Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೊಲೀಸರು ಯೋಧರಂತೆ ಕರ್ತವ್ಯ...

ಪೊಲೀಸರು ಯೋಧರಂತೆ ಕರ್ತವ್ಯ ನಿರ್ವಹಿಸಬೇಕು: ರಾಜ್ಯಪಾಲ ವಜುಭಾಯಿ ವಾಲ

ವಾರ್ತಾಭಾರತಿವಾರ್ತಾಭಾರತಿ16 Sept 2017 9:48 PM IST
share
ಪೊಲೀಸರು ಯೋಧರಂತೆ ಕರ್ತವ್ಯ ನಿರ್ವಹಿಸಬೇಕು: ರಾಜ್ಯಪಾಲ ವಜುಭಾಯಿ ವಾಲ

ಬೆಂಗಳೂರು, ಸೆ. 16: ಗಡಿಯಲ್ಲಿ ದೇಶ ಕಾಯುವ ಯೋಧರ ರೀತಿಯಲ್ಲಿ ಪೊಲೀಸರು ರಾಷ್ಟ್ರ, ರಾಜ್ಯ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಬೇಕು. ತಮ್ಮ ಕರ್ತವ್ಯ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅನೈತಿಕ ಚಟುವಟಿಕೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ರಾಜ್ಯಪಾಲ ವಜುಬಾಯಿ ವಾಲ ಸಲಹೆ ನೀಡಿದ್ದಾರೆ.

ಶನಿವಾರ ರಾಜಭವನದ ಗಾಜಿನ ಮನೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೊಲೀಸರಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪೊಲೀಸರು ದಕ್ಷತೆಯಿಂದ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಗೃಹ ಇಲಾಖೆ ಮತ್ತು ರಾಜ್ಯ ಸರಕಾರದ ಘನತೆ ಹಾಗೂ ಗೌರವ ಹೆಚ್ಚುತ್ತದೆ ಎಂದರು.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ರಕ್ಷಣೆ ನೀಡುವುದು ಪೊಲೀಸರ ಕೆಲಸ. ಅದರಂತೆ ಜನಸಾಮಾನ್ಯರು ಪೊಲೀಸರ ಕರ್ತವ್ಯ ನಿರ್ವಹಿಸುತ್ತಾರೆ ಎಂಬುದನ್ನು ಅರಿತು ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸಬೇಕು ಎಂದ ಅವರು, ಭ್ರಷ್ಟಾಚಾರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ದೇಶ ಸೇವೆಯನ್ನು ಪ್ರಾಮಾಣಿಕತೆಯಿಂದ ಮಾಡುವುದಾಗಿ ಪೊಲೀಸರು ಪಣತೊಡಬೇಕು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಮಾಜದ ಶಾಂತಿ, ಸುವ್ಯವಸ್ಥೆಗೆ ಭಂಗ ತರುವ ಸಮಾಜಘಾತುಕರಿಗೆ ಕಾನೂನು ರೀತಿ ಶಿಕ್ಷೆ ಕೊಡಿಸುವುದು ಮತ್ತು ಸಮಾಜಘಾತುಕರಿಂದ ಜನಸಾಮಾನ್ಯರಿಗೆ ತೊಂದರೆಯಾಗದ ರೀತಿ ರಕ್ಷಣೆ ನೀಡುವುದು ಸರಕಾರದ ಮತ್ತು ಪೊಲೀಸರ ಕೆಲಸ. ಹೀಗಾಗಿ, ಪೊಲೀಸರು ಪ್ರಾಮಾಣಿಕತೆಯಿಂದ ಕ್ಷಿಪ್ರಗತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ತಮ್ಮ ಜವಾಬ್ದಾರಿಯನ್ನು ಅರಿತು ಪ್ರಾಮಾಣಿಕತೆಯಿಂದ ಮತ್ತು ದಕ್ಷತೆಯಿಂದ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ವಿಶಿಷ್ಟ ಸೇವಾ ಪದಕಕ್ಕೆ ರಾಜ್ಯ ಸರಕಾರವೇ ರಾಷ್ಟ್ರಪತಿಗೆ ಶಿಫಾರಸು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಆಯಾ ವರ್ಷವೇ ರಾಷ್ಟ್ರಪತಿಗಳ ಪದಕ ಪ್ರದಾನ ಸಮಾರಂಭ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರಕಾರವು ಪೊಲೀಸರಿಗೆ ವಸತಿ, ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆಗಳನ್ನು ಕಲ್ಪಿಸಿದ್ದು, 18 ವರ್ಷ ಸೇವೆ ಪೂರೈಸಿದವರಿಗೆ ಭಡ್ತಿ ನೀಡುವ ಮೂಲಕ ಕರ್ತವ್ಯದಲ್ಲಿ ಮತ್ತಷ್ಟು ಕಾರ್ಯ ತತ್ಪರತೆ ಮೂಡಿಸಲಾಗಿದ್ದು, ಈ ನಿಟ್ಟಿನಲ್ಲಿ 11ಸಾವಿರ ಪೊಲೀಸರಿಗೆ ಭಡ್ತಿ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಸ್‌ಚಂದ್ರ ಕುಂಠಿ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸುಭಾಸ್‌ಚಂದ್ರ, ಡಿಜಿ ಮತ್ತು ಐಜಿ ರೂಪಕ್‌ಕುಮಾರ್ ದತ್ತ ಸೇರಿ ಹಲವರು ಉಪಸ್ಥಿತರಿದ್ದರು.

ಈ ವೇಳೆ ಧೀರ್ಘಕಾಲದ ಪೊಲೀಸ್ ಸೇವೆಯಲ್ಲಿ ಅಸಾಧಾರಣ, ದಕ್ಷತೆ ಮತ್ತು ಅರ್ಪಣ ಮನೋಭಾವವನ್ನು ಪ್ರದರ್ಶಿಸಿದ ಪೊಲೀಸ್ ಅಧಿಕಾರಿಗಳಿಗೆ ನೀಡುವ ರಾಷ್ಟ್ರಪತಿಗಳ ಪೊಲೀಸ್ ಶಿಷ್ಟ ಸೇವಾ ಪದಕವನ್ನು 2014 ನೇ ಸಾಲಿಗೆ 3, 2015 ನೇ ಸಾಲಿಗೆ 7 ಮತ್ತು 2016 ನೇ ಸಾಲಿಗೆ 3 ಜನರಿಗೆ ಪದಕ ಪ್ರದಾನ ಮಾಡಲಾಯಿತು. ಅಲ್ಲದೆ, 20 ವರ್ಷ ಸೇವೆಯನ್ನು ಪೂರೈಸಿ ಉತ್ತಮ ಸಾಧನೆ ಪ್ರದರ್ಶಿಸಿದ 2014 ನೇ ಸಾಲಿಗೆ 17 ಮಂದಿ, 2015 ನೇ ಸಾಲಿಗೆ 38 ಮಂದಿ ಹಾಗೂ 2016 ನೇ ಸಾಲಿಗೆ 20 ಜನರಿಗೆ ಶ್ಲಾಘನೀಯ ಸೇವಾ ಪದಕ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X