Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ : ರೊಹಿಂಗ್ಯಾ ನಿರಾಶ್ರಿತರಲ್ಲಿದೆ...

ದಿಲ್ಲಿ : ರೊಹಿಂಗ್ಯಾ ನಿರಾಶ್ರಿತರಲ್ಲಿದೆ ಗೃಹ ಸಚಿವಾಲಯ ನೀಡಿರುವ ದೀರ್ಘಾವಧಿ ವೀಸಾ..!

ವಾರ್ತಾಭಾರತಿವಾರ್ತಾಭಾರತಿ17 Sept 2017 8:43 PM IST
share
ದಿಲ್ಲಿ : ರೊಹಿಂಗ್ಯಾ ನಿರಾಶ್ರಿತರಲ್ಲಿದೆ ಗೃಹ ಸಚಿವಾಲಯ ನೀಡಿರುವ  ದೀರ್ಘಾವಧಿ ವೀಸಾ..!

ಹೊಸದಿಲ್ಲಿ, ಸೆ.17: ಮ್ಯಾನ್ಮಾರ್‌ನಿಂದ ವಲಸೆ ಬಂದಿರುವ ರೊಹಿಂಗ್ಯಾ ಮುಸ್ಲಿಮ್ ನಿರಾಶ್ರಿತರನ್ನು ಗಡೀಪಾರು ಮಾಡಲು ಭಾರತ ಆದೇಶಿಸಿದೆ. ಆದರೆ ದಿಲ್ಲಿಯಲ್ಲಿರುವ ರೊಹಿಂಗ್ಯ ಮುಸ್ಲಿಮರ ಬಳಿ ಗೃಹ ಸಚಿವಾಲಯ ನೀಡಿರುವ ದೀರ್ಘಾವಧಿಯ ವೀಸಾ ಇರುವುದಾಗಿ ವರದಿಗಳು ತಿಳಿಸಿವೆ.

ಸುದ್ದಿ ಸಂಸ್ಥೆಯೊಂದರ ಪ್ರಕಾರ, ಆಗ್ನೇಯ ದಿಲ್ಲಿಯಲ್ಲಿರುವ ಶರಮ್ ವಿಹಾರ್ ಹಾಗೂ ಮದನ್‌ಪುರ್ ಖಾದರ್ ಎಂಬಲ್ಲಿ ಸುಮಾರು 1,000 ರೊಹಿಂಗ್ಯರು ನೆಲೆಸಿದ್ದು ಇವರಲ್ಲಿ ಕನಿಷ್ಟ 25 ಮಂದಿಯ ಬಳಿ ದೀರ್ಘಾವಧಿಯ ವೀಸಾ ಇದೆ.

  ವೀಸಾ ಪಡೆಯಲು ತಾವು ಬಹಳಷ್ಟು ಶ್ರಮ ಪಟ್ಟಿರುವುದಾಗಿ ಶರಮ್‌ವಿಹಾರ್ ಶಿಬಿರದಲ್ಲಿರುವ ಮುಹಮ್ಮದ್ ಶಿರಾಝುಲ್ಲ ಎಂಬ ವ್ಯಕ್ತಿ ತಿಳಿಸಿದ್ದಾರೆ. “ನಮ್ಮ ಬಳಿ ಭಾರತ ಸರಕಾರ ನೀಡಿರುವ ದೀರ್ಘಾವಧಿ ವೀಸಾ ಇದೆ. ವಿಶ್ವಸಂಸ್ಥೆಯ ವಲಸಿಗರ ವಿಭಾಗದ ಹೈಕಮಿಷನರ್‌ರಿಂದ ಮೊದಲು ಸಮರ್ಥನೆ ಪತ್ರ ಪಡೆಯಬೇಕು. ಆ ಬಳಿಕ ನಾವು ಗೃಹ ಸಚಿವಾಲಯದಲ್ಲಿರುವ ವಿದೇಶೀಯರ ನೋಂದಣಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅವರು ಸೂಚಿಸಿದ ದಿನಾಂಕದಂದು ನಮ್ಮ ಮಕ್ಕಳ ಸಹಿತ ಅಲ್ಲಿಗೆ ತೆರಳಿ ಬೆರಳಚ್ಚಿನ ಗುರುತು ನೀಡಿದ ಬಳಿಕ ಮತ್ತೊಂದು ದಿನಾಂಕ ಸೂಚಿಸಲಾಗುತ್ತದೆ. ಅಂದು ಸಂದರ್ಶನ ನಡೆಸಿದ ಬಳಿಕ ನಮಗೆ ದೀರ್ಘಾವಧಿಯ ವೀಸಾ ನೀಡಲಾಗುತ್ತದೆ. ಇಷ್ಟೆಲ್ಲಾ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಟ 6 ತಿಂಗಳು ಬೇಕಾಗುತ್ತದೆ” ಎಂದವರು ತಿಳಿಸಿದ್ದಾರೆ. 2014ರಲ್ಲಿ ತನಗೆ ವೀಸಾ ದೊರಕಿದ್ದು ಪ್ರತೀ ವರ್ಷ ಇದನ್ನು ನವೀಕರಿಸಲಾಗುತ್ತದೆ ಎಂದವರು ತಿಳಿಸಿದ್ದಾರೆ.

 ವಿಶ್ವಸಂಸ್ಥೆಯ ‘ನಿರಾಶ್ರಿತರ ಕಾನೂನಿಗೆ’ ಭಾರತ ಸಹಿಹಾಕಿಲ್ಲ. ಆದರೆ ಕಿರುಕುಳ ತಡೆಯಲಾರದೆ ದೇಶ ಬಿಟ್ಟು ಓಡಿಬಂದವರು ದೀರ್ಘಾವಧಿಯ ವೀಸಾ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಗೃಹ ಸಚಿವಾಲಯದ ಮಾರ್ಗದರ್ಶಿ ಸೂತ್ರದಲ್ಲಿ ತಿಳಿಸಲಾಗಿದೆ. ಆದರೆ ರೊಹಿಂಗ್ಯ ಮುಸ್ಲಿಮರು ಈ ಗುಂಪಿಗೆ ಸೇರದ ಕಾರಣ ಅವರು ಭಾರತವನ್ನು ಅಕ್ರಮವಾಗಿ ಪ್ರವೇಶಿಸಿದ್ಧಾರೆಂದು ಪರಿಗಣಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

    ಸರಕಾರದ ಈ ವಾದ ಸರಿಯಲ್ಲ ಎಂದು ಕೆಲವು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಎಲ್ಲಾ ನಿರಾಶ್ರಿತರೂ ಪಾಸ್‌ಪೋರ್ಟ್ ಅಥವಾ ವೀಸಾ ಇಲ್ಲದೆ ಬರುವ ಕಾರಣ ತಾಂತ್ರಿಕವಾಗಿ ಅವರೆಲ್ಲಾ ‘ಅಕ್ರಮ ’ ವಲಸಿಗರಾಗುತ್ತಾರೆ. ಒಮ್ಮೆ ಗಡಿದಾಟಿ ಬಂದ ನಿರಾಶ್ರಿತರನ್ನು, ಜೀವಕ್ಕೆ ಅಪಾಯ ಇರುವ ಸ್ಥಳಕ್ಕೆ ಗಡೀಪಾರು ಮಾಡಬಾರದು. ಇದು ಅವರಿಗೆ ಮರಣದಂಡನೆ ವಿಧಿಸಿದ ಕ್ರಮವಾಗುತ್ತದೆ ಎಂದು ಅಂತಾರಾಷ್ಟ್ರೀಯ ಕಾನೂನು ಹಾಗೂ ಭಾರತದ ಕಾನೂನಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಹಿರಿಯ ವಕೀಲ ಕಾಲಿನ್ ಗೋನ್ಸಾಲ್ವಿಸ್ ಹೇಳಿದ್ದಾರೆ.

 ಯಾವುದೇ ರೊಹಿಂಗ್ಯರಿಗೆ ದೀರ್ಘಾವಧಿ ವೀಸಾ ನೀಡಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಭಾರತದ ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ ಜೈಪುರದಲ್ಲಿ ನೆಲೆಸಿರುವ ರೊಹಿಂಗ್ಯರು, ಸ್ಥಳೀಯರ ಪ್ರೋತ್ಸಾಹದಿಂದ ದೀರ್ಘಾವಧಿ ವೀಸಾ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ದೀರ್ಘಾವಧಿ ವೀಸಾ ಪಡೆಯುವಂತೆ ಅವರನ್ನು ಪ್ರೇರಿಸಲಾಗಿದೆ. ಒಮ್ಮೆ ನೋಂದಣಿಗೊಂಡರೆ ಅವರ ಬಗ್ಗೆ ವಿವರವನ್ನು ಆನ್‌ಲೈನ್‌ನಲ್ಲಿ ಪಡೆಯಬಹುದು ಹಾಗೂ ಅವರು ದೇಶದಲ್ಲಿ ನಡೆಸುವ ಚಲನವಲನದ ಬಗ್ಗೆ ಮಾಹಿತಿ ಪಡೆಯಲು ಸುಲಭವಾಗುತ್ತದೆ ಎಂದು ಜೈಪುರದ ಎಎಸ್‌ಪಿ ರಾಮ್‌ಜೀವನ್ ಗುಪ್ತ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X