಪನ್ ಜೀಪ್‍ನಲ್ಲಿ 6 ಮಂದಿ ಕೂರುವ ವ್ಯವಸ್ಥೆಯಿದ್ದು ಒಬ್ಬರಿಗೆ 599 ರೂ ದರ ನಿಗದಿ ಮಾಡಲಾಗಿದೆ. ಕುಟುಂಬದ ಮೂವರು ಸದಸ್ಯರು ಮಾತ್ರ ಒಂದು ಜೀಪ್‍ನಲ್ಲಿ ಪ್ರವಾಸ ಕೈಗೊಂಡರೆ 3500 ರೂ ದರ ನಿಗದಿಪಡಿಸಿವೆ. ತಮ್ಮ ಪ್ರವಾಸದ ಸಂತಸದ ಕ್ಷಣಗಳನ್ನು ಸೆರೆ ಹಿಡಿಯುವ ಸಲುವಾಗಿ ಎರಡು ಸೆಲ್ಫಿ ಸ್ಟಿಕ್, ರೇನ್ ಕೋಟ್ ನೀಡುತ್ತೇವೆ. ಅಲ್ಲದೆ ಪ್ರತ್ಯೇಕವಾಗಿ ಛಾಯಾಗ್ರಾಹರಕು ಬೇಕೆಂದರೆ ಅದಕ್ಕೂ ವ್ಯವಸ್ಥೆ ಮಾಡುತ್ತೇವೆ ಎಂದರು.

ಈ ಬಾರಿ ನಾವು ಆಡಿಯೋ ಗೈಡೆಡ್ ವ್ಯವಸ್ಥೆ ಮಾಡಿದ್ದೇವೆ. ಕನ್ನಡ, ಇಂಗ್ಲಿಷ್, ಹಿಂದಿ, ಪ್ರೆಂಚ್ ಭಾಷೆಯಲ್ಲಿ ಮಾಹಿತಿ ಇದ್ದು ಪ್ರವಾಸ ಆರಂಭಿಸುವಾಗ ಸ್ಟಾರ್ಟ್ ಬಟನ್ ಒತ್ತಿದರೆ ಸಂಪೂರ್ಣ ಮಾಹಿತಿ ದೊರೆಯಲಿದೆ. ಪ್ರವಾಸಿಗರನ್ನು ಅವರು ತಂಗಿರುವ ಹೊಟೇಲ್ ನಲ್ಲಿಯೇ ಪಿಕಪ್ ಮಾಡುವ ವ್ಯವಸ್ಥೆ ಇದ್ದು ಮೈಸೂರಿಗರನ್ನು ಜಗನ್ಮೋಹನ ಅರಮನೆ ಆವರಣದಿಂದ ಕರೆದೊಯ್ಯಲಾಗುವುದು ಎಂದು ಹೇಳಿದರು.

ಪ್ರತಿದಿನ ಎರಡು ಅವಧಿಯಲ್ಲಿ ಪ್ರವಾಸ ಇರಲಿದ್ದು, ಎರಡು ಗಂಟೆಯ ಅವಧಿಯಲ್ಲಿ ಲಲಿತ ಮಹಲ್ ಪ್ಯಾಲೇಸ್, ಆಡಳಿತ ತರಬೇತಿ ಕೇಂದ್ರ, ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್, ರೇಸ್ ಕೋರ್ಸ್, ಸರ್ಕಾರಿ ಅತಿಥಿ ಗೃಹ, ವೆಲ್ಲಿಂಗ್‍ಟನ್ ಹೌಸ್, ಕ್ಲಾಕ್ ಟವರ್, ಪ್ರೀ ಮ್ಯಾಷನ್ ಕ್ಲಬ್, ಟೌನ್‍ಹಾಲ್, ಗಾಂಧಿ ಚೌಕ, ದೇವರಾಜ ಮಾರುಕಟ್ಟೆ, ಗುರುಸ್ವೀಟ್, ದೊಡ್ಡ ಗಡಿಯಾರ, ಲ್ಯಾನ್ಸ್‍ಡೌನ್ ಬಿಲ್ಡಿಂಗ್, ಮಹಾನಗರ ಪಾಲಿಕೆ, ಗನ್‍ಹೌಸ್ ಮೂಲಕ ಸಾಗಿ ಕೊನೆಯಲ್ಲಿ ಜಯಮಾರ್ತಾಂಡ ದ್ವಾರದಲ್ಲಿ ಕೊನೆಗೊಳ್ಳಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜನಾರ್ದನ್, ಪ್ರವೀಣ್, ಶಿವರಾಜು, ಕಿರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X