Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮೀಣ ಕ್ರೀಡೆಗಳಿಂದ ಸೌಹಾರ್ದತೆ...

ಗ್ರಾಮೀಣ ಕ್ರೀಡೆಗಳಿಂದ ಸೌಹಾರ್ದತೆ ವೃದ್ಧಿ : ಮಹಮ್ಮದ್ ಮೋನು

'ಬಲೇ ಕೆಸರ್ಡು ಗೊಬ್ಬುಗ'

ವಾರ್ತಾಭಾರತಿವಾರ್ತಾಭಾರತಿ17 Sept 2017 7:37 PM IST
share
  • ಗ್ರಾಮೀಣ ಕ್ರೀಡೆಗಳಿಂದ ಸೌಹಾರ್ದತೆ ವೃದ್ಧಿ : ಮಹಮ್ಮದ್ ಮೋನು
  • ಗ್ರಾಮೀಣ ಕ್ರೀಡೆಗಳಿಂದ ಸೌಹಾರ್ದತೆ ವೃದ್ಧಿ : ಮಹಮ್ಮದ್ ಮೋನು

ಉಳ್ಳಾಲ, ಸೆ. 17: ಜಾತಿ, ಮತದ ಭೇದ-ಬಾವಗಳನ್ನು ಮೀರಿ ಶಾಂತಿ, ಸೌಹಾರ್ದತೆಯ ಜೊತೆಗೆ ನಮ್ಮ ನಾಡಿನ ಕೃಷಿ ಸಂಸ್ಕೃತಿಯನ್ನು ಬೆಸೆಯುವ ಗ್ರಾಮೀಣ ಕ್ರೀಡೆಗಳ ಆಯೋಜನೆಗಳು ಇಂದಿನ ದಿವಸಗಳಲ್ಲಿ ಅನಿವಾರ್ಯವಾಗಿದೆ ಎಂದು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್ ಅಭಿಪ್ರಾಯಪಟ್ಟರು.

ಜನಸೇವಾ ಯುವಕ ಮಂಡಲ ಅಂಬ್ಲಮೊಗರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದ.ಕ ಜಿಲ್ಲಾ ಪಂಚಾಯತ್ ಜಂಟಿ ಆಶ್ರಯದಲ್ಲಿ ಕುತ್ತಾರು ಅಂಬ್ಲಮೊಗರುವಿನ ದೋಟೆಮಾರು ಗದ್ದೆಯಲ್ಲಿ ರವಿವಾರ ನಡೆದ 'ಬಲೇ ಕೆಸರ್ಡು ಗೊಬ್ಬುಗ' ತುಳುನಾಡಿನ ಕೃಷಿ ಸಂಸ್ಕೃತಿಯನ್ನು ಬಿಂಬಿಸುವ ಕೆಸರುಗದ್ದೆ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತೀ ವರುಷವೂ ಜನಸೇವಾ ಯುವಕ ಮಂಡಲದ ಸದಸ್ಯರು ಎಲ್ಲಾ ಜಾತಿ, ಮತ ಪಕ್ಷದವರನ್ನು ಒಟ್ಟುಗೂಡಿಸಿಕೊಂಡು ತುಳುನಾಡಿನ ಸಂಸ್ಕೃತಿಯನ್ನು ನೆನಪಿಸುವ ಕ್ರೀಡಾಕೂಟಗಳನ್ನು ಆಚರಿಸುವುದರೊಂದಿಗೆ ಇಡೀ ದೇಶಕ್ಕೆ ಉತ್ತಮ ಸಂದೇಶವನ್ನು ಸಾರುತ್ತಿದ್ದಾರೆ. ಜಗತ್ತಿನಲ್ಲಿ ಬಲು ಮುಖ್ಯವಾಗಿ ಮಾನವ ಧರ್ಮವೊಂದೇ ಶ್ರೇಷ್ಟವಾಗಿದ್ದು, ಮಾನವೀಯ ಮನೋಭಾವವನ್ನು ಪರಸ್ಪರ ಬಲಗೊಳಿಸಲು ಇಂತಹ ಕ್ರೀಡಾಕೂಟಗಳೇ ಉತ್ತಮ ವೇದಿಕೆಯಾಗಿದೆ ಎಂದರು.

ಅಧ್ಯಕ್ಷೀಯ ಸ್ಥಾನವಹಿಸಿದ್ದ ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ ಮಾತನಾಡಿ ತುಳುನಾಡಿನ ಕೃಷಿಕ ಕುಟುಂಬದ ಯುವ ಪೀಳಿಗೆಯಿಂದು ವೈಟ್ ಕಾಲರ್ ಹುದ್ದೆಗಳನ್ನು ಅರಸಿ ನಗರದಲ್ಲಿ ನೆಲೆಸಿ ಕೃಷಿಯಿಂದ ವಿಮುಖರಾಗಿದ್ದಾರೆ. ಸರಕಾರವೂ ವಿವಿಧ ಯೋಜನೆ, ಕಾರ್ಯಕ್ರಮಗಳ ಮೂಲಕ ಕೃಷಿ ಮತ್ತು ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುತ್ತಿದ್ದು ಸಂಘ, ಸಂಸ್ಥೆಗಳು ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವುದರಿಂದಲಾದರೂ ಮಕ್ಕಳು, ಯುವ ಜನತೆಯಲ್ಲಿ ಕೃಷಿಯಲ್ಲಿ ಆಸಕ್ತಿ ಮೂಡುವಂತಾಗಬೇಕೆಂದು ಆಶಿಸಿದರು.

ಉದ್ಯಮಿ ಸತೀಶ್ ಮುಂಚೂರು, ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಅಂಬ್ಲಮೊಗರು ಪಡ್ಯಾರಮನೆ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನದ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಮಂಗಳೂರು, ತುಳು ಚಿತ್ರನಟ ಅರವಿಂದ ಬೋಳಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ ಪ್ರದೀಪ್ ಡಿಸೋಜಾ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಚಂದ್ರಶೇಖರ್ ಉಚ್ಚಿಲ್, ಕೋಟ್ರಗುತ್ತು ಲಕ್ಷ್ಮೀನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ಪದ್ಮನಾಭ ರೈ, ಅಂಬ್ಲಮೊಗರು ಗ್ರಾ.ಪಂ ಅಧ್ಯಕ್ಷ ಮಹಮ್ಮದ್ ರಫೀಕ್, ಸದಸ್ಯರಾದ ದಯಾನಂದ ಶೆಟ್ಟಿ, ರಾಜೀವಿ, ರೇಷ್ಮಾ ವಿಲ್ಫ್ರೆಡ್, ನವೀನ್ ಡಿಸೋಜಾ, ಜನಸೇವಾ ಯುವಕ ಮಂಡಲದ ಗೌರವಾಧ್ಯಕ್ಷರಾದ ಸಂಜೀವ ಶೆಟ್ಟಿ ಪಡ್ಯಾರಮನೆ,ಗೌರವ ಸಲಹೆಗಾರರಾದ ವಿಜಯಾ, ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಅಂಬ್ಲಮೊಗರು, ಪದಾಧಿಕಾರಿಗಳಾದ ಸುರೇಶ್ ಅಂಬ್ಲಮೊಗರು, ಹರೀಶ್ ಅಂಬ್ಲಮೊಗರು, ಲಕ್ಷ್ಮೀನಾರಾಯಣ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X